ಕೇರಳ : ಸ್ಪರ್ಧಾಕಣದಲ್ಲಿ ಕುಟುಂಬ ರಾಜಕಾರಣ..!

ಕೇರಳದಲ್ಲಿ ಕುಂಟುಂಬ ರಾಜಕಾರಣದ್ದೇ ಮೇಲುಗೈ

Team Udayavani, Mar 26, 2021, 5:12 PM IST

Sons, Relatives Of Politicians Among Candidates Contesting In Kerala

ಕೇರಳ : ಕೇರಳದ 140 ವಿಧಾನ ಸಭಾ ಕ್ಷೇತ್ರಗಳಲ್ಲಿ ಸುಮಾರು 20 ಅಭ್ಯರ್ಥಿಗಳು ಆಡಳಿತ ಪಕ್ಷ ಸಿಪಿಐ(ಎಮ್) ನೇತೃತ್ವದ ಎಲ್ ಡಿ ಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯು ಡಿ ಎಫ್ ನ ಮಾಜಿ ಮುಖ್ಯಮಂತ್ರಿಗಳ ಹಾಗೂ ಶಾಸಕರ ಮಕ್ಕಳು ಹಾಗೂ ಸಂಬಂಧಿಕರು ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರ ಅಳಿಯ, ಡೆಮೊಕ್ರೆಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾದ ನ್ಯಾಷನಲ್ ಪ್ರೆಸಿಡೆಂಟ್, ಮಹಮ್ಮದ್ ರಿಯಾಸ್ ಕೂಡ ಈ ಬಾರಿ ಕೇರಳದ ವಿಧಾನ ಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದು, ಕೇರಳದ ಹೈ ವೋಲ್ಟೇಜ್ ಮತ ಕ್ಷೇತ್ರಗಳಲ್ಲಿ ಒಂದಾದ ಕೋಜ್ಹಿಕೋಡ್ ನ ಬೇಪೋರ್ ನಲ್ಲಿ ಸಿಪಿಐ(ಎಮ್) ಅವರಿಗೆ ಮಣೆ ಹಾಕಿದೆ.

ಓದಿ :  ಅಸ್ಸಾಂ ನಲ್ಲಿ ನಾನೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುತ್ತೇನೆ : ಸರಬಾನಂದ ಸೋನೊವಾಲ

ರಿಯಾಸ್ ಒಬ್ಬರೇ ಅಲ್ಲ. ಕೇರಳ ಮಾಜಿ, ಹಾಲಿ ನಾಯಕರ ಸಂಬಂಧಿಗಳು ಈ ಬಾರಿ ಕೇರಳದ ವಿಧಾನ ಸಭಾ ಚುನಾವಣೆಯ ಅಖಾಡಕ್ಕಿಳಿಯಲಿದ್ದು, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಇಬ್ರಾಹಿಂ ಕುಂಜು ಅವರ ಮಗ, ಪಿಇ ಅದ್ಬುಲ್ ಗಫೂರ್, ಮಾಜಿ ಕಾಂಗ್ರೆಸ್ ಶಾಸಕ ಕೆ, ಅಚ್ಚ್ಯುತನ್ ಅವರ ಪತ್ರ ಸುಮೇಶ್ ಕೆ ಅಚ್ಚ್ಯುತನ್ ಹಾಗೂ ಮಾಜಿ ಶಾಸಕ ದಿವಂಗತ ಎನ್ ವಿಜಯನ್ ಪಿಳೈ ಅವರ ಮಗ ಡಾ. ವಿ ಸುಜಿತ್(ಸ್ವತಂತ್ರ ಅಭ್ಯರ್ಥಿ) ಕೇರಳದ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಲಿದ್ದಾರೆ.

ಇನ್ನು, ಮಾಜಿ ಮುಖ್ಯಮಂತ್ರಿಯಾದ ಕರುಣಾಕರನ್ ಅವರ ಮಕ್ಕಳಾದ ಕಾಂಗ್ರೆಸ್ ನಾಯಕ ಕೆ. ಮುರುಳಿಧರನ್ ನೇಮೋಮ್ ಕ್ಷೇತ್ರದಿಂದ, ಪದ್ಮಜಾ ವೇಣುಗೋಪಾಲನ್ ತ್ರಿಶೂರ್ ವಿಧಾನ ಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಇನ್ನು, ಮಾಜಿ ಸಚಿವ ಥಾಮಸ್ ಚಾಂಡಿ ಅವರ ಸಹೋದರ ಎನ್ ಸಿ ಪಿ ಯ ಕೆ. ಥಾಮಸ್ ಕೂಡ ಕುಟ್ಟನಾಡ್ ವಿಧಾನಾ ಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು  ನಾಮಪತ್ರವನ್ನು ಸಲ್ಲಿಸಿದ್ದಾರೆ.

ಇರಿಂಜಲಕುಡ ವಿಧಾನ ಸಭಾ ಕ್ಷೇತ್ರದಿಂದ ಸಿಪಿಐ(ಎಮ್0 ನ ಕಾರ್ಯದರ್ಶಿ ಅವರ ಧರ್ಮ ಪತ್ನಿ ಪ್ರೊ. ಆರ್ ಬಿಂದು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಮಾಜಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಅಳಿಯಂದಿರಾದ ವಿಜಯ ರಾಘವನ್ ಮತ್ತು ಪಿ ವಿ ಶ್ರೀನಿಜಿನ್ (ಕುನ್ನತುನಾಡ್) ಅವರನ್ನು ಎಲ್ ಡಿ ಎಫ್ ಕಣಕ್ಕಿಳಿಸಿದೆ.

