ಅಸ್ಸಾಂ ನಲ್ಲಿ ನಾನೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತೇನೆ : ಸರಬಾನಂದ ಸೋನೊವಾಲ


Team Udayavani, Mar 26, 2021, 3:09 PM IST

In Assams Majuli, Sarbananda Sonowal Hopes For 2nd Term As Chief Minister

ಅಸ್ಸಾಂ : ಮತ್ತೆ ಈ ಬಾರಿ ಅಸ್ಸಾಂ ನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಮತ್ತು ಅಸ್ಸಾಂ ನಲ್ಲಿ ಎರಡನೇ ಭಾರಿಗೆ ಮುಖ್ಯಮಂತ್ರಿ ನಾನೇ ಆಗುತ್ತೇನೆ ಎಂದು ಸರಬಾನಂದ ಸೋನೊವಾಲ ಭರವಸೆ ವ್ಯಕ್ತ ಪಡಿಸಿದ್ದಾರೆ.

ಆದಾಗ್ಯೂ, ಅಸ್ಸಾಂ ನಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ಈಶಾನ್ಯ ಭಾಗದಲ್ಲಿ ದೊಡ್ಡ ಪಾತ್ರವವಹಿಸಿದ ಹಿಮಂತ್ ಬಿಸ್ವಾ ಶರ್ಮಾ ಹಾಗೂ ಸರಬಾನಂದ ಸೋನೊವಾಲ ಅವರ ನಡುವೆ ಯಾರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂಬ ಸಂದಿಗ್ಧತೆಯಲ್ಲಿ ಪಕ್ಷ ಇದೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ.

ಓದಿ :  ಹುಚ್ಚು ಸಾಹಸ; ವಿಡಿಯೋ ನೋಡಿ ತಲೆ ಕೂದಲಿಗೆ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿ… ನಡೆದಿದ್ದೇನು?

ಏಷ್ಯಾದ ಅತ್ಯಂತ ದೊಡ್ಡ ದ್ವೀಪ ಪ್ರದೇಶವಾಗಿದ್ದ ಮಜಲಿ ಸರಬಾನಂದ ಸೋನಾವಾಲ ಮುಖ್ಯಮಂತ್ರಿಯಾದಾಗ ಅದು ಜಿಲ್ಲೆಯಾಗಿ ಪರಿವರ್ತನೆಯಾಯಿತು. ಸರಬಾನಂದ ಸೋನೊವಾಲ ಅವರ ವಿಧಾನ ಸಭಾ ಕ್ಷೇತ್ರವೂ ಕೂಡ ಹೌದು.

ಮಜುಲಿಯಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಜುಲಿ ಈಗ ಅಭಿವೃದ್ಧಿಯಾಗಿದೆ. ಉತ್ತಮವಾದ ರಸ್ತೆ ಸಂಪರ್ಕವನ್ನು ಹೊಂದಿದೆ ಹಾಗೂ ಮುಂದಿನ ದಿನಗಳಲ್ಲಿ ಸೇತುವೆಯ ಕಾರ್ಯವೂ ಕೂಡ ಆರಂಭವಾಗಲಿದೆ ಎಂದು ಭರವಸೆ ನೀಡಿದ್ದಾರೆ.

ಇನ್ನು, ಅಸ್ಸಾಂ ನ ನಾಗರಿಕತೆ ಮತ್ತು ಸಂಸ್ಕೃತಿಯನ್ನು ಬೆಳೆಸುವುದು ಮತ್ತು ರಕ್ಷಿಸುವುದು ನಮ್ಮ ಮತ ಪ್ರಚಾರ ಸಭೆಗಳ ಮುಖ್ಯ ಉದ್ದೇಶ ಎಂದು ಅವರು ರಾಷ್ಟ್ರೀಯ ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ ಎನ್ನುವುದು ವರದಿಯಾಗಿದೆ.

ಅಸ್ಸಾಂ ನ ಅಕ್ರಮ ವಲಸೆಗಾರರ ವಿರುದ್ಧ ಹೋರಾಡಿದ್ದಕ್ಕಾಗಿ, ಧ್ವನಿ ಎತ್ತಿದ್ದಕ್ಕಾಗಿ ‘ಜತಿಯಾ ನಾಯಕ್’  ಎಂದು ಕರೆಸಿಕೊಳ್ಳುವ ಸರಬಾನಂದ ಅವರಿಗೆ ಈ ಭಾರಿ ಚುನಾವಣೆಯಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ ಎಂಬ ಮಾತು ಅಸ್ಸಾಂ ನ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಗುರುವಾರ ನಡೆದ ಮತ ಪ್ರಚಾರ ಸಭೆಯಲ್ಲಿ ಸರಬಾನಂದ ಪರ ಅಲ್ಲಿನ ಬೆಂಬಲಿಗರು ಹರ್ಷ ವ್ಯಕ್ತ ಪಡಿಸಿದ್ದಾರೆ. ಸರಬಾನಂದ ನಮ್ಮ ಶಾಸಕರಾದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ ಹಾಗೂ ಇನ್ನಷ್ಟು ಅಭಿವೃದ್ಧಿಯಾಗಲಿದೆ ಮುಂದೆಯೂ ಕೂಡ ನಮ್ಮ ಶಾಸಕರು ಇವರೇ ಆಗಬೇಕೆಂದು ನಾವು ಬಯಸುತ್ತೇವೆ ಎಂದು ಅಲ್ಲಿನ ಜನರು ಸರಬಾನಂದ ಪರ ಅಭಿಪ್ರಾಯ ಪಟ್ಟಿರುವುದು ರಾಷ್ಟ್ರಿಯ ಸುದ್ದಿ ವಾಹಿನಿಗಳು ವರದಿ ಮಾಡಿವೆ.

ಸರಬಾನಂದ ನಮ್ಮ ಪ್ರದೇಶದ ರಕ್ಷಣೆ ಮಾಡುವಲ್ಲಿ ದೊಡ್ಡ ಪಾತ್ರವಹಿಸಿದ್ದಾರೆ. ಮತ್ತಷ್ಟು ಅಭಿವೃದ್ಧಿಯ ಬಗ್ಗೆ ಭರವಸೆ ನಿಡಿದ್ದಾರೆ, ಹಾಗಾಗಿ ನಾವು ನಮ್ಮ ನಾಯಕನನ್ನಾಗಿ ಮತ್ತೆ ಈ ಭಾರಿಯೂ ಅವರನ್ನೇ  ಬಯಸುತ್ತೇವೆ ಎಂದು ಪಕ್ಷದ ಬೆಂಬಲಿಗೊಬ್ಬರು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಇನ್ನು, ಸರಬಾನಂದ ಅವರ ಪ್ರತಿಸ್ಪರ್ಧಿ ಅಸ್ಸಾಂ ನ ಮಾಜಿ ಸಚಿವ, ಕಾಂಗ್ರೆಸ್ ನ ರಜೀಬ್ ಲೋಚನ್ ಪೆಗು, ಕಾಂಗ್ರೆಸ್ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಈಗ ತಾನು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಓದಿ : “ಕೆಲಸ ಕೊಡಿಸುವುದಾಗಿ ಎರಡು ಬಾರಿ ಮನೆಗೆ ಕರೆದು ಅನ್ಯಾಯ ಮಾಡಿದ್ದಾರೆ”: ದೂರು ನೀಡಿದ ಯುವತಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.