ಈ ವರ್ಷವೂ 28 ಕೋಟಿ ಅನುದಾನ ವಾಪಸ್‌!


Team Udayavani, Mar 29, 2021, 5:28 PM IST

ಈ ವರ್ಷವೂ 28 ಕೋಟಿ ಅನುದಾನ ವಾಪಸ್‌!

ಗಂಗಾವತಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ವ್ಯಾಪ್ತಿಯ ರೈತರಿಗೆ ಪ್ರತ್ಯಕ್ಷ ಪರೋಕ್ಷವಾಗಿ ನೆರವಾಗಲು ರಾಜ್ಯ ಸರಕಾರ ತನ್ನ ಬಜೆಟ್‌ನಲ್ಲಿ ಕೋಟ್ಯಂತರ ರೂ. ಗಳನ್ನು ಮೀಸಲಿಡುತ್ತದೆ. ಅಧಿಕಾರಿಗಳು-ಜನಪ್ರತಿನಿಧಿಗಳ ನಿರ್ಲಕ್ಷ್ಯದ ಫಲವಾಗಿ ಕಳೆದ 6 ವರ್ಷಗಳಿಂದ ಕ್ರಿಯಾಯೋಜನೆ ಇಲ್ಲದೇ ಅನುದಾನ ವಾಪಸ್‌ ಹೋಗುತ್ತಿದೆ.

2020-21 ನೇ ಸಾಲಿನಲ್ಲಿ ಕಾಡಾ ಪ್ರದೇಶದ ವ್ಯಾಪ್ತಿಯಲ್ಲಿ ಖರ್ಚು ಮಾಡಲು ರಾಜ್ಯ ಸರಕಾರ28 ಕೋಟಿ ರೂ.ಗಳನ್ನು ಮೀಸಲಿರಿಸಿದ್ದರೂಅದನ್ನು ಖರ್ಚು ಮಾಡದೇ ನಿರ್ಲಕ್ಷé ವಹಿಸಿದ್ದರಿಂದ ಮಾರ್ಚ್‌ 31 ನಂತರ ಈಹಣವನ್ನು ಸರಕಾರ ವಾಪಸ್‌ ಪಡೆಯಲಿದೆ. ತುಂಗಭದ್ರಾ ಕಾಡಾ ವ್ಯಾಪ್ತಿಯ ರಾಯಚೂರು ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ರೈತರಿಗೆ ಮತ್ತು ಪರೋಕ್ಷವಾಗಿ ಕೃಷಿಗೆನೆರವಾಗಲು ಸರಕಾರ ಪ್ರತಿ ವರ್ಷ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸುತ್ತದೆ. ಈ ಹಣವನ್ನುಕಾಡಾ ಅಧಿಕಾರಿಗಳು ಕ್ರಿಯಾಯೋಜನೆ ಸಿದ್ಧ ಮಾಡಿ ಹಣ ಖರ್ಚು ಮಾಡಬೇಕಾಗುತ್ತದೆ.

ಪ್ರಸಕ್ತ ವರ್ಷ ಸರಕಾರ 28 ಕೋಟಿ ರೂ.ಗಳನ್ನು ತುಂಗಭದ್ರಾ ಕಾಡಾಗೆ ಮಂಜೂರು ಮಾಡಿತ್ತು.ಸಿಬ್ಬಂದಿ ಕೊರತೆ ನೆಪದಲ್ಲಿ ಇಲ್ಲಿಯ ಆಡಳಿತಾಧಿಕಾರಿಗಳು ಕ್ರಿಯಾ ಯೋಜನೆ ತಯಾರು ಮಾಡದೇ ಇರುವ ಕಾರಣ ಹಣ ಮರಳಿಹೋಗುತ್ತಿದೆ. ಈ ಕುರಿತು ಅಚ್ಚುಕಟ್ಟು ವ್ಯಾಪ್ತಿಯ ಸಂಸದರು ಶಾಸಕರು-ಸಚಿವರು-ವಿಧಾನ ಪರಿಷತ್‌ ಸದಸ್ಯರಿಗೆ ಮಾಹಿತಿ ಇದ್ದರೂ ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಪ್ರಕ್ರಿಯೆ ಕಳೆದ ಆರು ವರ್ಷಗಳಿಂದ ನಡೆಯುತ್ತಿದ್ದರೂ ಈ ಭಾಗದರೈತರು ನೀರು ಬಳಕೆದಾರರ ಸಂಘದವರು ಚಕಾರವೆತ್ತುತ್ತಿಲ್ಲ.

