ಕಲಬುರಗಿ-ಮುಂಬೈ ನೇರ ವಿಮಾನ ಆರಂಭ

. ವಿಮಾನ ನಿಲ್ದಾಣ ಎಲ್ಲ ರೀತಿಯಿಂದಲೂ ಸುರಕ್ಷಿತವಾಗಿದೆ

Team Udayavani, Mar 26, 2021, 6:38 PM IST

Flight

ಕಲಬುರಗಿ: ದೇಶದ ವಾಣಿಜ್ಯ ನಗರಿ, ನೆರೆಯ ಮಹಾರಾಷ್ಟ್ರದ ರಾಜಧಾನಿ ಮುಂಬೈ ಹಾಗೂ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ನಡುವೆ
ಗುರುವಾರದಿಂದ ಅಲಯನ್ಸ್‌ ಏರ್‌ ಸಂಸ್ಥೆಯ ನೇರ ವಿಮಾನ ಸಂಚಾರ ಆರಂಭವಾಗಿದೆ. ಇನ್ಮುಂದೆ ಕೇವಲ ಒಂದೂವರೆ ಗಂಟೆಯಲ್ಲಿ ಕಲಬುರಗಿಯಿಂದ
ಮುಂಬೈಗೆ ತಲುಪಬಹುದು ಮತ್ತು ಮುಂಬೈನಿಂದ ಕಲಬುರಗಿಗೆ ಬರಬಹುದಾಗಿದೆ.

ಗುರುವಾರ ಮುಂಬೈನಿಂದ ಹೊರಟ ಮೊದಲ ವಿಮಾನ ಬೆಳಗ್ಗೆ 9:07ಕ್ಕೆ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಮುಂಬೈನಿಂದ ಎಂಟು ಜನ ಪ್ರಯಾಣಿಕರು ಬಂದರು. ಏರ್‌ಪೋರ್ಟ್‌ಗೆ ಇಳಿದ ಕೂಡಲೇ ಅಗ್ನಿಶಾಮಕ ವಾಹನಗಳ ಮೂಲಕ ವಿಮಾನಕ್ಕೆ ವಾಟರ್‌ ಸೆಲ್ಯೂಟ್‌ ಮಾಡಲಾಯಿತು. ನಂತರ ಇಲ್ಲಿನ ವಿಮಾನ ನಿಲ್ದಾಣದಿಂದ ಬೆಳಗ್ಗೆ 9:40ಕ್ಕೆ ಹಾರಾಟ ಆರಂಭಿಸಿತು. ಮುಂಬೈಗೆ ಹೊರಟ ವಿಮಾನದಲ್ಲಿ 22 ಪ್ರಯಾಣಿಕರು ತೆರಳಿದರು.

70 ಸೀಟು ಸಾಮರ್ಥ್ಯದ ಈ ವಿಮಾನವು ವಾರದ ಎಲ್ಲ ದಿನವೂ ಮುಂಬೈ-ಕಲಬುರಗಿ ಮಧ್ಯೆ ವಿಮಾನ ಹಾರಾಟ ನಡೆಸಲಿದೆ. ನಿತ್ಯ ಮುಂಬೈನಿಂದ ಬೆಳಗ್ಗೆ 7:20ಕ್ಕೆ ಹೊರಡಲಿದೆ. 9 ಗಂಟೆಗೆ ಇಲ್ಲಿಗೆ ಬಂದಿಳಿಯಲಿದೆ. ಮರಳಿ ಕಲಬುರಗಿ ಯಿಂದ 9:25ಕ್ಕೆ ತೆರಳಿ, 10:55ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯಲಿದೆ.

ಅಲಯನ್ಸ್‌ ಏರ್‌ ಮತ್ತು ಸ್ಟಾರ್‌ ಏರ್‌ ಸಂಸ್ಥೆಗಳು ಈಗಾಗಲೇ ಕಲಬುರಗಿಯಿಂದ ಬೆಂಗಳೂರು, ದೆಹಲಿ, ತಿರುಪತಿ ನಡುವೆ ವಿಮಾನ ಸಂಚಾರ ನಡೆಸುತ್ತಿವೆ. ಇದೀಗ ಮುಂಬೈಗೂ ವಿಮಾನ ಸೇವೆ ಆರಂಭವಾಗಿರುವುದರಿಂದ ಕಡಿಮೆ ಅವಧಿಯಲ್ಲಿ ಕಲಬುರಗಿ ವಿಮಾನ ನಿಲ್ದಾಣದ ತನ್ನ ವ್ಯಾಪ್ತಿಯನ್ನು 4 ಪ್ರಮುಖ ನಗರಗಳಿಗೆ ವಿಸ್ತರಿಸಿಕೊಂಡಂತೆ ಆಗಿದೆ.