ಓದಿ :  ‘ಈಗೋ’ ಒಳ್ಳೆಯದೇ… ಎಲ್ಲಿಯ ತನಕವೆಂದರೇ..

ಇನ್ನು, ಜೋಸ್ ಕೆ ಮಣಿ ಅವರು ಇತ್ತೀಚೆಗೆ ಎಡ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ತಮ್ಮ ತಂದೆ ಕೇರಳ ಕಾಂಗ್ರೆಸ್ ನ ಸ್ಥಾಪಕ ಮುಖಂಡ ದಿವಂಗತ ಕೆ ಎಮ್ ಮಣಿ ಅವರಿಂದ ಬಳುವಳಿಯಾಗಿ ಬಂದ ವಿಧಾನ ಸಭಾ ಕ್ಷೇತ್ರ ಪಾಲಾದಿಂದ ಸ್ಪರ್ಧೆಗೆ ಇಳಿಯುತ್ತಿದ್ದಾರೆ. ಈ ಮಧ್ಯೆ ಐಎಎಸ್ ಮಾಜಿ ಅಧಿಕಾರಿ ಅವರ ಸೋದರ ಮಾವ ಎಂ ಪಿ ಜೋಸೆಫ್ ಯುಡಿಎಫ್ ಅಭ್ಯರ್ಥಿಯಾಗಿ ತ್ರಿಕಾರಿಪುರದಿಂದ ತಮ್ಮ ಅದೃಷ್ಟವನ್ನು ಪ್ರಯತ್ನಿಸುತ್ತಿದ್ದಾರೆ.

ಯುಡಿಎಫ್ ನಿಂದ, ಮಾಜಿ ಮಂತ್ರಿಗಳ ಮಕ್ಕಳಾದ ಹಾಗೂ ಸ್ವತಃ ಮಾಜಿ ಮಂತ್ರಿಗಳಾದ ಎಂ.ಕೆ.ಮುನೀರ್ (ಕೊಡುವಲ್ಲಿ), ಶಿಬು ಬೇಬಿ ಜಾನ್ (ಚವರ) ಅನೂಪ್ ಜಾಕೋಬ್ (ಪಿರವೋಮ್) ಮತ್ತು ದಿವಂಗತ ಸ್ಪೀಕರ್ ಜಿ ಕಾರ್ತಿಕೇಯನ್ ಅವರ ಪುತ್ರ ಕೆ.ಎಸ್.ಸಬರಿನಾಥನ್ (ಅರುವಿಕ್ಕರ) ಕಣದಲ್ಲಿದ್ದು “ಪ್ರಭಾವಿ ರಾಜಕಾರಣಿಗಳ ಕುಡಿಗಳು” ಎಂದು ಕರೆಸಿಕೊಳ್ಳುತ್ತಿದ್ದಾರೆ.

ಇನ್ನು, ಕಾಂಗ್ರೆಸ್ ಮಾಜಿ ಮಹಿಳಾ ಮೋರ್ಚಾ ಅಧ್ಯಕ್ಷೆ ಲತಿಕಾ ಸುಭಾಷ್ ಅವರಿಗೆ ಯು ಡಿ ಎಫ್ ನಿಂದ ಬಂದ ಟಿಕೆಟ್ ನಿರಾಕರಿಸಿದ್ದರಿಂದ ಅವರು ಪಕ್ಷವನ್ನು ತೊರೆದಿದ್ದರು.  ಈಗ ಎಟ್ಟುಮನೂರಿನಿಂದ ಸ್ವತಂತ್ರರಾಗಿ ಸ್ಪರ್ಧಿಸುತ್ತಿದ್ದಾರೆ.

ಇಂತಹ ರಾಜಕೀಯ ಬೆಳವಣಿಗೆಗಳು ಯಾವುದೇ ರಾಜಕೀಯ ತತ್ವಾದರ್ಶಗಳಿಲ್ಲದಂತೆ ನಮಗೆ ಸಾಮಾನ್ಯವಾಗಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಕಂಡು ಬರುತ್ತದೆ ಎಂದು ಕೇರಳ ವಿಶ್ವ ವಿದ್ಯಾಲಯದ ಮಾಜಿ ರಾಜಕೀಯ ಶಾಸ್ತ್ರದ ಪ್ರೊ. ಪ್ರಭಾಸ್ ಪಿಟಿಐ ಸುದ್ದಿ ಸಂಸ್ಥೆಗೆ ಅಭಿಪ್ರಾಯ ತಿಳಿಸಿದ್ದಾರೆ.

“ಯು ಡಿ ಎಫ್‌ ನಲ್ಲಿ ಇಂತಹ ಬೆಳವಣಿಗೆಗಳು ಹೆಚ್ಚು ಪ್ರಚಲಿತದಲ್ಲಿತ್ತು. ಹಿಂದಿನ ಯು ಡಿ ಎಫ್ ಸಚಿವಾಲಯದಲ್ಲಿ, ಆರು ಮಂತ್ರಿಗಳು ಪ್ರಮುಖ ರಾಜಕಾರಣಿಗಳ ಪುತ್ರರಾಗಿದ್ದರು” ಎಂದು ವಕೀಲ ಹಾಗೂ ರಾಜಕೀಯ ವಿಶ್ಲೇಷಕರಾದ ಎ ಜಯಶಂಕರ್ ಅಭಿಪ್ರಾಯ ಪಟ್ಟಿದ್ದಾರೆ.

ಓದಿ : ಅಸ್ಸಾಂ :  ಬುದ್ಧಿವಂತಿಕೆಯಿಂದ ಮತವನ್ನು ಚಲಾಯಿಸಿ : ಮನಮೋಹನ್ ಸಿಂಗ್

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.