ಅಚ್ಚುಕಟ್ಟು ಪ್ರದೇಶದಲ್ಲಿ ರೈತರ ಹೊಲ ಗದ್ದೆಗಳಿಗೆ ಹೋಗಲು ರಸ್ತೆ,ಗೋಡೌನ್‌, ನೀರು ಬಳಕೆದಾರರಸಹಕಾರಿ ಸಂಘದ ಕಟ್ಟಡ ನಿರ್ಮಾಣ ರಿಪೇರಿ, ಬೆಳೆ ಒಕ್ಕಲು ಕಣ,ಉಪಕಾಲುವೆಗಳ ಜಂಗಲ್‌ ಕಟಿಂಗ್‌,ಸಮಗ್ರ ಬೆಳೆ ಪದ್ಧತಿ ವೈಜ್ಞಾನಿಕ ಕೃಷಿಮಾಡಲು ರೈತರಿಗೆ ತರಬೇತಿ ಮತ್ತುಸವಳು ಮತ್ತು ಬರಡು ಭೂಮಿಯನ್ನು ಫಲವತ್ತತೆಮಾಡುವ ಯೋಜನೆ ಮತ್ತು ಎಸ್ಸಿ-ಎಸ್ಟಿ ಕೆಟಗರಿಒಂದರಲ್ಲಿ ಬರುವ ರೈತರಿಗೆ ಸಾಮೂಹಿಕ ಪಂಪ್‌ಸೆಟ್‌ ಯೋಜನೆ ಮಾಡಿ ಕೊಳ್ಳಲು ಹಣ ನೀಡಲುಕಾಡಾ ಯೋಜನೆಯಲ್ಲಿ ಅವಕಾಶವಿದೆ.ರಾಜ್ಯ ಸರಕಾರ ಕೊಟ್ಟ ಹಣವನ್ನುಪ್ರಸಕ್ತ ಹಣಕಾಸು ಯೋಜನೆಯಲ್ಲಿಖರ್ಚು ಮಾಡದಿದ್ದರೆ ಪ್ರತಿ ವರ್ಷ ಶೇ.25ಅನುದಾನ ಕಡಿತವಾಗುತ್ತದೆ. ಕಳೆದ ವರ್ಷ33 ಕೋಟಿ ರೂ. ಹಣ ಸರಕಾರಕ್ಕೆ ವಾಪಸ್‌ಹೋಗಿದೆ. ಪ್ರಸಕ್ತ ಸಾಲಿನಲ್ಲಿ 7ಕೋಟಿ ರೂ. ಕಡಿತವಾಗಿ 28 ಕೋಟಿರೂ. ಹಣ ತುಂಗಭದ್ರಾ ಕಾಡಾಗೆ ಮಂಜೂರಿಯಾಗಿದ್ದರೂ ಅಧಿಕಾರಿಗಳು ಸೂಕ್ತ ಕ್ರಿಯಾ ಯೋಜನೆಮಾಡಿ ಹಣ ಹಂಚಿಕೆ ಮಾಡದೇಇರುವುದರಿಂದ ಪುನಃ ಅನುದಾನ ವಾಪಸ್‌ ಹೋಗುತ್ತಿದೆ.

