ಪರೀಕ್ಷೆ ಇಲ್ಲದೇ ತೇರ್ಗಡೆ: ಗೊಂದಲ ಬೇಡ


Team Udayavani, Mar 29, 2021, 6:40 AM IST

ಪರೀಕ್ಷೆ ಇಲ್ಲದೇ ತೇರ್ಗಡೆ: ಗೊಂದಲ ಬೇಡ

ಶೈಕ್ಷಣಿಕ ವಿಚಾರದಲ್ಲಿ ಕೊರೊನಾ ಸಂದರ್ಭವೂ ಸೇರಿದಂತೆ ಕಳೆದ ವರ್ಷ ಅನುಸರಿಸಲಾಗಿದ್ದ ಗೊಂದಲಗಳೇ ಈ ವರ್ಷವೂ ಮುಂದುವರಿದಿವೆ. ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ| ಕೆ.ಸುಧಾಕರ್‌ ಅವರು, ರವಿವಾರ ಬೆಳಗ್ಗೆ ಒಂದರಿಂದ ಒಂಬತ್ತನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ಪಾಸ್‌ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದರು. ಆದರೆ ಸಂಜೆ ವೇಳೆಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಇಂಥ ಯಾವುದೇ ನಿರ್ಧಾರವಾಗಿಲ್ಲ ಎಂದು ಹೇಳಿ ಮತ್ತೆ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗೊಂದಲಕ್ಕೆ ಸಿಲುಕಿಸಿದ್ದಾರೆ.

ಕಳೆದೊಂದು ತಿಂಗಳಿನಿಂದೀಚೆಗೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಅತ್ಯಂತ ಕ್ಷಿಪ್ರಗತಿಯಲ್ಲಿ ಏರಿಕೆ ಕಾಣುತ್ತಿದೆ. ಸಾವಿನ ಪ್ರಮಾಣ ಕಡಿಮೆಯಾಗಿದ್ದರೂ ಸೋಂಕಿನ ಪ್ರಸರಣದ ತೀವ್ರತೆ ಹೆಚ್ಚಾಗಿದೆ. ಮುಂದಿನ ಒಂದೂವರೆ ತಿಂಗಳ ಕಾಲ ಸೋಂಕಿನ ತೀವ್ರತೆ ಇದೇ ಗತಿಯಲ್ಲಿ ಮುಂದುವರಿಯುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಅಷ್ಟು ಮಾತ್ರವಲ್ಲದೆ ಇದು ರೂಪಾಂತರಿತ ಸೋಂಕು ಎಂಬುದು ಖಚಿತವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.

ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿ ದ್ದರೂ ಹಾಲಿ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ತೆರೆದು ತರಗತಿ ಆರಂಭಿಸುವುದನ್ನು ಒಂದು ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದ ರಾಜ್ಯ ಸರಕಾರ ಅದರಂತೆ 5ನೇ ತರಗತಿಯಿಂದ ಮೇಲ್ಪಟ್ಟ ಎಲ್ಲ ತರಗತಿಗಳನ್ನು ಹಂತಹಂತವಾಗಿ ಆರಂಭಿಸಿತ್ತು. ಎಲ್ಲ ಗೊಂದಲಗಳ ಮಧ್ಯೆಯೂ ಪರೀಕ್ಷೆಗಳನ್ನು ನಡೆಸಲು ಸಿದ್ಧತೆಯನ್ನೂ ನಡೆಸಿತ್ತು. ಶಾಲೆಗಳ ಮಟ್ಟದಲ್ಲಿಯೂ ಒಂದರಿಂದ ಒಂಬತ್ತನೇ ತರಗತಿವರೆಗೆ ಪರೀಕ್ಷೆಗಳನ್ನು ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ.

ಇದರ ನಡುವೆಯೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಈಗಾಗಲೇ ಹಬ್ಬ, ಹರಿದಿನಗಳ ಮೇಲೆ ಸರಕಾರ ನಿರ್ಬಂಧ ಹಾಕಿದೆ. ಜಾತ್ರೆಗಳಲ್ಲಿಯೂ ಹೆಚ್ಚು ಜನ ಸೇರಬಾರದು ಎಂದೂ ಹೇಳಿದೆ. ಹಾಗೆಯೇ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದ್ದು, ಸಾಮಾಜಿಕ ಅಂತರ ಪಾಲನೆ ಮಾಡುವಂತೆಯೂ ಸೂಚಿಸಿದೆ.
ಸೋಂಕು ಹೆಚ್ಚುತ್ತಿರುವಂತೆಯೇ ಪರೀಕ್ಷೆ ರದ್ದು ಮಾಡುವ ವಿಚಾರ ಮುನ್ನೆಲೆಗೆ ಬಂದಿರುವುದು ಸಮಯೋಚಿತ ವಿಚಾರವೇ. ಸದ್ಯ ಕೊರೊನಾ ಹಿಡಿತಕ್ಕೆ ತುತ್ತಾಗದಂತೆ ಮಕ್ಕಳನ್ನು ನೋಡಿಕೊಳ್ಳುವುದು ಅತೀ ಮುಖ್ಯ ವಿಚಾರ. ಅದರಲ್ಲೂ 18 ವರ್ಷ ಒಳಗಿನವರಿಗೆ ಇನ್ನೂ ಲಸಿಕೆಯನ್ನೂ ಪರಿಚಯಿಸಿಲ್ಲ. ಇಂಥ ಹೊತ್ತಿನಲ್ಲಿ ಮಕ್ಕಳ ಪರೀಕ್ಷೆ ರದ್ದು ಮಾಡುವುದು ಉತ್ತಮ ನಿರ್ಧಾರವಾಗುತ್ತದೆ.

ಒಂದು ವೇಳೆ ರಾಜ್ಯ ಸರಕಾರ ಅವಧಿಗೆ ಮುನ್ನವೇ ಬೇಸಗೆ ರಜೆ ಘೋಷಣೆ ಮಾಡಿದಲ್ಲಿ ಮತ್ತು ಕೊರೊನಾ ನಿಯಂತ್ರಣಕ್ಕೆ ಬಂದು ಪರಿಸ್ಥಿತಿ ಸಹಜಸ್ಥಿತಿಗೆ ಮರಳಿದಲ್ಲಿ ಮುಂದಿನ ಶೈಕ್ಷಣಿಕ ವರ್ಷವು ಅವಧಿಗೆ ಮುನ್ನವೇ ಪ್ರಾರಂಭವಾಗುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳು ಮುಂದಿನ ವರ್ಷದ ಪಠ್ಯ ಸಂಬಂಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸರಕಾರ ಕಳೆದ ಬಾರಿಯಂತೆ ರೇಡಿಯೋ, ಟಿವಿ ವಾಹಿನಿಗಳ ಮೂಲಕ ಪಠ್ಯ ಸಂಬಂಧಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿದಲ್ಲಿ ಮಕ್ಕಳು ಶೈಕ್ಷಣಿಕವಾಗಿ ನಿರಂತರತೆಯನ್ನು ಕಾಯ್ದುಕೊಳ್ಳಲು ಸಹಾಯಕವಾಗಲಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.