ಜಿಲ್ಲೆ ರಂಗಭೂಮಿಯ ತವರು ಮನೆ


Team Udayavani, Mar 29, 2021, 12:39 PM IST

ಜಿಲ್ಲೆ ರಂಗಭೂಮಿಯ ತವರು ಮನೆ

ಚಾಮರಾಜನಗರ: ಜಿಲ್ಲೆಯು ರಂಗಭೂಮಿಯ ತವರು ಮನೆ ಆಗಿದ್ದು,ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ, ಡಾ.ರಾಜಕುಮಾರ್‌ರಂತಹ ಮಹಾನ್‌ನಟರನ್ನು ನಾಡಿಗೆ ಕೊಡುಗೆಯಾಗಿ ನೀಡಿದೆಎಂದು ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌ ಹೆಮ್ಮೆ ವ್ಯಕ್ತಪಡಿಸಿದರು.

ನಗರದ ರೋಟರಿ ಭವನದ ಆವರಣದಲ್ಲಿ ಕರ್ನಾಟಕ ನಾಟಕ ಅಕಾಡೆಮಿ, ರಂಗವಾಹಿನಿ, ಚೇತನಕಲಾವಾಹಿನಿ, ಜಿಲ್ಲಾ ರಂಗಭೂಮಿಕಲಾವಿದರ ಸಂಘ, ಉಮ್ಮತ್ತೂರು ಗೆಳೆಯರಬಳಗದಿಂದ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ರಂಗಸಂಗೀತೋತ್ಸವ ಹಾಗೂ ರಂಗ ದೃಶ್ಯಾವಳಿ ವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಂಗಭೂಮಿ ನಾಡಿನ ಸಾಂಸ್ಕೃತಿಕ ಬದುಕಿನ ಅವಿಭಾಜ್ಯ ಅಂಗವಾಗಿದ್ದು,ಜೊತೆಗೆ ಸಮಾಜದ ಓರೆಕೋರೆಗಳನ್ನು ತಿದ್ದುವ ಮಾಧ್ಯಮವಾಗಿದೆ. ನಾಟಕಗಳಿಂದ ಉತ್ತಮ ಅಭಿರುಚಿಯನ್ನು ಬೆಳೆಸಬಹುದು. ಜೀವನ ಮೌಲ್ಯಗಳನ್ನುವೃದ್ಧಿಸಿಕೊಳ್ಳಬಹುದು. ಇಂಥರಂಗಭೂಮಿಗೆ ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಹಾಗೂ ವರನಟ ಡಾ.ರಾಜ್‌ಕುಮಾರ್‌ ಅವರನ್ನು ಕೊಡುಗೆಯಾಗಿ ನೀಡಿದ ಹೆಮ್ಮೆ ನಮ್ಮಚಾಮರಾಜನಗರ ಜಿಲ್ಲೆಯದ್ದಾಗಿದೆ. ರಂಗಭೂಮಿಯಿಂದ ಬಂದ ಪ್ರತಿಭೆ ರಾಜ್‌ಕುಮಾರ್‌ ಅವರು ಇಡೀ ದೇಶವೇಮೆಚ್ಚುವಂಥ ನಟರಾಗಿ ಬೆಳೆದರು ಎಂದು ಶ್ಲಾಘಿಸಿದರು.

ಕಾಮಗಾರಿ ವಿಳಂಬಕ್ಕೆ ಬೇಸರ: ಜಿಲ್ಲೆಯಲ್ಲಿ ರಂಗಭೂಮಿ ಕಲಾವಿದರ ಕಲಾಪ್ರದರ್ಶನಕ್ಕೆ ರಂಗಮಂದಿರ ನಿರ್ಮಾಣ ಕಾರ್ಯವು ವಿಳಂಬವಾಗಿ ನಡೆಯುತ್ತಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ ಶಾಸಕ ಮಹೇಶ್‌, ಜಿಲ್ಲಾಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಆದಷ್ಟು ಬೇಗ ರಂಗಮಂದಿರನಿರ್ಮಾಣ ಕಾಮಗಾರಿಯನ್ನು ಮುಗಿಸಿಕಲಾವಿದರ ಕಲಾ ಪ್ರದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಹೇಳಿದರು.

ಕಲಾವಿದರಿಗೆ ನೆರವು ನೀಡಲಿ: ರಂಗಭೂಮಿಯ ವೇದಿಕೆಯ ಮೇಲೆರಾಜನಾಗಿದ್ದ ಕಲಾವಿದರು, ನಿಜಜೀವನದಲ್ಲಿ ಕಡುಬಡತನದಲ್ಲಿ ಜೀವನಸಾಗಿಸುತ್ತಿರುತ್ತಾರೆ. ಅವರ ಕೊನೆಗಾಲದಲ್ಲಿಆರೋಗ್ಯ ಹದಗೆಟ್ಟು ತುಂಬಾ ಕಷ rಅನುಭವಿಸುತ್ತಾರೆ. ಇಂತಹ ಕಲಾವಿದರಿಗೆಸರ್ಕಾರ ಹೆಚ್ಚಿನ ನೆರವು ನೀಡಬೇಕು ಎಂದು ಹೇಳಿದರು.

