ನಿಜವಾದ ‘ಚಾಯ್ ವಾಲಾ’ ನಮ್ಮೊಂದಿಗಿದ್ದಾರೆ : ಪ್ರಿಯಾಂಕಗೆ ರಾಜನಾಥ್ ಸಿಂಗ್ ಚಾಟಿ ಏಟು


Team Udayavani, Mar 23, 2021, 6:45 PM IST

Real and certified ‘chaiwala’ is with us, Rajnath Singh takes dig at Priyanka Gandhi

ನವ ದೆಹಲಿ : ಯಾರು ಮೋದಿಯವರನ್ನು ಚಾಯ್ ವಾಲ ಎಂದು ಕರೆದಿದ್ದರೋ ಅವರೆ ಇಂದು ಚಹಾದ ಎಲೆಗಳನ್ನು ಕೀಳುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್,  ರಾಷ್ಟ್ರೀಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಪರೋಕ್ಷವಾಗಿ ಕುಟುಕಿದ್ದಾರೆ.

ಈ ಹಿಂದೆ ನಮ್ಮ ಪ್ರಧಾನಿಯವರನ್ನು ಯಾರು ಚಾಯ್ ವಾಲಾ ಎಂದು ಕರೆದಿದ್ದರೋ ಅವರೇ ಇಂದು ಚಹಾದ ಎಲೆಗಳನ್ನು ಕೀಳುತ್ತಿದ್ದಾರೆ, ಮಾರುತ್ತಿದ್ದಾರೆ. ಚಹಾ ತೋಟಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ಆದರೇ, ಜಾಗರೂಕತರಾಗಿರಿ, ನಿಜವಾದ ಹಾಗೂ ಪ್ರಾಮಾಣಿಕೃತ ‘ಚಾಯ್ ವಾಲಾ’ ನಮ್ಮೊಂದಿಗಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಓದಿ :  ಸಿಡಿ ವಿಚಾರವಾಗಿ ಸದನದ ಚರ್ಚೆಯಲ್ಲಿ ನಾನೂ ಭಾಗಿಯಾಗಬೇಕಿತ್ತು : ಬಾಲಚಂದ್ರ ಜಾರಕಿಹೊಳಿ

ಅಸ್ಸಾಂ ನ ಚುನಾವಾಣಾ ಮತ ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿ ವಾದ್ರಾ ಮಾರ್ಚ್ 2 ರಂದು ಬಿಸ್ವಂತ್ ನಲ್ಲಿ ಚಹಾ ತೋಟದ ಕೆಲಸಗಾರರೊಂದಿಗೆ ತೊಡಗಿಸಿಕೊಂಡಿದ್ದರು. ರಾಷ್ಟ್ರೀಯ ಕಾಂಗ್ರೆಸ್ ನ ಅಧಿಕೃತ ಟ್ವೀಟರ್ ನಲ್ಲಿ ಪ್ರಿಯಾಂಕ ಚಹಾ ತೊಟದಲ್ಲಿ ಕೆಲಸ ಮಾಡುವವರೊಂದಿಗೆ ಸೇರಿಕೊಂಡು ಕೆಲಸ ಮಾಡಿದ ಫೋಟೋಗಳನ್ನು, ವೀಡಿಯೋಗಳನ್ನು ಹಂಚಿಕೊಂಡಿತ್ತು.

ಅಸ್ಸಾಂನ ಲುಮ್ಡಿಂಗ್ ನಲ್ಲಿ ನಡೆದ ಚುನಾವಣಾ ಮತ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಂಗ್, ಅಕ್ರಮ ವಲಸೆಯ ಬಗ್ಗೆ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಬೇಕೆಂದು ಎಲ್ಲರೂ ಆಗ್ರಹಿಸಿದರು. ನೆರೆಯ ದೇಶದಿಂದ ಒಳನುಸುಳುವಿಕೆಯನ್ನು ತಡೆಯಲು ಬಿಜೆಪಿ ಅಸ್ಸಾಂನ ಇಂಡೋ-ಬಾಂಗ್ಲಾ ಗಡಿಯುದ್ದಕ್ಕೂ ಎಲೆಕ್ಟ್ರಾನಿಕ್ ಕಣ್ಗಾವಲು ಸ್ಥಾಪಿಸಿದೆ ಎಂದು ಹೇಳಿದ್ದಾರೆ.

ಅಕ್ರಮ ವಲಸೆಯ ಬಗ್ಗೆ ರಾಜಕೀಯ ಮಾಡುವುದಕ್ಕೆ ನಾವು ಅನುಮತಿಸುವುದಿಲ್ಲ. ಅಸ್ಸಾಂ ನ ಸಂಸ್ಕೃತಿಯನ್ನು ನಾವು ಉಳಿಸುತ್ತೇವೆ. ನಮ್ಮಲ್ಲಿ ಯಾವುದಾದರೂ ದುರುದ್ದೇಶ ಇದ್ದಿದ್ದರೆ, ಡಾ. ಭೂಪೆನ್ ಹಜ್ಹರಿಕಾ ಅವರಿಗೆ ನಾವು ಭಾರತವನ್ನು ನೀಡಿ ಗೌರವಿಸುತ್ತಿರಲಿಲ್ಲ ಎಂದು ಸಿಂಗ್ ಹೇಳಿರುವುದನ್ನು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇನ್ನು, ಅಸ್ಸಾಂ ನ್ನು ನಾವು ನೆರೆ ಮುಕ್ತ ರಾಜ್ಯವನ್ನಾಗಿ ಮಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಿಂಗ್ ಹೇಳಿದ್ದಾರೆ.

ಏತನ್ಮಧ್ಯೆ, ಬಿಜೆಪಿ ವಿಧಾನ ಸಭಾ ಚುನಾವಣೆಯ ತನ್ನ ಪ್ರಣಾಳಿಕೆಯನ್ನು ಇಂದು(ಮಂಗಳವಾರ, ಮಾ. 23) ಬಿಡುಗಡೆ ಮಾಡಿದೆ. ‘ಆತ್ಮ ನಿರ್ಭರ್ ಅಸ್ಸಾಂ’ ಗಾಗಿ ಹತ್ತು ಬದ್ಧತೆಗಳನ್ನು ಕೂಡ ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ ನೀಡಿದೆ.

ಓದಿ : ಉದಯವಾಣಿ ವಿಶೇಷ ಸಂದರ್ಶನದಲ್ಲಿ; ಅಜ್ಜಿಗೆ ಜೋಗುಳ ಹಾಡಿದ ಗಾಯಕ ಪ್ರವೀಣ್ ಆಳ್ವ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.