ಸಾಲ ನೀಡಲು ಹಿಂದೇಟು ಹಾಕಿದರೆ ಸರಕಾರದ ಖಾತೆ ವರ್ಗ: ಡಾ| ನವೀನ್‌


Team Udayavani, Mar 26, 2021, 2:14 AM IST

ಸಾಲ ನೀಡಲು ಹಿಂದೇಟು ಹಾಕಿದರೆ  ಸರಕಾರದ ಖಾತೆ ವರ್ಗ: ಡಾ| ನವೀನ್‌

ಉಡುಪಿ: ಸಾಲ ನೀಡಲು ಹಿಂದೇಟು ಹಾಕುವ ಬ್ಯಾಂಕ್‌ಗಳಲ್ಲಿರುವ ಸರಕಾರದ ಖಾತೆಗಳನ್ನು ವರ್ಗಾವಣೆ ಮಾಡುವುದಾಗಿ ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ಎಚ್ಚರಿಸಿದ್ದಾರೆ.

ಜಿ.ಪಂ. ಸಭಾಂಗಣದಲ್ಲಿ ಗುರುವಾರ ತ್ತೈಮಾಸಿಕ ಬ್ಯಾಂಕಿಂಗ್‌ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲಿಸಿದ ಅವರು,  ಸಾಲ ವಿತರಣೆಯನ್ನು ಪರಿಣಾಮಕಾರಿ ಯಾಗಿ ಮಾಡ ಬಹುದೆಂಬ ಕುರಿತು ನಿರ್ದಿಷ್ಟವಾದ ಕ್ರಿಯಾ ಯೋಜನೆ ರೂಪಿಸಬೇಕು. ಠೇವಣಿ ಮುಂಗಡ ಅನುಪಾತವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳ ಬೇಕು. ಮುಂದಿನ  ಸಭೆಯಲ್ಲಿ ನಿರ್ದಿಷ್ಟ ಸಾಧನೆ ವರದಿ ಸಿಗಬೇಕು ಎಂದರು.

ಶಿಕ್ಷಣ ಸಾಲ ವಿಳಂಬದಿಂದ ತೊಂದರೆ :

ವಿದ್ಯಾರ್ಥಿಗಳ ಶಿಕ್ಷಣ ಸಾಲ ವಿಳಂಬದ ಕುರಿತು ಅಸಮಾಧಾನ ಸೂಚಿಸಿದ ಭಟ್‌, ಸಕಾಲದಲ್ಲಿ ಸಾಲ ಬಿಡುಗಡೆ ಮಾಡದಿದ್ದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗುತ್ತದೆ.  ದುರ್ಬಲ ವರ್ಗ ದವರಿಗೆ ಸಾಲ ನೀಡಲು ಹಿಂದೇಟು ಹಾಕಿದರೆ ಬ್ಯಾಂಕ್‌ ವಿರುದ್ಧ ಕ್ರಮ ಜರಗಿಸ ಬೇಕಾಗುತ್ತದೆ. ಜಿಲ್ಲೆಯಲ್ಲಿ ಠೇವಣಿ ಪ್ರಮಾಣ ಹೆಚ್ಚಿಗೆ ಇದ್ದು ಸಾಲದ ಪ್ರಮಾಣ ಕಡಿಮೆ ಇದೆ. ಇಂತಹ ಬ್ಯಾಂಕ್‌ಗಳಲ್ಲಿ ಸರಕಾರದ ಖಾತೆಗಳನ್ನು ಇರಿಸಿಕೊಳ್ಳುವುದು ಏಕೆ ಎಂದು ಪ್ರಶ್ನಿಸಿದರು.

ಗೈರಾದವರಿಗೆ ನೋಟಿಸ್‌ : 

ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮದ ಅಧಿಕಾರಿಗಳು ಗೈರಾಗಿರುವುದನ್ನು ಗಮನಿ ಸಿದ ಸಿಇಒ, ಅವರಿ ನೋಟಿಸ್‌ ಹೊರಡಿಸಲು ಸೂಚಿಸಿದರು.

