ಹೆಸರಿಗೆ ಮಾತ್ರ ಹೈಟೆಕ್‌; ಇರೋದು ಓಬಿರಾಯನ ಕಾಲದ ವ್ಯವಸ್ಥೆ


Team Udayavani, Mar 24, 2021, 3:20 AM IST

ಹೆಸರಿಗೆ ಮಾತ್ರ ಹೈಟೆಕ್‌; ಇರೋದು ಓಬಿರಾಯನ ಕಾಲದ ವ್ಯವಸ್ಥೆ

ಬೈಂದೂರು: ತಾಲೂಕು ಕೇಂದ್ರವಾದ ಬೈಂದೂರಿನ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಳೆದೊಂದು ತಿಂಗಳಿಂದ ತಾಂತ್ರಿಕ ಸಮಸ್ಯೆಯಿಂದಾಗಿ ಜನಸಾಮಾನ್ಯರು ಹೈರಾಣಾಗಿದ್ದು ಆಡಳಿತಕ್ಕೆ ಹಿಡಿಶಾಪ ಹಾಕುವಂತಾಗಿದೆ. ಹೆಸರಿಗೆ ಮಾತ್ರ ಹೈಟೆಕ್‌ ಆಡಳಿತ, ಕಚೇರಿಯಲ್ಲಿ ಮಾತ್ರ ಓಬಿರಾಯನ ಕಾಲದ
ವ್ಯವಸ್ಥೆ ಇದೆ ಎನ್ನುವುದು ಸಾಮಾನ್ಯ ಜನರ ಅಳಲಾಗಿದೆ.

ನಿರಂತರ ಕೈ ಕೊಡುತ್ತಿರುವ ಸರ್ವರ್‌
ಬೈಂದೂರಿನ ಜನರ ಪಾಲಿಗೆ ನೋಂದಣಿ ಎನ್ನುವುದು ಗಗನ ಕುಸುಮದಂತೆ ಭಾಸವಾಗಿದೆ. ಬೆಂಗಳೂರಿಗೆ ತೆರಳಿಯಾದರೂ ಕಚೇರಿ ಕೆಲಸ ಮಾಡಿ ಬರಬಹುದು. ಆದರೆ ಬೈಂದೂರಿನ ಕಚೇರಿಗಳಲ್ಲಿ ಸಣ್ಣ ಕೆಲಸವೂ ಆಗುತ್ತಿಲ್ಲ. ತಾಲೂಕು ಕೇಂದ್ರದ ಪ್ರಮುಖ ನೋಂದಣಿ ಕಚೇರಿಯಲ್ಲಿ ಸರ್ವರ್‌ ಇದ್ದರೆ ಕಂಪ್ಯೂಟರ್‌ ಸರಿ ಇರುವು ದಿಲ್ಲ, ಕಂಪ್ಯೂಟರ್‌ ಸರಿ ಇದ್ದರೆ ಸರ್ವರ್‌ ಸಮಸ್ಯೆ. ಒಟ್ಟಾರೆಯಾಗಿ ಸಾಲದ ನೋಂದಣಿ, ಬ್ಯಾಂಕ್‌ ವ್ಯವಹಾರ, ಸಾಲುಪಟ್ಟಿ, ಭೂಮಿ ನೋಂದಣಿ ಸೇರಿದಂತೆ ಹತ್ತಾರು ವ್ಯವಹಾರಗಳಿಗೆ ನೂರಾರು ಜನರು ಕಳೆದ ಒಂದು ತಿಂಗಳಿಂದ ಬೈಂದೂರಿನ ಕಚೇರಿಗೆ ಅಲೆಯುವಂತಾಗಿದೆ.

ನಿಗದಿಪಡಿಸಿದ ನೋಂದಣಿಗಳು ಬಾಕಿ
ಕಳೆದ ಬಾರಿ ರಾಜ್ಯ ವ್ಯಾಪ್ತಿ ನೋಂದಣಿ ಸಮಸ್ಯೆ ಇರುವುದನ್ನು ಸರಿಪಡಿಸಿದ ಬಳಿಕ ಸೋಮವಾರ ಕಡತವೊಂದು ಕಂಪ್ಯೂಟರ್‌ನಲ್ಲಿ ಬಾಕಿಯಾದ ಹಿನ್ನೆಲೆಯಲ್ಲಿ ನಿಗದಿಪಡಿಸಿದ ನೋಂದಣಿಗಳು ಬಾಕಿ ಉಳಿದು ಬಿಟ್ಟಿದೆ. ಕರಾವಳಿ ಭಾಗದಲ್ಲಿ ಒಂದು ಕುಟುಂಬದಲ್ಲಿ ನೂರಾರು ಸದಸ್ಯರಿರುತ್ತಾರೆ.ಜಾಗ ವಿಕ್ರಯಿಸುವಾಗ ಎಲ್ಲ ಸದಸ್ಯರ ಸಹಿ ಬೇಕಾಗಿರುವುದರಿಂದ ವಯೋವೃದ್ಧರನ್ನು ಕೂಡ ಮುಂಚಿತವಾಗಿ ಕಚೇರಿಗೆ ಕರೆ ತಂದು ಕುಳ್ಳಿರಿಸಿ ಕಾಯುವುದು ನಿತ್ಯ ಕತೆ ಯಾಗಿದೆ. ಅದರಲ್ಲೂ ನೋಂದಣಿ ಕಚೇರಿಯಲ್ಲಿ ಮೂಲ ಸೌಕರ್ಯಗಳಿಲ್ಲದೆ ಮಹಿಳೆಯರು, ಹಿರಿಯರು ಫ‌ಜೀತಿ ಪಡುವಂತಾಗಿದೆ. ದೂರದ ಊರಿನಿಂದ ನೋಂದಣಿಗಾಗಿ ಒಂದು ದಿನದ ಮಟ್ಟಿಗೆ ಬಂದವರ ಪರಿಸ್ಥಿತಿ ಹೇಳತೀರದಾಗಿದೆ.

