ಅರ್ಥಪೂರ್ಣ ಚರ್ಚೆಗಳಿಲ್ಲದೇ ಹಾದಿತಪ್ಪಿದ ಅಧಿವೇಶನ


Team Udayavani, Mar 26, 2021, 6:40 AM IST

ಅರ್ಥಪೂರ್ಣ ಚರ್ಚೆಗಳಿಲ್ಲದೇ ಹಾದಿತಪ್ಪಿದ ಅಧಿವೇಶನ

ಮಾರ್ಚ್‌ 4ರಿಂದ ಆರಂಭವಾಗಿ ಮಾರ್ಚ್‌ 31ರ ವರೆಗೆ ನಡೆಯ ಬೇಕಿದ್ದ ಬಜೆಟ್‌ ಮೇಲಿನ ಅಧಿವೇಶನ ಬುಧವಾರಕ್ಕೇ ಮುಕ್ತಾಯ ಗೊಂಡಿದೆ.  ಬಜೆಟ್‌ ಮೇಲಿನ ಚರ್ಚೆಗಿಂತ ಹೆಚ್ಚಾಗಿ ಕಲಾಪದಲ್ಲಿ ಸಿಡಿ ಪ್ರಕರಣ, ಆರು ಸಚಿವರು ಕೋರ್ಟ್‌ನಿಂದ ತಡೆಯಾಜ್ಞೆ ತೆಗೆದುಕೊಂಡ ವಿಚಾರ, ಸಚಿವ ಡಾ| ಸುಧಾಕರ್‌ ನೀಡಿದ ಏಕಪತ್ನಿ ವ್ರತಸ್ಥ ಹೇಳಿಕೆಗಳೇ ಚರ್ಚೆಯಲ್ಲಿ ಮುನ್ನೆಲೆ ಪಡೆದವು.

ವಿಪಕ್ಷಕ್ಕೆ ಅದು ಪ್ರಮುಖ ವಿಚಾರವಾದರೂ ಕೋವಿಡ್‌ನ‌ ಈ ಸಂಕಷ್ಟಕರ ಕಾಲಘಟ್ಟದಲ್ಲಿ  ಬಜೆಟ್‌ ಅಧಿವೇಶನದಲ್ಲಿ ಅರ್ಥ ಪೂರ್ಣವಾದ ಚರ್ಚೆಗಳು ನಡೆಯಬೇಕಿತ್ತು. ಈಗೆಂದಷ್ಟೇ ಅಲ್ಲ, ಪ್ರತೀ ಬಾರಿಯೂ ಕಲಾಪಗಳು ಮುಖ್ಯ ಚರ್ಚೆಯ ವಿಷಯದಿಂದ ಹಾದಿ ತಪ್ಪಿ, ವಾಕ್‌ಸಮರ, ವಾಕೌಟ್‌,  ಗದ್ದಲ, ಧಿಕ್ಕಾರಗಳ ಕೂಗಿನ ನಡುವೆಯೇ ಕಳೆದು ಹೋಗುತ್ತಿರುವುದು ದುರಂತ.  ಅಧಿವೇಶನದ ಮೊದಲನೆಯ ದಿನವೇ ವಿಪಕ್ಷಗಳ ವಿರೋಧದ ನಡುವೆ “ಒಂದು ರಾಷ್ಟ್ರ-ಒಂದು ಚುನಾವಣೆ’ ಕುರಿತ ವಿಶೇಷ ಚರ್ಚೆ ಕೈಗೊಳ್ಳಲು ಸರಕಾರ ಮುಂದಾದದ್ದು, ಇದರಿಂದಾಗಿ ವಿಧಾನಮಂಡಲದ ಉಭಯ ಸದನಗಳಲ್ಲಿ ಗದ್ದಲವೇರ್ಪಟ್ಟು ಇಡೀ ದಿನದ ಕಲಾಪ ಬಲಿ ಆದಾಗ, ರಾಜ್ಯದ ಪ್ರಚಲಿತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವ ಬಗ್ಗೆ ಜನಸಾಮಾನ್ಯರು ಭರವಸೆಯನ್ನೇ ಕಳೆದುಕೊಂಡರು.