10,117.28 ಕೋ.ರೂ. ಗಾತ್ರದ ಜಿಲ್ಲಾ ಸಾಲ ಯೋಜನೆಯ ಹೊತ್ತಗೆಯನ್ನು ಸಿಇಒ ಬಿಡುಗಡೆಗೊಳಿಸಿದರು. ನಬಾರ್ಡ್‌ ಎಜಿಎಂ ಸಂಗೀತ ಕರ್ತಾ ಸಾಲ ವಿತರಣೆಯ ಕ್ಷೇತ್ರವಾರು ಗುರಿಗಳನ್ನು ವಿವರಿಸಿದರು. ಪ್ರಾದೇಶಿಕ ಪ್ರಬಂಧಕರಾದ ಕೆನರಾ ಬ್ಯಾಂಕ್‌ನ ಲೀನಾ ಪೀಟರ್‌ ಪಿಂಟೋ, ಕೆ. ಕಾಳಿ, ಯೂನಿಯನ್‌ ಬ್ಯಾಂಕ್‌ನ ಡಾ| ವಾಸಪ್ಪ ಉಪಸ್ಥಿತರಿದ್ದರು. ಜಿಲ್ಲಾ ಅಗ್ರಣಿ ಬ್ಯಾಂಕ್‌ ಪ್ರಬಂಧಕ ರುದ್ರೇಶ್‌ ಡಿ.ಸಿ. ಅವರು ಡಿಸೆಂಬರ್‌ ಅಂತ್ಯದ ತ್ತೈಮಾಸಿಕದಲ್ಲಿ ಆದ ಠೇವಣಿ ಸಂಗ್ರಹ, ಸಾಲ ವಿತರಣೆಯ ವಿವರಗಳನ್ನು ಮಂಡಿಸಿದರು.

ವಿಮಾ ಯೋಜನೆ ಜಾಗೃತಿಗೆ ಸೂಚನೆ :

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿ (ಪಿಎಂಎಸ್‌ಬಿವೈ) 12 ರೂ. ಮತ್ತು  ಪ್ರಧಾನಮಂತ್ರಿ ಜೀವನ್‌ ಜ್ಯೋತಿ ವಿಮಾ ಯೋಜನೆಯಡಿ (ಪಿಎಂಜೆಜೆಬಿವೈ) 330 ರೂ. ಪಾವತಿಸಿ ಯೋಜನೆಯ ಫ‌ಲಾನುಭವಿಗಳಾದ ಹಲವು ಮಂದಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಈ ಖಾತೆದಾರರಿಗೆ ಅವರ ಮರಣದ ಅನಂತರ ವಿಮಾ ಹಣವನ್ನು ವಾರಸುದಾರರಿಗೆ ನೀಡುವ ಕುರಿತಂತೆ ಬ್ಯಾಂಕ್‌ಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಸಿಇಒ ಡಾ| ನವೀನ್‌ ಭಟ್‌ ತಿಳಿಸಿದರು.

1,086 ಮಂದಿ ಮಾತ್ರ ಪ್ರಯೋಜನ ಪಡೆದಿದ್ದಾರೆ. ಪಿಎಂಎಸ್‌ಬಿವೈಗೆ 3,27,617 ಮತ್ತು ಪಿಎಂಜೆಜೆಬಿವೈಗೆ 2,98,812 ನೊಂದಣಿ ಆಗಿದೆ. ಯೋಜನೆಯ ಸೌಲಭ್ಯವನ್ನು ಅರ್ಹ ಎಲ್ಲರಿಗೆ ಒದಗಿಸಬೇಕು. ಬ್ಯಾಂಕ್‌ ಖಾತೆ ತೆರೆಯುವಾಗಲೇ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ಗೆ ಸೂಚಿಸಿದರು. ಬ್ಯಾಂಕ್‌ಗಳಲ್ಲಿ ಜನಧನ ಖಾತೆ ಮತ್ತು ಶೂನ್ಯ ಶಿಲ್ಕಿನ ಖಾತೆ ಇವೆರಡರಲ್ಲಿ ಜನಧನ ಖಾತೆಯ ಸೌಲಭ್ಯ ಹೆಚ್ಚಿಗೆ ಇರುತ್ತದೆ. ಇದರ ಬಗ್ಗೆ ಜನರಿಗೆ ಗೊತ್ತಿರುವುದಿಲ್ಲ. ಬ್ಯಾಂಕ್‌ನವರು ತಿಳಿಸಬೇಕು ಎಂದು ಸಭಿಕರೊಬ್ಬರು  ತಿಳಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.