ಸುಭದ್ರಮ್ಮ ಮನ್ಸೂರ್‌ ರಂಗ ಪ್ರಶಸ್ತಿ: ವಿಶ್ವ ರಂಗಭೂಮಿ ದಿನಾಚರಣೆ ಪ್ರಯುಕ್ತ ಬ್ರಿಟನ್‌ ರಂಗನಿರ್ದೇಶಕಿ ಹೆಲೆನ್‌ ಮಿರೇನ್‌ ಅವರು ರವಾನಿಸಿದ್ದ ರಂಗ ಸಂದೇಶವನ್ನುಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ರಂಗಕರ್ಮಿ ಕೆ.ವೆಂಕಟರಾಜು ಅವರು ಓದಿದರು. ನಾಟಕಶಿಕ್ಷಕಿಯಾಗಿ ರಂಗ ನಿರ್ದೇಶಕಿಯಾಗಿ, ನಟಿಯಾಗಿ ಸಾಧನೆಗೈದ ಚಿತ್ರಾವೆಂಕಟರಾಜುಗೆ ನಾಡೋಜ ಸುಭದ್ರಮ್ಮ ಮನ್ಸೂರ್‌ ರಂಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ರಂಗ ವಾಹಿನಿ ಸಂಸ್ಥೆ ಅಧ್ಯಕ್ಷ ಸಿಎಂ ನರಸಿಂಹಮೂರ್ತಿ,ಜಿಲ್ಲಾ ರಂಗಭೂಮಿ ಕಲಾವಿದರ ಸಂಘದಅಧ್ಯಕ್ಷ ಘಟಂ ಕೃಷ್ಣ, ರೋಟರಿ ಸಂಸ್ಥೆ ಅಧ್ಯಕ್ಷಪ್ರಕಾಶ್‌, ಜಿಪಂ ಸದಸ್ಯ ಬಾಲರಾಜ್‌ ಭಾಗವಹಿಸಿದ್ದರು. ರಾಜ್ಯ ದಲಿತ ಮಹಾಸಭಾ ಅಧ್ಯಕ್ಷ ವೆಂಕಟರಮಣಸ್ವಾಮಿ ( ಪಾಪು) ಅಧ್ಯಕ್ಷತೆ ವಹಿಸಿದ್ದರು.

ಸಂತೆಮರಹಳ್ಳಿ ಎಂಪಿ ರಾಜು, ಬಿಎಂ ಮಹದೇವಯ್ಯ ಆರ್‌.ಎಂ. ನಾಗರಾಜು,ಅರುಣ್‌ಕುಮಾರ್‌ ಮಾಂಬಳ್ಳಿ, ವಿಮಹದೇವಯ್ಯ( ಆಪು), ಬಾಗಳಿರಾಜಶೇಖರ್‌, ಉಮ್ಮತ್ತೂರು ಬಸವಣ್ಣ,

ಎಂ. ಎನ್‌.ಮಹಾದೇವ, ಶಿವನಂಜಯ್ಯರಾಮಸಮುದ್ರ, ಕಿರಣಗಿರ್ಗಿ ಭಾಗವಹಿಸಿದ್ದರು. ರಂಗ ದೃಶ್ಯಾವಳಿಯಲ್ಲಿ ಉಮ್ಮತ್ತೂರು ಬಸವರಾಜು ದಕ್ಷ ನಾಗಿ, ಈಶ್ವರನಾಗಿ ಸೂರ್ಯಮೂರ್ತಿ, ನಾರದನಾಗಿ ವೆಂಕಟರಮಣಸ್ವಾಮಿ, ಭೃಗುವಾಗಿ ಹಳ್ಳಿಕೆರೆಹುಂಡಿ ಗುರು ಜಾಲ ಬ್ರಹ್ಮನಾಗಿಪಿ.ಲಿಂಗಯ್ಯ, ಸತಿ ಪಾತ್ರದಲ್ಲಿ ಮಂಡ್ಯದಪವಿತ್ರ ಅವರು ಮನೋಜ್ಞ ಅಭಿನಯ ನೀಡಿ ಕಲಾಭಿಮಾನಿಗಳ ಗಮನ ಸೆಳೆದರು.

ಟಾಪ್ ನ್ಯೂಸ್

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.