ಕಾಂಗ್ರೆಸ್ ನೆಲ ಕಚ್ಚುವುದು ಖಚಿತ : ಬಿನೋಯ್ ವಿಶ್ವಂ
ಎ.ಕೆ.ಆ್ಯಂಟಣಿಯಂತ ಹಿರಿಯ ಮುಖಂಡರು ಎಡರಂಗವನ್ನು ವಿರೋಧಿಸುತ್ತಲೇ ಬಂದಿದ್ದಾರೆ
Team Udayavani, Mar 31, 2021, 9:50 AM IST
ಕಾಸರಗೋಡು: ಮಾಜಿ ಕೇಂದ್ರ ಸಚಿವ, ಹಿರಿಯ ಮುಖಂಡರಾದ ಎ.ಕೆ.ಆ್ಯಂಟನಿ ಸಹಿತ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ ಮೃದು ಧೋರಣೆಯಿಂದಾಗಿ ಮುಂದಿನ ದಿನಗಳಲ್ಲಿ ಕೇರಳದಲ್ಲಿ ಕಾಂಗ್ರೆಸ್ ಪಕ್ಷ ನೆಲಕಚ್ಚುವುದು ಖಚಿತ ಎಂದು ಸಿ.ಪಿ.ಐ. ಕೇಂದ್ರ ಸೆಕ್ರೆಟರಿಯೇಟ್ ಸದಸ್ಯ ಬಿನೋಯ್ ವಿಶ್ವಂ ಹೇಳಿದರು.
ಅವರು ಕಾಸರಗೋಡು ಪ್ರಸ್ ಕ್ಲಬ್ನಲ್ಲಿ ಆಯೋಜಿಸಿದ ಪಂಚಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ನೆಹರೂ ಹಾದಿಯನ್ನು ತೊರೆದು ಬಿಜೆಪಿ ಹಾದಿಯಲ್ಲಿ ಸಾಗಲು ಕಾಂಗ್ರೆಸ್ನ ಕೆಲವು ನೇತಾರರು ಪ್ರಯತ್ನಿಸುತ್ತಿದ್ದಾರೆ.
ಎ.ಕೆ.ಆ್ಯಂಟನಿಯಂತ ಹಿರಿಯ ಮುಖಂಡರು ಎಡರಂಗವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಇವರೆಲ್ಲ ಗಾಂಧಿ, ನೆಹರೂ ಮೊದಲಾದವರನ್ನು ಮರೆತು ಕಾರ್ಯಾಚರಿಸುತ್ತಿದ್ದಾರೆ. ಇದು ನಿಸ್ವಾರ್ಥ ಕಾಂಗ್ರೆಸ್ ಕಾರ್ಯಕರ್ತರಿಗೆ ಇರಿಸು ಮುರಿಸನ್ನುಂಟು ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ.ಕೃಷ್ಣನ್, ಜಿಲ್ಲಾ ಕಾರ್ಯದರ್ಶಿ ಗೋವಿಂದನ್ ಪಳ್ಳಿಕಾಪ್ಪಿಲ್ ಉಪಸ್ಥಿತರಿದ್ದರು. ಪ್ರಸ್ ಕ್ಲಬ್ ಅಧ್ಯಕ್ಷ ಮುಹಮ್ಮದ್ ಹಾಶೀಂ ಅಧ್ಯಕ್ಷತೆ ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.