ಅಂದುಕೊಂಡಂತೆಯೇ ಬಜೆಟ್‌ ಮೇಲಿನ ಅಧಿವೇಶನ, ರಾಜ್ಯದ ಹಿತಚಿಂತನೆಯ ದೃಷ್ಟಿಯಿಂದ ಅಷ್ಟಾಗಿ ಫ‌ಲಕಾರಿಯಾಗದೇ ಮುಂದೂ ಡಿಕೆಯಾಗಿದೆ. ರಾಜ್ಯದಲ್ಲಷ್ಟೇ ಅಲ್ಲ, ಕೇಂದ್ರದ ಮಟ್ಟದಲ್ಲೂ ಅನ್ಯ ಕಾರಣಗಳಿಗಾಗಿ ಇಂಥ ವಿದ್ಯಮಾನವನ್ನೇ ನಾವು ನೋಡುತ್ತಿದ್ದೇವೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾದರೆ, ಅದಕ್ಕೂ ಮುನ್ನ ಲೋಕಸಭೆಯನ್ನು ಅನಿರ್ದಿಷ್ಟಾ ವಧಿಗೆ ಮುಂದೂಡಲಾಗಿತ್ತು.

ರಾಜ್ಯದ ವಿಚಾರಕ್ಕೆ ಬಂದರೆ, ಆಡಳಿತಾರೂಢ ಪಕ್ಷ ಮತ್ತು ವಿಪಕ್ಷಗಳು ತಮ್ಮನ್ನು ಜನರು ಗಮನಿಸುತ್ತಿದ್ದಾರೆ, ರಾಜ್ಯದ ಆರ್ಥಿಕ ಸ್ಥಿತಿಗೆ ಮರುವೇಗ ನೀಡುವ ತುರ್ತು ಎಷ್ಟಿದೆ ಎನ್ನುವ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳುತ್ತಿಲ್ಲವೇನೋ ಎಂಬಂತಿವೆ ಅವುಗಳ ವರ್ತನೆ.  ಆದರೆ ಅಧಿಕಾರದ ವಿಚಾರಕ್ಕೆ ಬಂದಾಗ ಮಾತ್ರ ಇವು ಸಕ್ರಿಯವಾಗಿಬಿಡುತ್ತವೆ. ಬಜೆಟ್‌ ಅಧಿವೇಶನ ಮುಕ್ತಾಯಗೊಂಡದ್ದೇ ಮೂರೂ ರಾಜಕೀಯ ಪಕ್ಷಗಳು ಮುಂಬರುವ ಉಪ ಚುನಾವಣೆಯತ್ತ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯತ್ತ ಎಲ್ಲಿಲ್ಲದ ಗಮನ ಹರಿಸುವುದು ನಿಶ್ಚಿತ.

ಆದಾಗ್ಯೂ ವಿಧಾನ ಮಂಡಲ ಅಧಿವೇಶನವನ್ನು ಮುಂದೂಡುವ ಮೊದಲು ಬಜೆಟ್‌ಗೆ ಅಂಗೀಕಾರ ನೀಡಲಾಗಿದೆಯಾದರೂ, ನಿರೀಕ್ಷಿತ ಪ್ರಮಾಣದಲ್ಲಿ ಮುಖ್ಯ ವಿಚಾರಗಳ ಚರ್ಚೆಗಳು ಆಗದಿರುವುದು ಬೇಸರದ ಸಂಗತಿ. ಪದೇ ಪದೆ ಈ ರೀತಿ ಅಧಿವೇಶನಗಳು ತಮ್ಮ ಮುಖ್ಯ ಉದ್ದೇಶದಿಂದ ವಿಮುಖವಾಗುವ ಪರಿಪಾಠ ನಿಲ್ಲಲೇಬೇಕಿದೆ. ಆಡಳಿತ ಹಾಗೂ ವಿಪಕ್ಷ ಎರಡರ ಮೇಲೂ ಈ ಜವಾಬ್ದಾರಿ ಇದೆ. ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿವೇಶನ ಮೊಟಕುಗೊಂಡ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿರುವುದು ಗಮನಾರ್ಹ.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.