45 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸ್ವಾಗತಾರ್ಹ ನಡೆ


Team Udayavani, Mar 24, 2021, 6:40 AM IST

45 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸ್ವಾಗತಾರ್ಹ ನಡೆ

ದೇಶಾದ್ಯಂತ ಲಸಿಕೆಯ ಲಕ್ಷಾಂತರ ಡೋಸ್‌ಗಳು ಬಳಕೆಯಾಗದೇ ವ್ಯರ್ಥವಾಗುತ್ತಿರುವ ಸುದ್ದಿ ಹೊರಬೀಳಲಾರಂಭಿಸುತ್ತಿದ್ದಂತೆಯೇ ಫ‌ಲಾನುಭವಿಗಳು ಬರಲಿಲ್ಲವೆಂದು ಪೋಲು ಮಾಡುವ ಬದಲು 45 ವರ್ಷಕ್ಕೂ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಬೇಕೆಂಬ ಸಲಹೆ ಕೇಳಿಬಂದಿತ್ತು. ಇದಷ್ಟೇ ಅಲ್ಲದೇ ದೇಶದಲ್ಲಿ ಏಕಾಏಕಿ ಮತ್ತೆ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎಪ್ರಿಲ್‌ 1 ರಿಂದ 45 ವರ್ಷಕ್ಕೆ ಮೇಲ್ಪಟ್ಟವರೆಲ್ಲರಿಗೂ ಲಸಿಕೆ ನೀಡುವ ಮಹತ್ತರ ಘೋಷಣೆ ಮಾಡಿರುವುದು ಸ್ವಾಗತಾರ್ಹ ಹೆಜ್ಜೆ. ಇದುವರೆಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ 45ರಿಂದ 59 ವರ್ಷ ವಯಸ್ಸಿನವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು.

ಇದುವರೆಗೂ ದೇಶದಲ್ಲಿ 25-45 ವರ್ಷ ವಯಸ್ಸಿನವರಲ್ಲೇ ಅತೀಹೆಚ್ಚು ಸೋಂಕು ಕಾಣಿಸಿಕೊಂಡಿದೆ. ಇವರು ಸೂಪರ್‌ಸ್ಪ್ರೆಡರ್‌ಗಳಾಗಿ ಬದಲಾಗಿರುವುದನ್ನು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿಯ ವರದಿ ಹೇಳುತ್ತಲೇ ಬಂದಿದೆ. ಅಂದರೆ ಕೋವಿಡ್‌ ಪ್ರಕರಣಗಳು ವೇಗವಾಗಿ ಹಬ್ಬುವುದರಲ್ಲಿ ಈ ವಯೋಮಾನದವರ ಸಂಖ್ಯೆಯೂ ಅಧಿಕವಿದೆ. ಹೀಗಾಗಿ ಲಸಿಕೆಯನ್ನು 45ವರ್ಷ ಮೇಲ್ಪಟ್ಟ ವರಿಗೆಲ್ಲ ನೀಡುವ ನಿರ್ಧಾರ ಸ್ವಾಗತಾರ್ಹ.

ಆತಂಕದ ಸಂಗತಿಯೆಂದರೆ ಅಕ್ಟೋಬರ್‌ನಿಂದ-ಫೆಬ್ರವರಿ ಎರಡನೇ ವಾರದವರೆಗೂ ಗಮನಾರ್ಹವಾಗಿ ಇಳಿಮುಖವಾಗಿದ್ದ ಕೋವಿಡ್‌ ಪ್ರಕರಣಗಳು ಈಗ ಕೆಲವು ದಿನಗಳಿಂದ ನಿತ್ಯ 40 ಸಾವಿರಷ್ಟು ವರದಿ ಯಾಗುತ್ತಿವೆ. ರಾಜ್ಯದಲ್ಲೇ ಮಂಗಳವಾರ ಕೋವಿಡ್‌ ಪ್ರಕರಣಗಳ ಸಂಖ್ಯೆ 2,000 ದಾಟಿದೆ. ಒಂದೇ ದಿನದಲ್ಲಿ ಇಷ್ಟು ಪ್ರಮಾಣದ ಪ್ರಕರಣಗಳು ನಮ್ಮಲ್ಲಿ ಕಳೆದ ನವೆಂಬರ್‌ನಲ್ಲಿ ವರದಿಯಾಗಿತ್ತು! ಹೀಗಾಗಿ ಹೆಚ್ಚುತ್ತಿರುವ ಸಾಂಕ್ರಾಮಿಕದ ರೋಗವನ್ನು ತಡೆಗಟ್ಟಲು ಲಸಿಕೆ ವಿತರಣೆಯನ್ನು ವೇಗಗೊಳಿಸುವ ಜತೆಯಲ್ಲೇ ಫ‌ಲಾನುಭವಿಗಳ ವಯೋಮಿತಿಯನ್ನು ಬದಲಿಸುವ ಅಗತ್ಯವೂ ಇತ್ತು.

