ಯೂಟ್ಯೂಬ್‌ನಲ್ಲಿ ವಿಜ್ಞಾನ ಓದಿದ್ರೂ ಎಂಜಿನಿಯರಿಂಗ್‌ ಕಲಿಯಬಹುದು


Team Udayavani, Mar 31, 2021, 6:30 AM IST

ಯೂಟ್ಯೂಬ್‌ನಲ್ಲಿ ವಿಜ್ಞಾನ ಓದಿದ್ರೂ ಎಂಜಿನಿಯರಿಂಗ್‌ ಕಲಿಯಬಹುದು

ಗಣಿತ, ಭೌತಶಾಸ್ತ್ರ, ರಸಾಯನ ಶಾಸ್ತ್ರ ಅಥವಾ ಜೀವಶಾಸ್ತ್ರವನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೂ ಎಂಜಿನಿಯರಿಂಗ್‌ಪದವಿಗೆ ಪ್ರವೇಶ ಕಲ್ಪಿಸುವ ಎಐಸಿಟಿಇ (ಆಲ್‌ ಇಂಡಿಯಾ ಕೌನ್ಸಿಲ್‌ ಫಾರ್‌ ಟೆಕ್ನಿಕಲ್‌ ಎಜುಕೇಷನ್‌) ನಿರ್ಧಾರದ ಹಿಂದೆ ಎಂಜಿನಿಯರಿಂಗ್‌ ಪದವಿಯನ್ನು ದುರ್ಬಲಗೊಳಿಸಬೇಕು ಎಂಬ ಉದ್ದೇಶವಿಲ್ಲ. ಬದಲಾಗಿ ಇದು ಎಲ್ಲರನ್ನೂ ಒಳಗೊಳ್ಳಲಿ ಎಂಬ ಉದ್ದೇಶ ಹೊಂದಿದೆ. ಆದರೆ ಈ ನಿರ್ಣಯದ ಬಗ್ಗೆ ಈಗಲೂ ಸ್ವಲ್ಪ ಗೊಂದಲಮಯ ವರದಿಗಳೇ ಮಾಧ್ಯಮಗಳಲ್ಲಿ ಬರುತ್ತಿವೆ. ಎಂಜಿನಿಯರಿಂಗ್‌ ಮಾಡಲು ಈ ಮೇಲ್ಕಂಡ ವಿಷ ಯಗಳು ಅಗತ್ಯವೇ ಇಲ್ಲ ಎಂದು ನಾವು ಹೇಳುತ್ತಿಲ್ಲ, ಬದಲಾಗಿ, ವಿದ್ಯಾರ್ಥಿಯೊಬ್ಬನಿಗೆ ಇವುಗಳಲ್ಲಿ ಯಾವುದಾದರೂ ವಿಷಯವನ್ನು ಓದಲು ಸಾಧ್ಯವಾಗದೇ ಹೋದರೆ ಅಂಥವರಿಗೆ ಅವಕಾಶ ಕಲ್ಪಿಸುವ ಪರಿಕಲ್ಪನೆ ಇದು. ಅಂದರೆ ಒಂದು ಪ್ರದೇ ಶದಲ್ಲಿ 11- 12ನೇ ತರಗತಿ ಓದಲು ಕೇವಲ ಕಲಾ ಶಿಕ್ಷಣ ಮಾತ್ರ ಇರಬಹುದು. ಅಥವಾ ವಿಜ್ಞಾನ ಶಿಕ್ಷಕರಿದ್ದು, ಕೆಮಿಸ್ಟ್ರಿ ಶಿಕ್ಷಕರು ಇರದೇ ಹೋಗಬಹುದು. ಅಂಥ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್‌ ಓದುವ ಆಸೆಯಿದ್ದರೆ, ಅವರಿಗೆ ಏಕೆ ಅವಕಾಶ ಕಲ್ಪಿಸಬಾರದು ಎನ್ನುವುದು ನಮ್ಮ ಯೋಚನೆ. ಕೋವಿಡ್‌ನ‌ ಈ ಸಮಯದಲ್ಲಿ ಓಪನ್‌ ಸ್ಕೂಲಿಂಗ್‌, ಸ್ವಯಂನಂಥ ವೇದಿಕೆ ಮೂಲಕ ಆನ್‌ಲೈನ್‌ ತರಗತಿಗಳು