ತಾಲೂಕು ಕಚೇರಿಯಲ್ಲಿ ಸಿಬಂದಿಯಿಲ್ಲ
ನೋಂದಣಿ ಕಚೇರಿ ಪರಿಸ್ಥಿತಿ ಈ ರೀತಿಯಾದರೆ ಇನ್ನು ತಾಲೂಕು ಕಚೇರಿ ಅವ್ಯವಸ್ಥೆ ಹೇಳತೀರದಾಗಿದೆ. ಕಳೆದ ಹಲವು ದಿನಗಳಿಂದ ಹರತಾಳ ನಡೆಸುವ ಸರ್ವೇ ಸಿಬಂದಿಯಿಂದಾಗಿ ತಟಸ್ಥವಾದರೆ, ಪ್ರಮುಖ ಕಚೇರಿಯಲ್ಲಿ ಸಿಬಂದಿ ಕೊರತೆಯಿಂದ ಇರುವ ಮೂರ್‍ನಾಲ್ಕು ಸಿಬಂದಿ ಅಧಿಕ ಒತ್ತಡದ ಕೆಲಸ ನಿರ್ವಹಿಸುವಂತಾಗಿದೆ. ಈ ಕುರಿತು ಸುದಿನ ಹಿಂದೆ ಕೂಡ ವರದಿ ಮಾಡಿತ್ತು. ಇದುವರೆಗೆ ಬೈಂದೂರಿನಲ್ಲಿ ಖಾಯಂ ತಹಶೀಲ್ದಾರರು ಕೂಡ ಇಲ್ಲ, ಕೆಲಸದ ಒತ್ತಡದಿಂದ ತಾಲೂಕು ಕಚೇರಿ ಸಿಬಂದಿಯೋರ್ವ ಹೃದಯಾಘಾತ ಉಂಟಾಗಿ ಆಸ್ಪತ್ರೆ ಸೇರಿರುವ ಘಟನೆ ಕೂಡ ನಡೆದಿದೆ. ಆದರೂ ಸಹ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ.
ಒಟ್ಟಾರೆಯಾಗಿ ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಜನಪ್ರತಿನಿಧಿಗಳ ಫಾಲೋಅಫ್‌ ಕೊರತೆಯಿಂದ ತಾಲೂಕು ಕೇಂದ್ರದ ಆಡಳಿತ ವ್ಯವಸ್ಥೆ ಹಳಿ ತಪ್ಪಿರುವುದು ಬೈಂದೂರಿನ ಭವಿಷ್ಯದ ಬೆಳವಣಿಗೆಗೆ ಹೊಡೆತ ನೀಡುವು ದರಲ್ಲಿ ಎರಡು ಮಾತಿಲ್ಲ ಎನ್ನುವುದು ಸಾರ್ವತ್ರಿಕ ಅಭಿಪ್ರಾಯವಾಗಿದೆ.

ತಾತ್ಕಾಲಿಕ ತಾಂತ್ರಿಕ ಸಮಸ್ಯೆ
ಬೈಂದೂರು ಕಚೇರಿಯಲ್ಲಿ ತಾತ್ಕಾಲಿಕ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಇದರಿಂದಾಗಿ ನೋಂದಣಿ ವಿಳಂಬವಾಗಿದೆ. ಕಳೆದ ವಾರ ಸರ್ವರ್‌ ಸಮಸ್ಯೆ ರಾಜ್ಯದ ಎಲ್ಲ ಕಡೆ ಉಂಟಾಗಿದ್ದು ಪ್ರಸ್ತುತ ಕಂಪ್ಯೂಟರ್‌ ಸಮಸ್ಯೆ ಸರಿಪಡಿಲಾಗುವುದು.ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೇವೆ ನೀಡಲಾಗುವುದು.
-ಮಧು ಸೂ ದನ್‌,ಉಪ ನೋಂದಣಾಧಿಕಾರಿ ಬೈಂದೂರು

– ಅರುಣ್‌ ಕುಮಾರ್‌ ಶಿರೂರು

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.