ಡಾ| ಸಂಧ್ಯಾ ಎಸ್‌. ಪೈ ಸಹಿತ ಐವರಿಗೆ ಮಾಸ್ತಿ ಪ್ರಶಸ್ತಿ ಪ್ರದಾನ


Team Udayavani, Mar 28, 2021, 11:40 AM IST

sandhya pai got  Masti Award

ಬೆಂಗಳೂರು: ಮಾಸ್ತಿ ವೆಂಟಕೇಶ್‌ ಅಯ್ಯಂಗಾರ್‌ ಟ್ರಸ್ಟ್‌ನ 2020ನೇ ಸಾಲಿನ ಮಾಸ್ತಿ ಪ್ರಶಸ್ತಿಯನ್ನು “ತರಂಗ’ ವಾರಪತ್ರಿಕೆಯ ವ್ಯವ ಸ್ಥಾಪಕ ಸಂಪಾದಕರಾದ ಡಾ| ಸಂಧ್ಯಾ ಎಸ್‌. ಪೈ, ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ, ಎಸ್‌. ಆರ್‌. ವಿಜಯಶಂಕರ್‌, ಕೇಶವ ರೆಡ್ಡಿ ಹಂದ್ರಾಳ ಮತ್ತು ಎಸ್‌. ರಘುನಾಥ್‌ ಅವರಿಗೆ ಪ್ರದಾನಿಸಲಾಯಿತು.
ನಗರದ ಭಾರತೀಯ ವಿದ್ಯಾ ಭವನದ ಸಭಾಂಗಣದಲ್ಲಿ ಶನಿವಾರ ಜರಗಿದ ಸಮಾರಂಭದಲ್ಲಿ ಜನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿ ಡಾ| ಬಿ. ಎ. ವಿವೇಕ್‌ ರೈ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಗೆ ಆಯ್ಕೆಯಾಗಿದ್ದ ಪ್ರೊ| ಪುರುಷೋತ್ತಮ ಬಿಳಿಮಲೆ ಅವರು ಅನಾರೋಗ್ಯದ
ಕಾರಣದಿಂದ ಗೈರಾಗಿದ್ದರು.

ಸಾಹಿತ್ಯದಲ್ಲಿ ನೈತಿಕತೆಯ ಸ್ಪಷ್ಟತೆ
ವಿಶ್ರಾಂತ ಕುಲಪತಿ ಡಾ| ಬಿ. ಎ.ವಿವೇಕ್‌ ರೈ ಮಾತನಾಡಿ, ಪುರಾಣ, ಇತಿಹಾಸ ಹಾಗೂ ವರ್ತಮಾನವನ್ನು ಒಂದುಗೂಡಿಸಿ, ಪೂರ್ವ ಹಾಗೂ ಪಶ್ಚಿಮದ ಇತಿಹಾಸವನ್ನು ಮುಖಾ
ಮುಖೀ ಮಾಡಿ ಸಣ್ಣಕತೆ, ಕಾದಂಬರಿ, ಸಾಹಿತ್ಯಗಳನ್ನು ಬರೆದಿರುವ ಮಾಸ್ತಿಯವರು ಇಂದಿಗೂ ಪ್ರಸ್ತುತರಾಗಿದ್ದಾರೆ. ಕಾಲ, ದೇಶ ಮತ್ತು ಪರಿಸರದ ಮೂರು ಪರಿ ಮಾಣವನ್ನು ಒಟ್ಟಿಗೆ ತಂದಿದ್ದರು. ಮೌಲ್ಯ ವ್ಯವಸ್ಥೆಯ ಚಿಂತನೆ, ನ್ಯಾಯದ ಪರಿಕಲ್ಪನೆ, ಹೆಣ್ಣು-ಗಂಡಿನ ಸಂಬಂಧದ ಸಂಕೀರ್ಣತೆ, ನೈತಿಕತೆಯ ಸೂಕ್ಷ್ಮ ಅವಲೋಕನವನ್ನು ಮಾಸ್ತಿಯವರು ಬರವಣಿಗೆಯಲ್ಲಿ ಮಾಡಿದ್ದರು ಎಂದರು.
ಐಪಿಸಿ ಸೆಕ್ಷನ್‌ ಮೂಲಕವೇ ತಪ್ಪಿತಸ್ಥ ಹೌದು ಅಥವಾ ಅಲ್ಲ ಎನ್ನುವ ಬಹಳ ಸಂಕುಚಿತವಾದ ವ್ಯವಸ್ಥೆ ನಮ್ಮಲ್ಲಿದೆ. ನೈತಿಕ ನೆಲೆಗಟ್ಟಿನಲ್ಲಿ ನ್ಯಾಯ
ದಾನ ಮಾಡುವ ಚಿಂತನೆಯನ್ನು ಕಳೆದುಕೊಂಡಿದ್ದೇವೆ. ನ್ಯಾಯಾ ಧೀಶರು, ನ್ಯಾಯವಾದಿ ಗಳು ಮಾಸ್ತಿಯವರ ಕಥೆಗಳು ಓದಬೇಕು. ನ್ಯಾಯದಾನಕ್ಕೆ ಇವು ಪೂರಕವಾಗಿವೆ ಎಂದು ಪ್ರೊ| ರೈ ಹೇಳಿದರು.
ಮಾಸ್ತಿ ಟ್ರಸ್ಟ್‌ ಅಧ್ಯಕ್ಷ ಮಾವಿನಕೆರೆ ರಂಗನಾಥ್‌, ಶಿಕ್ಷಣ ತಜ್ಞ ಡಾ| ಗುರುರಾಜ ಕರಜಗಿ ಉಪಸ್ಥಿತರಿದ್ದರು.