ಸಿಬ್ಬಂದಿ ಕೊರತೆ: ತುಂಗಭದ್ರಾ ಕಾಡಾ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲು 291 ಜನ ಅಧಿಕಾರಗಳು ಸೇರಿ ಸಿಬ್ಬಂದಿ ವರ್ಗದವರ ಅವಶ್ಯವಿದ್ದು, ಕಳೆದ 10 ವರ್ಷಗಳಿಂದ 98 ಜನ ಮಾತ್ರ ಕೆಲಸ ಮಾಡುತ್ತಿದ್ದಾರೆ. ಅಚ್ಚುಕಟ್ಟು ವ್ಯಾಪ್ತಿ ದೊಡ್ಡದಿರುವುದರಿಂದ ಕೇವಲ 98ಜನರಿಂದ ಕಾರ್ಯ ಮಾಡಲು ಆಗುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಕಳೆದ ಹತ್ತು ವರ್ಷಗಳಿಂದ ತುಂಗಭದ್ರಾ ಕಾಡಾ ಕಚೇರಿಯ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸುವ ಆಡಳಿತಾಧಿಕಾರಿಗಳು

ನಿವೃತ್ತಿಗೆ 6 ತಿಂಗಳು ಅವಧಿ ಇರುತ್ತದೆ. 6 ತಿಂಗಳ ಅವಧಿ ಇರುವ ಸಂದರ್ಭದಲ್ಲಿ ಆಡಳಿತಾಧಿಕಾರಿಗಳು ಹಣಕಾಸು ಜವಾಬ್ದಾರಿತೆಗೆದುಕೊಳ್ಳಲು ಹಿಂದೇಟು ಹಾಕುವುದುಸಹಜವಾಗಿದೆ. ಪ್ರಸ್ತುತ ಇರುವ ಆಡಳಿತಾಧಿಕಾರಿ ಸಿಬ್ಬಂದಿ ಹಾಗೂ ಕ್ರಿಯಾಯೋಜನೆ ನೆಪದಲ್ಲಿ 28 ಕೋಟಿ ರೂ. ಹಣ ವಾಪಸ್‌ ಹೋಗಲು ಕಾರಣರಾಗಿದ್ದಾರೆ ಎನ್ನಲಾಗುತ್ತಿದೆ.

ಕೃಷಿ-ರೈತರ ಅಭಿವೃದ್ಧಿಗಾಗಿ ಸರಕಾರ ಪ್ರತಿವರ್ಷ ರಾಜ್ಯದ ಇತರೆ 5 ಕಾಡಾಗಳಿಗೆ ಕೊಟ್ಟಂತೆ ತುಂಗಭದ್ರಾ ಕಾಡಾಕ್ಕೆ ಹಣ ಮೀಸಲಿರಿಸುತ್ತದೆ. ಕಳೆದ 6 ವರ್ಷಗಳಿಂದ ಅಧಿಕಾರಿಗಳ ಕುಂಟು ನೆಪದಿಂದ ನೂರು ಕೋಟಿ ರೂ.ಗೂ ಅ ಧಿಕ ಹಣ ಸರಕಾರಕ್ಕೆ ಮರಳಿ ಹೋಗಿದೆ. ರೈತರಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಈ ಹಣ ಖರ್ಚು ಮಾಡಲು ಅವಕಾಶವಿದ್ದು, ಸದ್ಯ 28 ಕೋಟಿ ರೂ.ಗಳನ್ನು ವಾಪಸ್‌ ಕಳಿಸಲು ಸಿದ್ಧತೆ ನಡೆದಿದೆ. ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಅತಿಯಾದ ಕ್ರಿಮಿನಾಶಕ ರಸಗೊಬ್ಬರ ಬಳಕೆಯಿಂದ ಭೂಮಿ ಸವಳು ಮತ್ತು ಬರಡಾಗಿದ್ದು ರೈತರಿಗೆ ಸಮಗ್ರ ಕೃಷಿ ಸೇರಿ ಹಲವಾರು ಯೋಜನೆ ತರಬೇತಿ ನೀಡಲು ಮತ್ತು ಎಸ್ಸಿ-ಎಸ್ಟಿ ಹಿಂದುಳಿದ ವರ್ಗದ ರೈತರು ಸಾಮೂಹಿಕ ಪಂಪ್‌ಸೆಟ್‌, ಕಾಲುವೆ ದುರಸ್ತಿ ಗೋಡೌನ್‌ ನಿರ್ಮಾಣಕ್ಕೆ ಕ್ರಿಯಾಯೋಜನೆ ಮೂಲಕ ಹಣ ಖರ್ಚು ಮಾಡದೇ ಆಡಳಿತಾಧಿಕಾರಿಗಳ ನಿರ್ಲಕ್ಷéದಿಂದ ಹಣ ವಾಪಸ್‌ ಹೋಗುತ್ತಿದೆ. ಸಿಬ್ಬಂದಿ ಕೊರತೆ ಇದ್ದರೆ ಜನಪ್ರತಿನಿಧಿಗಳಿಗೆ ಮನವಿ ಮಾಡುವ ಮೂಲಕ ಹುದ್ದೆಗಳ ಭರ್ತಿ ಅಥವಾ ನಿಯೋಜನೆ ಪಡೆದು ಹಣ ಖರ್ಚು ಮಾಡಲು ಅವಕಾಶವಿದ್ದರೂ ಇಚ್ಛಾಶಕ್ತಿಯ ಕೊರತೆಯಿಂದ ಹಣ ವಾಪಸ್‌ ಹೋಗುತ್ತಿದೆ.- ಎಂ.ಆರ್‌.ವೆಂಕಟೇಶ, ತುಂಗಭದ್ರಾ ಉಳಿಸಿ ಆಂದೋಲನ ಸಂಚಾಲಕರು

