ಜಾರಕಿಹೊಳಿ ಸಿಡಿ ಪ್ರಕರಣ: ನ್ಯಾಯಾಧೀಶರ ಮುಂದೆ ಹಾಜರಾದ ಯುವತಿ
Team Udayavani, Mar 30, 2021, 3:06 PM IST
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರಿದ್ದರೆನ್ನಲಾದ ವಿಡಿಯೋ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದ ಯುವತಿ ಇಂದು 24ನೇ ಎಪಿಎಂಸಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ ಎಂದು ಯುವತಿ ಪರ ವಕೀಲ ಜಗದೀಶ್ ತಿಳಿಸಿದರು.
ವಿಡಿಯೋ ಬಿಡುಗಡೆಯಾಗಿ 28 ದಿನಗಳ ಬಳಿಕ ಯುವತಿ ತನ್ನ ಹೇಳಿಕೆ ನೀಡಲಿದ್ದಾಳೆ. ವಿಶೇಷ ಭದ್ರತೆಯಲ್ಲಿ ಕೋರ್ಟ್ ಗೆ ಬಂದಿದ್ದು, ಅಲ್ಲಿ ನ್ಯಾಯಾಧೀಶರು ಮತ್ತು ಟೈಪಿಸ್ಟ್ ಎದುರುಗಡೆ ಯುವತಿ ತನ್ನ ಹೇಳಿಕೆಯನ್ನು ನೀಡಲಿದ್ದಾಳೆ.
ಇದನ್ನೂ ಓದಿ:ಸಿ.ಡಿ ಪ್ರಕರಣ: ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ
ಭಾನುವಾರ ಈ ಪತ್ರವನ್ನು ಮುಖ್ಯ ನ್ಯಾಯಾಮೂರ್ತಿಗಳಿಗೆ ಇ-ಮೇಲ್ ಮೂಲಕ ಯುವತಿ ದೂರು ನೀಡಿದ್ದಳು. “ನಾನು ಅತ್ಯಾಚಾರ ಸಂತ್ರಸ್ತೆ. ಈ ಸಂಬಂಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಐಟಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಪ್ರಮುಖ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ’.
“ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ನನಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ರಮೇಶ್ ಜಾರಕಿಹೊಳಿ ಮತ್ತು ಅವರ ಬೆಂಬಲಿಗರಿಂದ ಬೆದರಿಕೆ ಇದೆ. ನನ್ನ ಪೋಷಕರ ಮೂಲಕ ನನ್ನನ್ನು ನಿಯಂತ್ರಿಸುತ್ತಿದ್ದಾರೆ. ಎಸ್ಐಟಿಯಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ಯಾವುದೇ ರಕ್ಷಣೆ ಇಲ್ಲ. ತನಿಖಾ ಸಂಸ್ಥೆ ಮೇಲೆ ಮಾಜಿ ಸಚಿವರು ಪ್ರಭಾವ ಬೀರಿದ್ದಾರೆ. ಈಗಾಗಲೇ ಅವರು ಸಾಕ್ಷ್ಯ ನಾಶ ಪಡಿಸುತ್ತಿದ್ದಾರೆ. ಪ್ರಕರಣದಲ್ಲಿ ನನ್ನ ತಂದೆ ತಾಯಿಯಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ. ನನಗೆ ಮತ್ತು ನನ್ನ ಪಾಲಕರಿಗೆ ರಕ್ಷಣೆ ಒದಗಿಸಬೇಕು’ ಎಂದು ಮನವಿ ಮಾಡಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