ಸಂಸ್ಕೃತಿ, ಸಂಸ್ಕಾರ ತಿಳಿಸುವ ಸಾಹಿತ್ಯ ಅಗತ್ಯ: ಡಾ| ಸಂಧ್ಯಾ ಪೈ

ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ತಿಳಿಸುವ ಯಾವ ಸಾಹಿತ್ಯವೂ ಬರದಿರುವುದು ದೊಡ್ಡ ಕೊರತೆಯಾಗಿದೆ. ಮಕ್ಕಳ ಕಥೆಗಳು ಬರುತ್ತಿವೆ. ಆದರೆ, ಅವುಗಳಲ್ಲಿ ಮಕ್ಕಳು ಅರ್ಥ ಮಾಡಿಕೊಳ್ಳುವುದು ಹಾಗೂ ಕಂಡುಕೊಳ್ಳುವಂತಹದ್ದು ಬಹಳ ಕಡಿಮೆ. ಮಕ್ಕಳಿಗೆ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ತಿಳಿಸುವ ಸಾಹಿತ್ಯಕ್ಕೆ ಪ್ರಸ್ತುತ ಉತ್ತಮ ಬೇಡಿಕೆಯೂ ಇದೆ ಎಂದು ಡಾ| ಸಂಧ್ಯಾ ಎಸ್‌. ಪೈ ಹೇಳಿದರು. ಹಿಂದೆ ಇದ್ದದ್ದು, ಮುಂದೆ ಇರುವಂಥದ್ದನ್ನು ಇಂದಿನ ಮಕ್ಕಳಿಗೆ ನನ್ನ ಭಾಷೆಯಲ್ಲಿ ಬರೆಯುತ್ತಿದ್ದೇನೆ. ದೈವಾನುಗ್ರಹದಿಂದಾಗಿ 27 ವರ್ಷಗಳ ಹಿಂದೆ “ತರಂಗ’ ವಾರಪತ್ರಿಕೆಯ ಸಾಹಿತ್ಯವನ್ನು ವಹಿಸಿಕೊಂಡು, ಬರೆಯುವುದನ್ನು ಆರಂಭಿಸಿದ್ದೆ. ಈವರೆಗೂ ಅದು ಮುಂದುವರಿದಿದ್ದು, ಓದುಗರು ಒಪ್ಪಿಕೊಂಡರು ಎಂದ ಅವರು, ಇಂಥ ಪ್ರಶಸ್ತಿಗಳು ಯುವ ಬರಹಗಾರರಿಗೆ, ಸಾಹಿತಿಗಳಿಗೆ ಪ್ರೋತ್ಸಾಹ ಮತ್ತು ಹೊಸ ವೇದಿಕೆ ಮಾಡಿಕೊಡುತ್ತವೆ. ಜೀವಮಾನದಲ್ಲಿ ಕೆಲವರಿಗಷ್ಟೇ ಸಿಗುವ ಈ ಗೌರವ ನನ್ನ ಪಾಲಿಗೆ ಸಂದಿರುವ ದೊಡ್ಡ ಪ್ರಶಂಸೆಯಾಗಿದೆ ಎಂದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.