ಮಿಯ್ಯಾರು: ಹೆದ್ದಾರಿ ಬದಿ ಅರೆಬರೆ ಕಾಮಗಾರಿ, ಅಪಾಯ ಭೀತಿ!


Team Udayavani, Mar 29, 2021, 1:14 AM IST

ಮಿಯ್ಯಾರು: ಹೆದ್ದಾರಿ ಬದಿ ಅರೆಬರೆ ಕಾಮಗಾರಿ, ಅಪಾಯ ಭೀತಿ!

ಕಾರ್ಕಳ : ಬಜಗೋಳಿ ಮಿಯ್ಯಾರು ರಾಷ್ಟ್ರೀಯ ಹೆದ್ದಾರಿಯ ಜೋಡುಕಟ್ಟೆಯ ಕಾಜರ್‌ಬೈಲ್‌ ಸೇತುವೆ ಬಳಿ ರಸ್ತೆ ಕೆಟ್ಟಿದ್ದು, ವಾಹನ ಅಪಘಾತಕ್ಕೆ ಆಹ್ವಾನ ನೀಡುತ್ತಿದೆ.

ಈ ಹೆದ್ದಾರಿಯು ಮಿಯ್ಯಾರು ಪಂಚಾಯತ್‌ ವ್ಯಾಪ್ತಿಯಲ್ಲಿ ಹಾದು ಹೋಗಿದೆ. ರಸ್ತೆ ಬದಿಯಲ್ಲೇ ಕುಡಿಯುವ ನೀರಿನ ಭೂಗತ ಪೈಪ್‌ ಕೂಡ ಹಾದು ಹೋಗಿದ್ದು. ಇತ್ತೀಚೆಗೆ ಅದು ಕೆಟ್ಟು ಹೋದ ಹಿನ್ನೆಲೆಯಲ್ಲಿ ಇದನ್ನು ಸಂಬಂಧಿಸಿದವರು ದುರಸ್ತಿ ಪಡಿಸಿದ್ದಾರೆ. ಕಾಜರ್‌ಬೈಲ್‌ ಸೇತುವೆಯ ಒಂದು ಬದಿ ಅಗೆದು ಕಾಮಗಾರಿ ನಡೆಸಿ, ಪೈಪ್‌ ಮರು ಜೋಡಿಸಿ ಸರಿಪಡಿಸಲಾಗಿದೆ. ರಸ್ತೆ ಅಗೆಯುವಾಗ ಹೆದ್ದಾರಿ ರಸ್ತೆಗೂ ಹಾನಿಯಾಗಿದೆ.

ಅನಂತರದಲ್ಲಿ ಮುಚ್ಚುವಾಗ ಹಾನಿಯಾದ ಸ್ಥಳವನ್ನು ಹಿಂದಿನಂತೆ ಸರಿಯಾಗಿ ಮುಚ್ಚದೆ ಬಿಡಲಾಗಿದೆ. ಗುಂಡಿ ತೋಡಿದ ಜಾಗದಲ್ಲಿ ಕಲ್ಲು ಇಡಲಾಗಿದ್ದು, ಅವು ಮೇಲ್ಭಾಗದಲ್ಲೇ ಇವೆ. ವಾಹನ ಸಂಚರಿಸುವಾಗ ಇವುಗಳು ತೊಂದರೆ ಕೊಡುತ್ತಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನಕ್ಕೆ ಸಹಸ್ರಾರು ವಾಹನಗಳು ವೇಗವಾಗಿ ಸಂಚಾರ ನಡೆಸುತ್ತಿದ್ದು, ಇದೇ ವೇಳೆ ಅಗೆದಿಟ್ಟ ಜಾಗದ ಕಲ್ಲುಗಳಿಂದ ಅಪಾಯ ಸಂಭವಿಸುತ್ತಿವೆ. ಬಹುಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ಇಲ್ಲಿ ಹೆಚ್ಚು ಅಪಘಾತಕ್ಕೆ ಒಳಗಾಗುತ್ತಿರುತ್ತಾರೆ.

ಲಘು, ಘನ ವಾಹನಗಳು ಒಂದಕ್ಕೊಂದು ಸೈಡ್‌ ಕೊಟ್ಟು ತೆರಳುವಾಗ ಸ್ಥಳದಲ್ಲಿನ ಕಲ್ಲುಗಳಿಗೆ ಗುದ್ದಿ ಬೀಳುವ ಸನ್ನಿವೇಶವೇ ಹೆಚ್ಚು. ರಾತ್ರಿ ವೇಳೆ ಹಲವು ಅಪಘಾತಗಳು ಈ ಸ್ಥಳದಲ್ಲಿ ಸಂಭವಿಸಿದ್ದೂ ಇದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಜಾಗವನ್ನು ಇದೇ ರೀತಿ ಇಟ್ಟಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟೂ ಅವಘಡಗಳು ಸಂಭವಿಸಿ ಜೀವಹಾನಿ ಸಂಭವಿಸುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಗುಂಡಿ ತೋಡಿಟ್ಟವರು ವೈಜ್ಞಾನಿಕವಾಗಿ ಹಿಂದಿನಂತೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸರಿಪಡಿಸಿಕೊಡಬೇಕು ಎಂದು ವಾಹನ ಸವಾರರು ಹೇಳುತ್ತಾರೆ.

ಸ್ಥಳ ಪರಿಶೀಲನೆ ನಡೆಸಿ ಕ್ರಮ
ಹೆದ್ದಾರಿ ಬದಿ ಕಾಮಗಾರಿಗೆಂದು ಅಗೆದ ಸ್ಥಳ ಅಪಾಯಕಾರಿ ಸ್ಥಿತಿಯಲ್ಲಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು ನಾನು ಸ್ಥಳ ಪರಿಶೀಲನೆ ನಡೆಸಿ ಅನಂತರ ಅದರ ಬಗ್ಗೆ ಕ್ರಮ ವಹಿಸಲಾಗುವುದು.

-ಮಹಾದೇವ,, ಪಿಡಿಒ . ಮಿಯ್ನಾರು ಗ್ರಾ.ಪಂ.

ರಸ್ತೆ ಮುಚ್ಚದೆ ಹಾಗೆಯೇ ಬಿಡಲಾಗಿದೆ
ಇತ್ತೀಚೆಗೆ ಕಾಮಗಾರಿ ನಡೆಸಲೆಂದು ರಸ್ತೆಯನ್ನು ಅಗೆಯಲಾಗಿತ್ತು. ಅನಂತರ ಇದನ್ನು ಸರಿಯಾಗಿ ಮುಚ್ಚದೆ ಹಾಗೆಯೇ ಬಿಡಲಾಗಿದೆ. ಇಲ್ಲಿ ಸಾಮಾನ್ಯವಾಗಿ ರಾತ್ರಿ ಅಪಘಾತ ಆಗುತ್ತಿರುತ್ತವೆ.
-ಮೇಕ್ಸ್‌ , ಸ್ಥಳೀಯರು

ಟಾಪ್ ನ್ಯೂಸ್

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.