ಕೂಡ ಮುಖ್ಯವಾಗುತ್ತಿವೆ. ಅಲ್ಲದೇ ಯೂಟ್ಯೂಬ್‌ನಂಥ ವೇದಿಕೆಗಳ ಮೂಲಕವೂ ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನದಂಥ ವಿಷಯಗಳಲ್ಲಿ ಅಪಾರ ಜ್ಞಾನಧಾರೆಯನ್ನು ಹರಿಸುತ್ತಿವೆ. ಇಂಥ ವಿದ್ಯಾರ್ಥಿಗಳು ಸಾಂಪ್ರದಾಯಿಕವಾಗಿ ಕಲಿಯುವವರಿಗಿಂತ ತುಸು ಹೆಚ್ಚೇ ಕಲಿಯಬಹುದು. ಹೀಗಾಗಿ ಇವುಗಳನ್ನು ಆಸಕ್ತಿಯಿಂದ ಆಲಿಸಿ, ಪಾಠ ಕಲಿಯುವ ವಿದ್ಯಾರ್ಥಿಗಳಿಗೂ ಎಂಜಿನಿಯರಿಂಗ್‌ಗೆ ಅವಕಾಶ ಕೊಟ್ಟರೆ ತಪ್ಪೇನು ಎನ್ನುವುದು ನಮ್ಮ ಪ್ರಶ್ನೆ. ಹಾಗೆಂದಾಕ್ಷಣ, ಇವರೆಲ್ಲರೂ ಪ್ರವೇಶ ಪರೀಕ್ಷೆಗಳನ್ನು ಬರೆದು ಪಾಸಾಗುವುದು ಕಡ್ಡಾಯ ಎನ್ನುವುದು ನೆನಪಲ್ಲಿಡ ಬೇಕು. ಹಾಗೆಯೇ ಬ್ರಿಡ್ಜ್ ಕೋರ್ಸ್‌ಗಳನ್ನು ತೆಗೆದುಕೊಂಡು ಇವುಗಳನ್ನು ಪಾಸ್‌ ಮಾಡಬೇಕು. ಆಗ ಇಂಥ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಗಣಿತ ಮತ್ತು ಭೌತಶಾಸ್ತ್ರ ಅರ್ಥವಾಗುತ್ತದೆ. ಇದಷ್ಟೇ ಅಲ್ಲ, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಶಿಕ್ಷಣವನ್ನು ಮಾತೃಭಾಷೆಯಲ್ಲೇ ನೀಡುವ ಬಗ್ಗೆಯೂ ಗಂಭೀರವಾಗಿ ಯೋಚಿಸುತ್ತಿದ್ದೇವೆ. ಗ್ರಾಮೀಣ ಪ್ರದೇಶದ 10,11,12ನೇ ತರಗತಿ ವಿದ್ಯಾರ್ಥಿಗಳು ಮಾತೃಭಾಷೆಯಲ್ಲೇ ಕಲಿತು ಬಂದು ಇಲ್ಲಿ ಇಂಗ್ಲಿಷಿನಲ್ಲಿ ಕಲಿಯುವುದು ಕಷ್ಟವಾಗುತ್ತದೆ. ಇದಕ್ಕಾಗಿ ನಾವು ಭಾರತೀಯ ಭಾಷೆಗಳಿಗೆ ಪಠ್ಯಪುಸ್ತಕಗಳನ್ನು ಭಾಷಾಂತರಿಸುವ ಕೆಲಸ ಶುರು ಮಾಡಿದ್ದೇವೆ. ಇದಕ್ಕೆ ಸುಮಾರು 900ಕ್ಕೂ ಹೆಚ್ಚು ಮಂದಿ ಸಿಕ್ಕಿದ್ದಾರೆ.

– ಡಾ| ಅನಿಲ್‌ ಸಹಸ್ರಬುದ್ಧೆ, ಎಐಸಿಟಿಐ ಚೇರ್ಮನ್

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.