ಕಲಾವಿದರ ಪ್ರಯತ್ನದಿಂದ ಕಲೆ ಜೀವಂತ


Team Udayavani, Mar 28, 2021, 5:30 PM IST

Art is alive with the efforts of artists

ಕೋಲಾರ: ಜಿಲ್ಲೆಯ ಹಿರಿಯ ರಂಗಭೂಮಿ ಕಲಾವಿದರಾದ ಎನ್‌.ಆರ್‌.ಜ್ಞಾನಮೂರ್ತಿ, ಚೇತನ್‌ಪ್ರಸಾದ್‌, ಬಿ.ವಿ.ವಿ.ಗಿರಿ, ಬಿ.ಎನ್‌. ಅಣ್ಣಯ್ಯಪ್ಪ ಹಾಗೂ ನಾಟಕಕಾರ ಕಾ.ಹು. ಚಾನ್‌ಪಾಷಾರಿಗೆ ರಂಗಗೌರವ ನೀಡುವ ಮೂಲಕ ವಿಶ್ವರಂಗಭೂಮಿ ದಿನಾಚರಣೆಯನ್ನು ತಾಲೂಕಿನ ವೇಮಗಲ್‌ ಜೂನಿಯರ್‌ ಕಾಲೇಜಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕರ್ನಾಟಕ ನಾಟಕ ಅಕಾಡೆಮಿ, ರಂಗ ವಿಜಯಾ ಟ್ರಸ್ಟ್‌ಸಹಯೋಗದೊಂದಿಗೆ ನಡೆದ ವಿಶ್ವರಂಗಭೂಮಿ ದಿನಾಚರಣೆಯನ್ನು ಜಿಲ್ಲೆಯ ಹಿರಿಯ ಕಲಾವಿದ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮದ್ದೇರಿ ಮುನಿರೆಡ್ಡಿ ಉದ್ಘಾಟಿಸಿ, ಕಲೆ ಮತ್ತು ಕಲಾವಿದರಿಗೆ ಅಳಿವಿಲ್ಲ. ಕಲೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಲಕ್ಷಾಂತರ ಮಂದಿ ಕಲಾವಿದರಿದ್ದು, ಅಂತವರೆಲ್ಲರ ಪ್ರಯತ್ನದಿಂದಲೇ ಕಲೆ ಉಳಿದಿದೆ ಎಂದರು.

ಎಲ್ಲರ ಪಾತ್ರವೂ ಮಹತ್ವದ್ದು: ಕುಪ್ಪಂ  ದ್ರಾವಿಡ ವಿಶ್ವವಿದ್ಯಾಲಯದ ಡಾ.ಟಿ.ಎಸ್‌ .ನರಸಿಂಹಪ್ರಸಾದ್‌ ಮಾತನಾಡಿ, ಗ್ರೀಕ್‌ ರಂಗಭೂಮಿಯಿಂದ ಆರಂಭವಾದ ರಂಗಭೂಮಿ ಇತಿಹಾಸವು ಜಗತ್ತಿನಾದ್ಯಂತ ಹರಡಿದ್ದು, ಅನೇಕ ಪ್ರಯೋಗಗಳಿಗೆ ಒಳಪಟ್ಟಿದೆ. ರಂಗಭೂಮಿ ಎಂದರೆ ಕೇವಲ ಕಲಾವಿದರು ಮಾತ್ರವಲ್ಲ. ರಂಗದ ಮೇಲೆ, ತೆರೆ ಮರೆಯಲ್ಲಿ ಕೆಲಸ ಮಾಡುವ ಎಲ್ಲರ ಪಾತ್ರವೂ ಮಹತ್ವದ್ದಾಗಿರುತ್ತದೆ ಎಂದರು.

ರಂಗ ವಿಜಯ ಟ್ರಸ್ಟ್‌ನ ಮಾಲೂರು ವಿಜಿ ಮಾತನಾಡಿ, ವಿಶ್ವರಂಗ ದಿನಾಚರಣೆಯ ಇತಿಹಾಸ ಕುರಿತು ವಿವರಿಸಿ, ಈ ವರ್ಷ ಹೆಲೆನ್‌ ಮಿರೆನ್‌ ಎಂಬ ರಂಗಕಲಾವಿದೆ ದಿನಾಚರಣೆಯ ಸಂದೇಶವನ್ನು ನೀಡುವ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎನ್‌. ಕೃಷ್ಣಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು, ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್‌.ಗಣೇಶ್‌, ರಂಗವಿಜಯ ಟ್ರಸ್ಟ್‌ನ ಗೌರವ ಅಧ್ಯಕ್ಷ ಡಾ.ಗೋವಿಂದರಾಜು ಮಾತನಾಡಿದರು.

ಕಲಾವಿದೆ ಕೊಂಡರಾಜನಹಳ್ಳಿ ಮಂಜುಳ ದುರ್ಗಿ ಎಂಬ ಏಕ ವ್ಯಕ್ತಿ ನಾಟಕವನ್ನು ಪ್ರದರ್ಶಿಸಿ ಗಮನ ಸೆಳೆದರು. ಕಲಾವಿದ ಲಕ್ಷ್ಮೀನಾರಾಯಣ ಕಬೀರರ ದೋಹೆಯನ್ನು ಹಾಡಿ ರಂಜಿಸಿದರು.

ಕುಮಾರಿ ರಕ್ಷಿತಾ, ಗಮಕಿ ವೆಂಕಟರಮಣ, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ನಟರಾಜ್‌ ಇತರರು ಉಪಸ್ಥಿತರಿದ್ದರು. ಉಪನ್ಯಾಸಕ ಜೆ.ಜಿ.ನಾಗ ರಾಜ್‌ ಕಾರ್ಯಕ್ರಮವನ್ನು ನಿರೂಪಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.