ಕಾನೂನು ಹೋರಾಟದಲ್ಲಿ ಟಾಟಾಗೆ ಮೇಲುಗೈ-ಸುಪ್ರೀಂಕೋರ್ಟ್ ನಲ್ಲಿ ಮಿಸ್ತ್ರಿಗೆ ಮುಖಭಂಗ

ನಾಲ್ಕು ವರ್ಷಗಳ ನಂತರ ನಾಟಕೀಯ ಬೆಳವಣಿಗೆಯಲ್ಲಿ ಮಿಸ್ತ್ರಿಯನ್ನು ಕಂಪನಿ ವಜಾಗೊಳಿಸಿತ್ತು.

Team Udayavani, Mar 26, 2021, 12:58 PM IST

ಕಾನೂನು ಹೋರಾಟದಲ್ಲಿ ಟಾಟಾಗೆ ಮೇಲುಗೈ-ಮಿಸ್ತ್ರಿ ವಜಾ ನಿರ್ಧಾರ ಸರಿ: ಸುಪ್ರೀಂಕೋರ್ಟ್

ನವದೆಹಲಿ:2016ರಲ್ಲಿ ನೂರು ಬಿಲಿಯನ್ ಡಾಲರ್ ವಹಿವಾಟಿನ ಸಾಫ್ಟ್ ವೇರ್ ದಿಗ್ಗಜ ಟಾಟಾ ಗ್ರೂಪ್ ನ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯನ್ನು ವಜಾಗೊಳಿಸಿರುವ ಕ್ರಮವನ್ನು ಸುಪ್ರೀಂಕೋರ್ಟ್ ಶುಕ್ರವಾರ(ಮಾರ್ಚ್ 26) ಎತ್ತಿಹಿಡಿದಿದೆ. ಇದರಿಂದ ಕಾನೂನು ಹೋರಾಟದಲ್ಲಿ ಟಾಟಾ ಸನ್ಸ್ ಗೆ ಬಹುದೊಡ್ಡ ಜಯ ಸಿಕ್ಕಂತಾಗಿದೆ.

ಟಾಟಾ ಗ್ರೂಪ್ ನ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯನ್ನು ವಜಾಗೊಳಿಸಿರುವುದು ಸಮಂಜಸವಲ್ಲ, ಪುನಃ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿಕೊಳ್ಳಬೇಕೆಂದು ರಾಷ್ಟ್ರೀಯ ಕಂಪನಿ ಕಾನೂನು ಟ್ರಿಬ್ಯೂನಲ್ ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ ಎಂದು ವರದಿ ತಿಳಿಸಿದೆ.

ಸುಪ್ರೀಂಕೋರ್ಟ್ ಚೀಫ್ ಜಸ್ಟೀಸ್ ಎಸ್ ಎ ಬೋಬ್ಡೆ ನೇತೃತ್ವದ ಪೀಠ, ಸೈರಸ್ ಮಿಸ್ತ್ರಿಯನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರುವ ಕ್ರಮ ಸರಿ ಎಂದಿದೆ. ಕಾನೂನು ದೃಷ್ಟಿಯಿಂದ ಟಾಟಾ ಗ್ರೂಪ್ ನಿರ್ಧಾರ ಸೂಕ್ತವಾಗಿದೆ ಎಂದು ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.

ಸೈರಸ್ ಮಿಸ್ತ್ರಿಯನ್ನು ಮತ್ತೆ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು 2019ರ ಡಿಸೆಂಬರ್ 18ರಂದು ರಾಷ್ಟ್ರೀಯ ಕಂಪನಿ ಕಾನೂನು ಟ್ರಿಬ್ಯೂನಲ್ ನೀಡಿದ್ದ ಆದೇಶವನ್ನು ಟಾಟಾ ಗ್ರೂಪ್ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಡಿಸೆಂಬರ್ 17ರಂದು ತೀರ್ಪನ್ನು ಕಾಯ್ದಿರಿಸಿತ್ತು.

2012ರಲ್ಲಿ ಟಾಟಾ ಸನ್ಸ್ ನಿಂದ ರತನ್ ಟಾಟಾ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿದ್ದ ನಂತರ ಸೈರಸ್ ಮಿಸ್ತ್ರಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ನಾಲ್ಕು ವರ್ಷಗಳ ನಂತರ ನಾಟಕೀಯ ಬೆಳವಣಿಗೆಯಲ್ಲಿ ಮಿಸ್ತ್ರಿಯನ್ನು ಕಂಪನಿ ವಜಾಗೊಳಿಸಿತ್ತು. ಬಳಿಕ ಮಿಸ್ಟ್ರಿ ಮತ್ತು ಟಾಟಾ ನಡುವೆ ಘರ್ಷಣೆಗೆ ಕಾರಣವಾಗಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.