ದನಗಳ ಜಾತ್ರೆಯಲ್ಲಿ ಜನಗಳ ಸಂಖ್ಯೆಯೇ ಹೆಚ್ಚು


Team Udayavani, Mar 24, 2021, 9:02 PM IST

ಮಜನ್ಗನಚವ

ಚಿತ್ರದುರ್ಗ: ದನಗಳ ಜಾತ್ರೆಯಲ್ಲಿ ಜನಗಳ ಸಂಖ್ಯೆ ಹೆಚ್ಚಾಗಿ ದನಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮಾನವ ಮಕ್ಕಳ ಪಾಲನೆಗೆ ಮಾತ್ರ ಸೀಮಿತನಾಗಿದ್ದಾನೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದರು. ಸೀಬಾರ ಗ್ರಾಮದಲ್ಲಿ ಜಿಪಂ, ತಾಪಂ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ನಡೆದ ಜಾನುವಾರು ಜಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮನುಷ್ಯ ಸಸ್ಯ ಪಾಲನೆ, ಪಶುಪಾಲನೆಯನ್ನು ಬಿಟ್ಟಿದ್ದಾನೆ. ಇದರಿಂದ ದನಗಳ ಸಂಖ್ಯೆ ಕಮ್ಮಿಯಾಗಿ ಹಾಲು ಉತ್ಪಾದನೆ ಕಡಿಮೆಯಾಗಿದೆ. ಗುರುಪಾದ ಸ್ವಾಮಿಗಳ ಸ್ಮರಣೆಗಾಗಿ ಪ್ರತಿವರ್ಷ ಇಲ್ಲಿ ದನಗಳ ಜಾತ್ರೆ ನಡೆಸಲಾಗುತ್ತಿದೆ. ಆದರೆ ಈ ಹಿಂದೆ ಇದ್ದಂತೆ ದನಗಳು ಈಗ ಬರುತ್ತಿಲ್ಲ ಎಂದರು.

ಗುರುಪಾದ ಸ್ವಾಮಿಗಳು ತಪಸ್ವಿಗಳು. ಗವಿಮಠದಲ್ಲಿ ಏಕಾಂತವಾಗಿ ಧ್ಯಾನ ಮಾಡಿ ಸಮಾಜದಲ್ಲಿ ಶಾಂತಿ, ಸಹನೆ, ಬೋಧನೆ ಮಾಡಿದ್ದಾರೆ. ಮುರುಘಾ ಮಠದ ಗುರುಗಳಾಗಿ ಸಮಾಜ ಸೇವೆ ಮಾಡಿದ್ದಾರೆ. ಅವರ ಗದ್ದುಗೆ ಶ್ರೀಮಠದಲ್ಲಿದೆ. ಜಯದೇವ, ಜಯವಿಭವ ಮತ್ತು ಮಲ್ಲಿಕಾರ್ಜುನ ಶ್ರೀಗಳು ಇವರೆಲ್ಲರು ಗದ್ದುಗೆಯಲ್ಲಿ ಪೂಜೆ ಪ್ರಸಾದ ಧ್ಯಾನವನ್ನು ಮಾಡಿದ್ದಾರೆ ಎಂದು ಸ್ಮರಿಸಿದರು.