ಸರಕಾರ ಅನುದಾನ ಕೊಟ್ಟರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರತಿ ವರ್ಷ ಹಣವಾಪಸ್‌ ಹೋಗುತ್ತಿದೆ. ಸಿಬ್ಬಂದಿ ಕೊರತೆ ಸೇರಿ ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಇದಕ್ಕೆ ಕಾರಣವಾಗಿದೆ. ಪ್ರಸಕ್ತ ಸಾಲಿನ 28 ಕೋಟಿ ರೂ. ಅನುದಾನ ವಾಪಸ್‌ ಹೋಗಿರುವುದು ಸತ್ಯ. ಆಡಳಿತಾಧಿಕಾರಿ ಇದಕ್ಕೆ ನೇರ ಹೊಣೆ ಯಾಗಿದ್ದಾರೆ. ಈ ಕುರಿತು ಸರಕಾರದ ಗಮನಕ್ಕೆ ತರಲಾಗುತ್ತದೆ. ಮುಂದಿನ ವರ್ಷ 100 ಕಾಡಾ ಅನುದಾನ ತಂದು ಮುಂಚಿತವಾಗಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅರಿವು ಮೂಡಿಸಿ ಅನುದಾನ ಖರ್ಚು ಮಾಡಲಾಗುತ್ತದೆ. ಹಾಲಿ ಇರುವ ಆಡಳಿತಾಧಿಕಾರಿ ಸರಿಯಾಗಿ ಸ್ಪಂದನೆ ಇಲ್ಲದ ಕಾರಣ ವರ್ಗ ಮಾಡುವಂತೆ ಸರಕಾರಕ್ಕೆ ಮನವಿ ಮಾಡಲಾಗುತ್ತದೆ. ವರ್ಗವಾಗಿದ್ದರೂ ಸರಕಾರ ಮರಳಿ ತುಂಗಭದ್ರಾ ಕಾಡಾಕ್ಕೆ ಹಾಲಿ ಆಡಳಿತಾಧಿಕಾರಿಯನ್ನು ನಿಯೋಜಿಸಿದ್ದು, ಸದ್ಯ ಇರುವ ಆಡಳಿತಾಧಿಕಾರಿ ಬದಲಿಸಿ ಬೇರೆಯವರನ್ನು ನಿಯೋಜಿಸುವಂತೆ ಶೀಘ್ರ ಸಿಎಂ ಅವರಿಗೆ ಕೋರಲಾಗುತ್ತದೆ.  -ತಿಪ್ಪೇರುದ್ರಸ್ವಾಮಿ, ಅಧ್ಯಕ್ಷರು, ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ

 

-ಕೆ.ನಿಂಗಜ್ಜ

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.