ಈ ನಿಟ್ಟಿನಲ್ಲಿ ಎಪ್ರಿಲ್‌1 ರಿಂದ ಎಪ್ರಿಲ್‌ 30ರ ವರೆಗೆ ಅನ್ವಯ ವಾಗುವಂತೆ ಹೊಸ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿರುವ ಕೇಂದ್ರ ಸರಕಾರ, ಲಸಿಕೆ ಪ್ರಕ್ರಿಯೆಗೆ ವೇಗ ನೀಡುವಂತೆಯೂ ರಾಜ್ಯ ಸರಕಾರಗಳಿಗೆ ಸಲಹೆ ನೀಡಿದೆ. ಅಲ್ಲದೇ ಆರ್‌ಟಿ-ಪಿಸಿಆರ್‌ ಪರೀಕ್ಷೆ ಗಳನ್ನು ಹೆಚ್ಚಿಸಬೇಕು ಹಾಗೂ ಸೋಂಕಿತರನ್ನು ಕ್ವಾರಂಟೈನ್‌ ಮಾಡಿ, ಅವರ ಸಂಪರ್ಕಕ್ಕೆ ಬಂದವರನ್ನು ಶೀಘ್ರದಲ್ಲೇ ಪತ್ತೆಹಚ್ಚಬೇಕೆಂದೂ ಹೇಳಿದೆ.

ಆರಂಭಿಕ ಸಮಯದಲ್ಲಿ ಭಾರತ ಕೋವಿಡ್‌ ತಡೆಯಲ್ಲಿ ತುಸು ಯಶಸ್ಸು ಸಾಧಿಸಿತ್ತು ಎಂದರೆ ಅದಕ್ಕೆ ವ್ಯಾಪಕವಾಗಿ ನಡೆದ ಟೆಸ್ಟಿಂಗ್‌ ಮತ್ತು ಟ್ರೇಸಿಂಗ್‌ ಕಾರಣ. ಆದರೆ ಈಗ ಲಸಿಕೆ ಬಂದಿದೆಯಾದರೂ ಸೋಂಕಿತರ ಸಂಪರ್ಕಕ್ಕೆ ಬಂದವರ ಪತ್ತೆ ಕಾರ್ಯ ಅಜಮಾಸು ಕಡಿಮೆಯಾಗಿದೆ. ಈ ವಿಚಾರದಲ್ಲೂ ಸರಕಾರ, ಸ್ಥಳೀಯಾಡಳಿತಗಳು ಮತ್ತಷ್ಟು ಸಕ್ರಿಯವಾಗುವ ಅಗತ್ಯವಿದೆ. ಒಟ್ಟಲ್ಲಿ ಲಸಿಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಅತ್ಯಂತ ಎಚ್ಚರಿಕೆಯಿಂದ ಇರಬೇಕಾದ ಜವಾಬ್ದಾರಿ ಎಲ್ಲರ ಮೇಲೂ ಇದೆ. ಈಗ ಲಸಿಕೆಯ ಫ‌ಲಾನುಭವಿಗಳ ವಯೋಮಿತಿಯನ್ನು ಇಳಿಕೆ ಮಾಡಿರುವುದರಿಂದ ಈ ವಿಚಾರದಲ್ಲಿ ಜನರೂ ಅಸಡ್ಡೆ ಮಾಡದೇ ಕೂಡಲೇ ತಮ್ಮ ಹೆಸರನ್ನು ನೋಂದಾಯಿಸಿ ಲಸಿಕೆ ಪಡೆಯುವಂತಾಗಲಿ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.