ಏಳು ವರ್ಷಗಳ ಸತತ ಹೋರಾಟ : ಧರಣಿಗೆ ಒಲಿದ ಹಕ್ಕುಪತ್ರ
Team Udayavani, Mar 27, 2021, 2:30 AM IST
ಪುತ್ತೂರು: ಕಳೆದ ಏಳು ವರ್ಷ ದಿಂದ ಹಕ್ಕುಪತ್ರ ನೀಡುವಂತೆ ಕಂದಾಯ ಇಲಾಖೆಯ ಕಚೇರಿಗೆ ಅಲೆದಾಟ ನಡೆಸುತ್ತಿದ್ದ ಆರ್ಯಾಪು ಗ್ರಾಮದ ಮಚ್ಚಿಮಲೆ ಸೀತಮ್ಮ ಅವರಿಗೆ ಕೊನೆಗೂ ಮಿನಿವಿಧಾನ ಸೌಧದ ಮುಂಭಾಗದಲ್ಲಿನ ಧರಣಿ ಸ್ಥಳದಲ್ಲೇ 94ಸಿಸಿ ಹಕ್ಕುಪತ್ರ ದೊರೆತಿದೆ.
ಸೀತಮ್ಮ ಅವರಿಗೆ 94ಸಿಸಿ ಹಕ್ಕು ಪತ್ರ ಸಿಗದಿರುವ ಹಿನ್ನಲೆಯಲ್ಲಿ ಮಾ.26 ರಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರ ನೇತೃತ್ವದಲ್ಲಿ ಪುತ್ತೂರು ಮಿನಿ ವಿಧಾನಸೌಧದ ಮುಂಭಾಗ ಧರಣಿ ನಡೆಯಿತು. ಧರಣಿಗೆ ಮಣಿದ ಕಂದಾಯ ಇಲಾಖೆ ಮಧ್ಯಾಹ್ನ 12 ಗಂಟೆ ವೇಳೆ ಸೀತಮ್ಮ ಅವರಿಗೆ ಹಕ್ಕುಪತ್ರ ನೀಡುವ ಮೂಲಕ ಹಲವು ವರ್ಷಗಳ ಪ್ರಕರಣ ಸುಖಾಂತ್ಯ ಕಂಡಿತು.
ಏಳು ವರ್ಷದ ಗೋಳು
ಮಚ್ಚಿಮಲೆ ಸೀತಮ್ಮ ಅವರು ನಗರ ಸಭಾ ವ್ಯಾಪ್ತಿಗೆ ಸೇರಿರುವ ಆರ್ಯಾಪು ಗ್ರಾಮದ ಮಚ್ಚಿಮಲೆಯಲ್ಲಿ 3 ಸೆಂಟ್ಸ್ ಸರಕಾರಿ ಜಾಗದಲ್ಲಿ ಮನೆ ಕಟ್ಟಿದ್ದರು. ಆಧಾರ್, ಪಡಿತರ ಸೌಲಭ್ಯ ಹೊಂದಿರುವ ಕಾರಣ 94ಸಿಸಿ ಅಡಿ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಕಳೆದ ಏಳು ವರ್ಷಗಳಿಂದ ಕಂದಾಯ ಇಲಾಖೆ ಹಕ್ಕುಪತ್ರ ನೀಡಿರಲಿಲ್ಲ. ಜಾಗದ ಹಕ್ಕಿನ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತು. ಕಂದಾಯ ಇಲಾಖೆಯಲ್ಲಿ ಕೆಲಸ ನಿರ್ವ ಹಿಸುವ ಸಿಬಂದಿಯೋರ್ವರ ಜಮೀನಿನಲ್ಲಿ ಈ ಮನೆ ಇದೆ ಎಂಬ ನೆಪವೊಡ್ಡಿ ಇಲಾಖೆ ಹಕ್ಕುಪತ್ರ ನಿರಾಕರಿಸುತ್ತಿರುವ ಬಗ್ಗೆ ಮಹಿಳೆ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರ ಗಮನಕ್ಕೆ ತಂದಿದ್ದರು.
ಮಾ. 8ರಂದು ಮಹಿಳೆಯ ಸಮಸ್ಯೆಯ ಬಗ್ಗೆ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್, ಸಹಾಯಕ ಆಯುಕ್ತರೊಂದಿಗೆ ಚರ್ಚಿಸಿದ ಶಕುಂತಳಾ ಟಿ. ಶೆಟ್ಟಿ ಮಾ. 25ರೊಳಗೆ ಹಕ್ಕುಪತ್ರ ನೀಡದೆ ಇದ್ದಲ್ಲಿ ಧರಣಿ ಕೂರುವ ಎಚ್ಚರಿಕೆ ನೀಡಿದ್ದರು.
ರಸ್ತೆಗೆ ಅಡ್ಡಿಪಡಿಸಿದರೆ ಹೋರಾಟ: ಎಚ್ಚರಿಕೆ
ಹಕ್ಕುಪತ್ರ ವಿತರಣೆ ಬಳಿಕ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಸೀತಮ್ಮ ಅವರ ಮನೆ ಸಂಪರ್ಕ ರಸ್ತೆ ಮುಚ್ಚುವ ಹುನ್ನಾರ ನಡೆಯುತ್ತಿರುವ ಮಾಹಿತಿ ಇದೆ. ಪೊಲೀಸ್, ಕಂದಾಯ ಇಲಾಖೆ ಅವರಿಗೆ ರಕ್ಷಣೆ ನೀಡಬೇಕು. ಒಂದು ವೇಳೆ ತೊಂದರೆ ಉಂಟಾದಲ್ಲಿ ಮತ್ತೆ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು. ತೊಂದರೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ರಮೇಶ್ ಬಾಬು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