ಎಎಪಿ ಅಭ್ಯರ್ಥಿ ಕಣಕ್ಕಿಳಿಸಲು ಚಿಂತನೆ: ಬಾಟಿ
Team Udayavani, Mar 26, 2021, 7:54 PM IST
ಸಿಂದಗಿ : ಸಿಂದಗಿ ಉಪ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಅಭ್ಯರ್ಥಿ ಕಣಕ್ಕಿಳಿಸಲು ಕಾರ್ಯಕರ್ತರೊಂದಿಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಉಸ್ತವಾರಿ ರೋಮಿಯೊ ಬಾಟಿ ಹೇಳಿದರು.
ಪಟ್ಟಣದ ಆಮ್ ಆದ್ಮಿ ಪಾರ್ಟಿ ತಾಲೂಕು ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬರುವ ತಾಪಂ-ಜಿಪಂ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಆಮ್ ಆದ್ಮಿ ಪಾರ್ಟಿ ಜಾತ್ಯತೀತ ಹಾಗೂ ಪ್ರಾಮಾಣಿಕ ಪಕ್ಷ. ಅಭಿವೃದ್ಧಿ ಮಂತ್ರದೊಂದಿಗೆ ದೆಹಲಿಯಲ್ಲಿ ಪಕ್ಷದ ಆಡಳಿತ ನಡೆಸುತ್ತಿದ್ದು, 2.37 ಕೋಟಿ ಜನರಿಗೆ ದಿನಕ್ಕೆ ಒಂದು ಕುಟುಂಬಕ್ಕೆ ಎರಡು ಸಾವಿರ ಲೀಟರ್ ನೀರು ಉಚಿತವಾಗಿ ನೀಡಲಾಗುತ್ತಿದೆ. ಸಿದ್ಧಾಂತ ಒಪ್ಪಿಕೊಂಡು ಪಕ್ಷಕ್ಕೆ ಆಗಮಿಸಲು ಸರ್ವರಿಗೂ ಸ್ವಾಗತ. ಆದ್ದರಿಂದ ಪಕ್ಷದ ಹೆಲ್ಪ್ಲೈನ್ 7669400410 ನಂಬರ್ ಬಿಡುಗಡೆ ಮಾಡಲಾಗಿದೆ.
ಈ ನಂಬರ್ ನಿಂದ ಸಹಾಯ ಪಡೆಯಬಹುದು ಎಂದರು. ಇದೇ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿಯ ಹೆಲ್ಪ್ಲೈನ್ 7669400410 ನಂಬರ್ ಅನಾವರಣಗೊಳಿಸಲಾಯಿತು. ರಾಜ್ಯ ಸಂಘಟನಾ ಕಾರ್ಯದರ್ಶಿ ದರ್ಶನ್ ಜೈನ್, ವಿ. ಗೋಪಾಲ ಮಾತನಾಡಿದರು. ಆಮ್ ಆದ್ಮಿ ಪಾರ್ಟಿ ಜಿಲ್ಲಾಧಕ್ಷ ರೋಹನ್ ಐನಾಪುರ ಮಾತನಾಡಿ, ಆಮ್ ಆದ್ಮಿ ಪಾರ್ಟಿ ತತ್ವ-ಸಿದ್ಧಾಂತಗಳು, ಅಭಿವೃದ್ಧಿ ಕಾರ್ಯ ಪ್ರತಿಯೊಬ್ಬರಿಗೂ ಗೊತ್ತಿರುವ ವಿಷಯ. ರಾಜ್ಯಾದ್ಯಂತ ಸಂಚರಿಸಿ ಪಕ್ಷಕ್ಕೆ ಶಕ್ತಿ ತುಂಬಲಾಗುತ್ತಿದೆ.
ಪ್ರತಿಯೊಬ್ಬರಿಗೂ, ಪ್ರತಿ ಪಕ್ಷದವರಿಗೂ ಪಕ್ಷ ಸೇರ್ಪಡೆಗೆ ಸ್ವಾಗತವಿದೆ ಎಂದರು. ಈ ವೇಳೆ ಆಮ್ ಆದ್ಮಿ ಪಾರ್ಟಿ ತಾಲೂಕು ಅಧ್ಯಕ್ಷ ಶಬ್ಬೀರಪಟೇಲ ಬಿರಾದಾರ, ತಾಲೂಕು ವಕ್ತಾರ ಜಗದೀಶ ಕಲಬುರ್ಗಿ, ತಾಲೂಕು ಕಾರ್ಯಕಾರಿಣಿ ಸದಸ್ಯ ಅಶೋಕ ಕೊರಳ್ಳಿ, ಸಿದ್ದರಾಮ ವರಕೇರಿ, ಹಣಮಂತ್ರಾಯಗೌಡ ಬಿರಾದಾರ ಬಂದಾಳ, ಸದಾನಂದ ಧರಿಕರ, ಪರಶುರಾಮ ಉಣ್ಣಿಜಾಡಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