ಬೆಂಗಳೂರಿನಿಂದ ಬೆಳಗಾವಿಗೆ ಬಂದ ಸಿಡಿ ಲೇಡಿ ಪೋಷಕರು
Team Udayavani, Mar 28, 2021, 1:05 PM IST
ಬೆಳಗಾವಿ: ರಮೇಶ ಜಾರಕಿಹೊಳಿ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದ ಸಂತ್ರಸ್ತ ಯುವತಿಯ ಹೆತ್ತವರು ಇಂದು (ಮಾ. 28 ) ಎಸ್ಐಟಿ ಅಧಿಕಾರಿಗಳೊಂದಿಗೆ ಬೆಂಗಳೂರಿಂದ ಬೆಳಗಾವಿಗೆ ಬಂದಿದ್ದು, ಈ ಸಮಯದಲ್ಲಿ ಎಸ್ಐಟಿ ಅಧಿಕಾರಿಗಳು ಎಪಿಎಂಸಿ ಠಾಣೆ ಪೊಲೀಸರಿಗೆ ಪೋಷಕರನ್ನು ಒಪ್ಪಿಸಿದ್ದಾರೆ.
ಬೆಳಿಗ್ಗೆ 3 ಗಂಟೆ ಸುಮಾರಿಗೆ ಒಂದು ಪೊಲೀಸ್ ಜೀಪ್ ಸೇರಿ ನಾಲ್ಕು ವಾಹನಗಳಲ್ಲಿ ಎಸಿಪಿ ಪರಮೇಶ್ವರ್ ನೇತೃತ್ವದ 16 ಸಿಬ್ಬಂದಿಯ ಜೊತೆ ಆಗಮಿಸಿರುವ ಪೋಷಕರು ನೇರವಾಗಿ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಆ ಬಳಿಕ ಸತತ ಒಂದೂವರೆ ಗಂಟೆಗಳ ಕಾಲ ಪೊಲೀಸ್ ಠಾಣೆಯಲ್ಲಿ ಕುಳಿತಿದ್ದಾರೆ.
ಇದನ್ನೂ ಓದಿ:ಗತಕಾಲದ ವೈಭವವು ಉಳಿದಿರುವುದು ಬರೀ ನನ್ನ ಕ್ಯಾಮರಾ ಕಣ್ಣುಗಳಲ್ಲಿ…!
ಹಸ್ತಾಂತರ ಪ್ರಕ್ರಿಯೆ ಮುಗಿದ ಬಳಿಕ ಪೋಷಕರಿಂದ ಮಾಹಿತಿ ಪಡೆದ ಎಪಿಎಂಸಿ ಪೊಲೀಸರು ನಿಮ್ಮ ಸ್ವಂತ ಊರು ಬಿಟ್ಟು ಇಲ್ಲಿಗೆ ಯಾಕೆ ಬಂದಿದ್ದು ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿರುವ ಸಿಡಿ ಲೇಡಿ ಪೋಷಕರು ನಾವು ಬೆಳಗಾವಿಯಲ್ಲಿಯೇ ಕೆಲಸ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಆ ಬಳಿಕ ಇವರಿಂದ ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕಿ, ನಿಮಗೆ ಭದ್ರತೆ ಬೇಕಾ ಎಂದು ಸಿಪಿಐ ದಿಲೀಪ್ ಕುಮಾರ್ ಯುವತಿಯ ಪೋಷಕರಲ್ಲಿ ಕೇಳಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