ಬೆಳ್ತಂಗಡಿ: ಪ.ಪಂ. ಚರಂಡಿ ವಾಸನೆ ಸಹಿಸಲು ಬೇಕಿದೆ ಮಾಸ್ಕ್!


Team Udayavani, Mar 25, 2021, 5:00 AM IST

ಬೆಳ್ತಂಗಡಿ: ಪ.ಪಂ. ಚರಂಡಿ ವಾಸನೆ ಸಹಿಸಲು ಬೇಕಿದೆ ಮಾಸ್ಕ್!

ಬೆಳ್ತಂಗಡಿ: ಕೊರೊನಾ ಸೋಂಕು ತಡೆಯಲು ಮಾಸ್ಕ್ ಬಳಸಿ, ಸ್ವತ್ಛತೆಗೆ ಆದ್ಯತೆ ನೀಡಿ ಎಂದು ದಿನ ಬೆಳಗ್ಗೆ ಧ್ವನಿವರ್ಧಕ ಮೊಳಗಿಸುತ್ತಿರುವ ಪ.ಪಂ., ಕಚೇರಿ ಮುಂಭಾಗದ ಚರಂಡಿಯಲ್ಲಿ ಕೊಳಚೆ ನೀರು ಗಬ್ಬು ನಾರುತ್ತಿರುವುದರಿಂದ ಸಾರ್ವಜನಿಕರಿಗೆ ಮೂಗು ಮುಚ್ಚಿಕೊಳ್ಳಲು ಮಾಸ್ಕ್ ವಿತರಿಸುವುದು ಅನಿವಾರ್ಯ ಎಂಬಂತಾಗಿದೆ.

ಪಟ್ಟಣ ಪಂಚಾಯತ್‌, ಮಿನಿವಿಧಾನ, ಪ್ರವಾಸಿ ಬಂಗಲೆ, ಕೋರ್ಟ್‌, ತಾ.ಪಂ. ಸೇರಿದಂತೆ ಅನೇಕ ಸರಕಾರಿ ಕಚೇರಿ ತೆರಳುವವರು, ಶಾಸಕರು, ಸಚಿವರು, ಗಣ್ಯವ್ಯಕ್ತಿಗಳು ಸಂಚರಿಸುವ, ಬೆಳ್ತಂಗಡಿ ಕೇಂದ್ರ ಭಾಗದಲ್ಲಿರುವ ಮೂರು ಮಾರ್ಗದ ಬಳಿ ತೆರೆದ ಚರಂಡಿಯೊಂದು ನಗರದ ಸೌಂದರ್ಯ ಕೆಡಿಸುತ್ತಿದೆ. ಮೂರು ವರ್ಷಗಳಿಂದ ಚರಂಡಿ ಸ್ವತ್ಛತೆಗೆ ಪ.ಪಂ. ಲಕ್ಷಾಂತರ ಅನುದಾನ ಮೀಸಲಿ ರಿಸುತ್ತಿದ್ದರೂ ಈವರೆಗೆ ಮೂರು ಮಾರ್ಗದ ಮುಂಭಾಗದ ಚರಂಡಿ ದುಸ್ಥಿತಿಯನ್ನು ಸರಿಪಡಿಸಲು ಸಾಧ್ಯವಾಗಿಲ್ಲ.