ಬೇಸಿಗೆ ಕಾಲದಲ್ಲಿ ಜನರಿಗೆ ಮಜ್ಜಿಗೆ ಕೊಡಿ. ಹಾಲು, ಮೊಸರು, ಬೆಣ್ಣೆ, ತುಪ್ಪ, ಪೇಡಾ ತಿನಿಸುಗಳಿಗೆ ಹಾಲು ಅತ್ಯವಶ್ಯಕ. ಹೀಗಾಗಿ ಪಶುಪಾಲನೆ ಅತಿ ಮುಖ್ಯವಾಗಿದ್ದು ಎತ್ತು, ಎಮ್ಮೆ, ಆಕಳು, ಕುರಿ, ಮೇಕೆಗಳನ್ನು ಸಾಕಿ ಕೃಷಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ಕೊಟ್ಟು ಪಶುಪಾಲನೆಯಲ್ಲಿ ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಮಾತನಾಡಿ, ಜಿಲ್ಲೆಯಲ್ಲೇ ಏಕೈಕ ಜಾನುವಾರು ಜಾತ್ರೆ ನಡೆಯುವ ಸ್ಥಳ ಸೀಬಾರವಾಗಿದೆ. ಹಿಂದೆ ಕುಟುಂಬ ವ್ಯವಸ್ಥೆಯಲ್ಲಿ ಜನರು ಹೆಚ್ಚು ಸಂಖ್ಯೆಯಲ್ಲಿದ್ದು ದನ ಕರುಗಳನ್ನು ಸಾಕುತ್ತಿದ್ದರು. ಈಗ ಮನೆಯಲ್ಲಿ ಜನ ಕಡಿಮೆಯಾಗಿರುವುದರಿಂದ ಪಶುಪಾಲನೆಯೂ ಕಡಿಮೆಯಾಗಿದೆ. ಜಾನುವಾರುಗಳಿಂದ ದೊರೆಯುವ ಸಾವಯವ ಗೊಬ್ಬರದಿಂದ ಭೂಮಿ ಫಲವತ್ತಾಗುತ್ತದೆ. ಆರೋಗ್ಯವೂ ಉತ್ತಮಗೊಳ್ಳುತ್ತದೆ ಎಂದರು.

ಗ್ರಾಪಂ ಸದಸ್ಯ ರಾಮಾಂಜನೇಯ ಮಾತನಾಡಿ, ಮುರುಘಾಮಠದಿಂದ ಕಳೆದ 66 ವರ್ಷಗಳಿಂದ ಈ ಜಾತ್ರೆ ನಿರಂತರವಾಗಿ ನಡೆಯುತ್ತ ಬಂದಿದೆ. ಇಲ್ಲಿ ನಡೆಯುವ ಜಾತ್ರೆಯಲ್ಲಿ ಈ ಹಿಂದೆ 10 ಸಾವಿರ ಜೋಡಿ ಎತ್ತುಗಳು ಭಾಗವಹಿಸಿದ ಉದಾಹರಣೆಗಳಿವೆ. ಈಗ ಲಾಭದ ಹಿಂದೆ ಹೋಗಿ ಮಾನವ ಜಾನುವಾರು ಸಾಕುವುದನ್ನೇ ಬಿಟ್ಟಿದ್ದಾನೆ ಎಂದು ವಿಷಾದಿಸಿದರು.

ಎಂ.ಕೆ. ಹಟ್ಟಿ ಗ್ರಾಪಂ ಅಧ್ಯಕ್ಷೆ ಬಿ. ಗೀತಾ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಕೌಸಲ್ಯ ತಿಪ್ಪೇಸ್ವಾಮಿ, ತಾಪಂ ಸದಸ್ಯೆ ರಾಧಮ್ಮ ಜಗದೀಶ್‌, ಪ್ರಕಾಶ್‌ ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮುರುಘಾ ಶರಣರು ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಿದರು. ಜಾತ್ರೆಯಲ್ಲಿ ಹಳ್ಳಿಕಾರ್‌, ಅಮೃತ್‌ ಮಹಲ್‌ ಇನ್ನಿತರೆ ತಳಿಗಳ 250ಕ್ಕೂ ಹೆಚ್ಚು ಜೋಡಿ ಎತ್ತುಗಳು ಭಾಗವಹಿಸಿವೆ. ಪಶುಪಾಲನಾ ಇಲಾಖೆ ನಿರ್ದೇಶಕ ಡಾ| ಕೃಷ್ಣಪ್ಪ ಸ್ವಾಗತಿಸಿದರು. ಡಾ| ಬಿ. ಪ್ರಸನ್ನಕುಮಾರ್‌ ನಿರ್ವಹಿಸಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.