ಕೊರೊನಾ ಮುನ್ನೆಚ್ಚರಿಕೆ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಹಾವಳಿ ಹೆಚ್ಚಾಗಿರುವ ಮಧ್ಯೆಯೂ ಅಲಯನ್ಸ್‌ ಏರ್‌ ವಿಮಾನ ಹಾರಾಟ ಸಂಚಾರ ಆರಂಭಿಸಿದೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಅನುಸರಿಸಲಾಗುತ್ತಿದೆ. ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆಯ ಆರ್ ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯವಾಗಿ ಮಾಡಲಾಗಿದೆ. ಕೊರೊನಾ ಕುರಿತ ತಪಾಸಣೆಗಾಗಿ ನಾಗರಿಕ ವಿಮಾನಯಾನ ಇಲಾಖೆ, ರಾಜ್ಯ ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜಿಸಲಾಗಿದೆ.

ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ರೀನಿಂಗ್ ಮತ್ತು ಮಾಸ್ಕ್ ಧರಿಸುವಿಕೆ ಕಡ್ಡಾಯ ಮಾಡುವುದರೊಂದಿಗೆ ಕೊರೊನಾ ನೆಗೆಟಿವ್‌ ವರದಿ ತರದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲೇ ಮಾದರಿ ಸಂಗ್ರಹಿಸುವ ವ್ಯವಸ್ಥೆ ಮಾಡಲಾಗಿದೆ. ಮುಂಬೈನಿಂದ ಬರುವ ಪ್ರಯಾಣಿಕರಿಗೆ ಕೊರೊನಾ ನೆಗೆಟಿವ್‌ ವರದಿ ಅಗತ್ಯವಾಗಿದೆ.
ವರದಿ ಹೊಂದಿರದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆರ್‌ಟಿ-ಪಿಸಿಆರ್‌ ಪರೀಕ್ಷೆ ಮಾಡಲಾಗುತ್ತದೆ. ಅಲ್ಲದೇ, ರ್ಯಾಪಿಡ್‌ ಪರೀಕ್ಷೆ ಸಹ ಮಾಡುವ ವ್ಯವಸ್ಥೆ ಇದೆ. ಯಾವುದೇ ಭೀತಿ ಇಲ್ಲದೇ ಪ್ರಯಾಣಿಸಬಹುದು. ವಿಮಾನ ನಿಲ್ದಾಣ ಎಲ್ಲ ರೀತಿಯಿಂದಲೂ ಸುರಕ್ಷಿತವಾಗಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ನಿರ್ದೇಶಕ ಜ್ಞಾನೇಶ್ವರರಾವ್ ತಿಳಿಸಿದ್ದಾರೆ.

ವಾಣಿಜ್ಯ ಟಿಕೆಟ್‌ ದರ
ಕಲಬುರಗಿ ಮತ್ತು ಮುಂಬೈ ನಡುವಿನ ವಿಮಾನದ ಪ್ರಯಾಣ ಟಿಕೆಟ್‌ ದರವು ವಾಣಿಜ್ಯವಾಗಿದೆ. ಹೀಗಾಗಿ ಟಿಕೆಟ್‌ ಬೆಲೆಯಲ್ಲಿ ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ. ಉಡಾನ್ ಯೋಜನೆಯಡಿ ಆಗಿದ್ದರೆ ಅಗ್ಗದ ದರದಲ್ಲಿ ಪ್ರಯಾಣಿಸಬಹುದಾಗಿತ್ತು. ವಿಮಾನದ ಒಟ್ಟು ಸೀಟುಗಳಲ್ಲಿ ಶೇ.50 ಸೀಟುಗಳಿಗೆ ಟಿಕೆಟ್‌ನಲ್ಲಿ ವಿನಾಯಿತಿ ದೊರೆಯುತ್ತಿತ್ತು.

ಕಲಬುರಗಿ ಮತ್ತು ಮುಂಬೈ ನಡುವೆ ವಿಮಾನ ಹಾರಾಟಕ್ಕಾಗಿ ಸಾಕಷ್ಟು ಬಹು ಬೇಡಿಕೆ ಇತ್ತು. ಇದೀಗ ಅಲಯನ್ಸ್‌ ಏರ್‌ ಸಂಸ್ಥೆಯ ನೇರ ವಿಮಾನ ಸಂಚಾರ ಆರಂಭಿಸುವ ಮೂಲಕ ಜನರ ನಿರೀಕ್ಷೆ ಪೂರೈಸಿದೆ . ಈ ವಿಮಾನ ಕಲಬುರಗಿ ಮಾತ್ರವಲ್ಲದೇ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ಜಿಲ್ಲೆಗಳ ಜನರಿಗೆ ಉಪಯೋಗವಾಗಲಿದೆ.
ಜ್ಞಾನೇಶ್ವರರಾವ್‌, ನಿರ್ದೇಶಕ,
ಕಲಬುರಗಿ ವಿಮಾನ ನಿಲ್ದಾಣ

ಟಾಪ್ ನ್ಯೂಸ್

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.