ಮೌಲ್ಯದ ಕಡೆ ಕೊಂಡೊಯ್ಯುವ ರಂಗಭೂಮಿ : ಭಂಡಾರಿ


Team Udayavani, Mar 28, 2021, 8:21 PM IST

ಗಹಗಗ

ಸಾಗರ: ರಂಗಭೂಮಿ ಮನುಷ್ಯನೊಳಗಿನ ಪ್ರೇಕ್ಷಕರನ್ನು ಬದಲಾಯಿಸುತ್ತಾ ಮೌಲ್ಯದ ಕಡೆ ಕೊಂಡೊಯ್ಯುತ್ತದೆ. ಇತರ ಎಲ್ಲ ಮಾಧ್ಯಮಗಳಿಗಿಂತ ರಂಗಭೂಮಿ ಮಾಧ್ಯಮ ಪ್ರೇಕ್ಷಕ ಮತ್ತು ನಟನ ನಡುವೆ ನಿಕಟ ಸಂಪರ್ಕ ಹೊಂದಿದ್ದು, ಕಾಲಕಾಲಕ್ಕೆ ಬದಲಾಗುತ್ತಿರುವ ಮೌಲ್ಯವನ್ನು ಜನರ ಬಳಿಗೆ ಕೊಂಡೊಯ್ಯುವ ಕೆಲಸ ಮಾಡುತ್ತಿದೆ ಎಂದು ರಂಗ ವಿಮರ್ಶಕ ವಿಠ್ಠಲ್‌ ಭಂಡಾರಿ ತಿಳಿಸಿದರು.

ಇಲ್ಲಿನ ಎಸ್‌.ಎನ್‌. ನಗರದ ಭೂಮಿ ರಂಗಮನೆಯಲ್ಲಿ ಶನಿವಾರ ಸ್ಪಂದನ ಸಂಸ್ಥೆ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಂಗಭೂಮಿ ಪ್ರೇಕ್ಷಕರ ಜೊತೆ ನೇರ ಅನುಸಂಧಾನ ಮಾಡುವುದರಿಂದ ಇದು ನೋಡುಗರಿಗೆ ಹೆಚ್ಚು ಆಪ್ತ ಎನಿಸುತ್ತದೆ ಎಂದರು.

ಹಲವು ಬದಲಾವಣೆ, ಚಳುವಳಿಗಳು ಮೊದಲ್ಗೊಳ್ಳುವಲ್ಲಿ ರಂಗಭೂಮಿ ಪ್ರಮುಖ ಪಾತ್ರ ವಹಿಸಿದೆ. ಆಯಾ ಕಾಲ, ನಟ, ಪ್ರೇಕ್ಷಕರ ಮನಸ್ಥಿತಿಗೆ ಅನುಗುಣವಾಗಿ ರಂಗಭೂಮಿ ಬದಲಾಗುತ್ತಾ ಬಂದರೂ ಸತ್ಯದರ್ಶನ ಸಂದರ್ಭದಲ್ಲಿ ಯಾವುದೇ ರಾಜಿ ರಂಗಭೂಮಿ ಮಾಡಿಕೊಂಡಿಲ್ಲ. ಕೊರೊನಾದಂತಹ ಸಂದರ್ಭದಲ್ಲಿ ಸಹ ರಂಗಭೂಮಿ, ರಂಗನಟರು ತಮ್ಮದೇ ಆದ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ಇಂತಹ ರಂಗಭೂಮಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ರಂಗ ಸನ್ಮಾನ ಸ್ವೀಕರಿಸಿ ಮಾತನಾಡಿದ ಪರಶುರಾಮ್‌ ಸೂರನಗದ್ದೆ, ಗ್ರಾಮೀಣ ಪ್ರದೇಶದ ಭಾಷೆ, ಪರಿಸರ ಹಾಗೂ ಜನಜೀವನವನ್ನು ರಂಗಭೂಮಿಗೆ ಅಳವಡಿಸಿಕೊಳ್ಳುವ ಪ್ರಯತ್ನವನ್ನು ನಾನು ಮಾಡಿಕೊಂಡು ಬಂದಿದ್ದೇನೆ. ನಾವು ಬದುಕಿನ ಜೊತೆಗೆ ರಂಗಭೂಮಿ ಕಟ್ಟುವ ಕೆಲಸವನ್ನು ಮಾಡುತ್ತಿದ್ದೇವೆ. ರಂಗಭೂಮಿಗೆ ವಿಶೇಷವಾದ ಶಕ್ತಿಯಿದ್ದು ಅದು ವ್ಯಕ್ತಿತ್ವ ವಿಕಸನದ ಜೊತೆಗೆ ಮೌಲ್ಯವನ್ನು ಬಿತ್ತುತ್ತದೆ ಎಂದರು. ವಿಶ್ವರಂಗಭೂಮಿ ದಿನದ ಅಂಗವಾಗಿ ಸೂರನಗದ್ದೆ ಭೀರೇಶ್ವರ ನಾಟ್ಯ ಸಂಘದ ಜೆ. ಪರಶುರಾಮ್‌ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ರೈತಸಂಘದ ಮಂಜುನಾಥ ಗೌಡ, ಎನ್‌.ಡಿ. ವಸಂತಕುಮಾರ್‌, ಶಿವಾನಂದ ಕುಗ್ವೆ, ಸತೀಶ್‌ ಶೆಣೈ ಇನ್ನಿತರರು ಇದ್ದರು. ಎಂ.ವಿ. ಪ್ರತಿಭಾ ರಾಘವೇಂದ್ರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ್‌ ಶೇಟ್‌ ಸನ್ಮಾನಿತರ ಪರಿಚಯ ಮಾಡಿದರು. ಭೂಮಿ ರಂಗಭೂಮಿ ಸಂದೇಶ ಓದಿದರು. ಎಂ.ರಾಘವೇಂದ್ರ ನಿರೂಪಿಸಿದರು. ನಂತರ ನಾಗೇಂದ್ರ ಕುಮಟಾ ಮತ್ತು ಸಂಗಡಿಗರಿಂದ ರಂಗಗೀತೆ ಗಾಯನ ಕಾರ್ಯಕ್ರಮ ನಡೆಯಿತು. ಸ್ಪಂದನ ಸಂಸ್ಥೆ ವತಿಯಿಂದ ಪಿ. ಲಂಕೇಶ್‌ ಮೂಲಕತೆ ಆಧರಿಸಿದ, ಎಂ.ವಿ. ಪ್ರತಿಭಾ ನಿರ್ದೇಶಿಸಿ ರಂಗರೂಪಕ್ಕೆ ತಂದ “ಮುಟ್ಟಿಸಿಕೊಂಡವರು’ ನಾಟಕ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.