ಸಂತೆಕಟ್ಟೆಯಿಂದ ಬಸ್‌ ನಿಲ್ದಾಣದವರೆಗೆ, ಮೂರು ಮಾರ್ಗದಿಂದ ಮಿನಿವಿಧಾನ ಸೌಧಕ್ಕೆ ಹೋಗುವ ರಸ್ತೆ ಬದಿಯಲ್ಲಿರುವ ಚರಂಡಿ ತುಂಬಿ ನಡೆದಾಡಲು ಸಾಧ್ಯವಿಲ್ಲದಷ್ಟು ದುರ್ನಾತ ಬೀರುತ್ತಿದೆ. ಸಮೀಪದ ಕಚೇರಿ, ಅಂಗಡಿ, ಮುಂಗಟ್ಟು, ಮನೆಯ ಮಂದಿ ಮೂಗಿಮುಚ್ಚಿ ಕುಳಿತುಕೊಳ್ಳುವ ಸ್ಥಿತಿ ಇದೆ. ಈ ಕುರಿತು ಹಲವು ಬಾರಿ ವರದಿ ಪ್ರಕಟಗೊಂಡರೂ ಸಬಂಧಪಟ್ಟವರು ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ಬಳಿ ಈ ಕುರಿತು ಪ್ರಸ್ತಾಪಿಸಿದರೆ ಚರಂಡಿಗೆ ಮನೆ, ಹೋಟೆಲ್‌ ತ್ಯಾಜ್ಯ ಬಿಡದಂತೆ ಸೂಚಿಸಲಾಗಿದೆ, ನೋಟಿಸ್‌ ನೀಡಲಾಗಿದೆ.
ಎಂಬ ಸಿದ್ಧ ಉತ್ತರವಷ್ಟೆ ಬರುತ್ತಿದೆ. ಮಾಸ್ಕ್ ದಂಡ ವಿಧಿಸುವ ಮುನ್ನ ಪ.ಪಂ. ಅವ್ಯವಸ್ಥೆಗೆ ದಂಡ ವಿಧಿಸುವ ಅನಿವಾರ್ಯತೆಯಿದೆ.

ಟೌನ್‌ ಪ್ಲಾನಿಂಗ್‌ ಕೊರತೆ
ಕೊಳಚೆ ನೀರಿನ ಚರಂಡಿಗಳ ಸಮರ್ಪಕ ನಿರ್ವಹಣೆಗೆ ಯೋಜನೆ ರೂಪಿಸಬೇಕಿದೆ. ನಗರದ ಹೃದಯ ಭಾಗದಲ್ಲಿ ಇರುವ ಚರಂಡಿಗಳು ಅವೈಜ್ಞಾನಿಕವಾಗಿವೆ.

ಈಗಾಗಲೇ ಟೌನ್‌ಪ್ಲಾನಿಂಗ್‌ ಎಂಜಿನಿಯರಿಂಗ್‌ ಸರ್ವೇ ನಡೆಸಿದ್ದರೂ ಕಾಮಗಾರಿಗಳು ವೇಗ ಪಡೆಯಬೇಕಿದೆ.

10 ದಿನಗಳೊಳಗಾಗಿ ಕ್ರಮ
ನಗರದ ನೀರು, ಚರಂಡಿ ನೀರು ಹಾಗೂ ಹೊಟೇಲ್‌ ತ್ಯಾಜ್ಯ ಪ್ಯೂರಿಫೈ ಮಾಡುವ ಸಲುವಾಗಿ ದೇವನಹಳ್ಳಿ ಮಾದರಿಯಲ್ಲಿ ಘಟಕ ನಿರ್ಮಿಸಲು ಕೃಷಿ ಇಲಾಖೆಯ ಸಮೀಪ 1 ಎಕ್ರೆ ಕಾಯ್ದೆರಿಸಿ ಸರಕಾರಕ್ಕೆ ಬರೆಯಲಾಗಿದೆ. ಮೂರು ಮಾರ್ಗದ ಬಳಿ ಚರಂಡಿ ಸ್ವತ್ಛಗೊಳಿಸಿ ಸ್ಲ್ಯಾಬ್‌ ಅಳವಡಿಸಲು 2.30 ಲಕ್ಷ ರೂ.ನ ಟೆಂಡರ್‌ ಕರೆಯಲಾಗಿದ್ದು, 10 ದಿನಗಳ ಒಳಗಾಗಿ ಅಳವಡಿಸಲಾಗುತ್ತದೆ.
-ಮಹಾವೀರ ಆರಿಗ, ಪಂ.ಪಂ. ಎಂಜಿನಿಯರ್

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.