ಬೆಳೆ ವಿಮೆ ರೈತರಿಗೆ ಅನುಕೂಲ ಆಗುವಂತೆ ಕ್ರಮ ವಹಿಸಿ : ಸಚಿವ ನಾರಾಯಣಗೌಡ


Team Udayavani, Mar 31, 2021, 3:17 PM IST

kjhgfdsfgfsg

ಚಿಕ್ಕಬಳ್ಳಾಪುರ : ರೈತರ ಅನುಕೂಲಕ್ಕಾಗಿ ಬೆಳೆ ವಿಮೆ ಯೋಜನೆ ಇದೆ. ಆದರೆ ವಿಮಾ ಕಂಪೆನಿಗಳನ್ನು ನಾವು ಸಾಕುತ್ತಿದ್ದೇವೆ. ಸರಿಯಾದ ಅನುಷ್ಠಾನ ಇಲ್ಲದಿರುವುದೇ ಇದಕ್ಕೆ ಕಾರಣ. ವಿಮೆ ಹಣ ಕಟ್ಟಿರುವುದರಲ್ಲಿ ಶೇ. 50 ರಷ್ಟು ಹಣ ಸಹ ರೈತರಿಗೆ ಸಿಗುತ್ತಿಲ್ಲ. ಬೆಳೆ ಕಟಾವು ಮಾಡಿ ತೂಕಕ್ಕೆ ಹಾಕುವಲ್ಲಿ ಮೋಸ ನಡೆಯುತ್ತದೆ. ಸರ್ವೆ ನಂಬರ್ ನ ಸ್ಥಳದಲ್ಲೇ ಹೋಗಿ ಪರಿಶೀಲನೆ ಆಗಬೇಕು. ಅಧಿಕಾರಿಗಳ ಒಂದು ಸಣ್ಣ ತಪ್ಪಿನಿಂದ ರೈತರಿಗೆ ದೊಡ್ಡ ನಷ್ಟವಾಗುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ .ನಾರಾಯಣಗೌಡ ಗರಂ ಆಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು ರೈತರಿಗೆ ಬೆಳೆ ವಿಮೆ ಪರಿಹಾರ ದೊರೆಯುವಲ್ಲಿ ಅನ್ಯಾಯವಾಗುತ್ತಿದೆ. ಬೆಳೆ ನಷ್ಟ ಆಗಿದ್ದರೂ ಸರಿಯಾದ ಪರಿಶೀಲನೆ ನಡೆಸದೆ ವರದಿ ನೀಡುವ ಕಾರಣ ರೈತರಿಗೆ ವಿಮಾ ಹಣ ಸಿಗುತ್ತಿಲ್ಲ. ತಕ್ಷಣ ಅಧಿಕಾರಿಗಳು ರೈತರ ಜೊತೆ ಸಭೆ ನಡೆಸಿ ಇನ್ನಷ್ಟು ಮಾಹಿತಿ ಪಡೆದುಕೊಳ್ಳಬೇಕು. ಬಳಿಕ ಅಧಿಕಾರಿಗಳ ಜೊತೆ ಬೆಳೆ ವಿಮೆ ವಿಚಾರವಾಗಿಯೇ ಸಭೆ ನಡೆಸುವುದಾಗಿ ಸಚಿವರು ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ

2018-19 ರಲ್ಲಿ 36.84 ಕೋಟಿ ವಿಮೆ  ರೈರಿಗೆ ಲಭ್ಯವಾಗಿದೆ. ಆದರೆ 2019-20 ರಲ್ಲಿ 19 ಲಕ್ಷ ರೂ. ಮಾತ್ತ ವಿಮೆ ಹಣ ರೈತರಿಗೆ ಸಿಕ್ಕಿದೆ. ಕಟ್ಟಿದ್ದು 40 ಲಕ್ಷ ರೂ. ಪ್ರೀಮಿಯಂ ಕಟ್ಟಲಾಗಿತ್ತು. ಆದರೆ ಅರ್ಧದಷ್ಟು ಹಣವೂ ರೈತರಿಗೆ ಸಿಕ್ಕಿಲ್ಲ. ದೇಶದಲ್ಲಿ ಸರಾಸರಿ 21 ಸಾವಿರ ಕೋಟಿ ರೂ. ವಿಮಾ ಕಂಪೆನಿಗೆ ಹಣ ಕಟ್ಟುತ್ತಿದ್ದಾರೆ.  9-11 ಸಾವಿರ ಕೋಟಿ ಮಾತ್ರ ರೈತರಿಗೆ ವಿಮಾ ಪರಿಹಾರ ಸಿಗುತ್ತಿದೆ. ಆದರಿಂದ ರೈತರಿಗೆ ಅನುಕೂಲ ಆಗುವಂತೆ ಕ್ರಮ ವಹಿಸಬೇಕು.  ಜಿಲ್ಲೆಯಲ್ಲಿ ಅಧಿಕಾರಿಗಳು ರೈತರ ಜೊತೆ ಸಭೆ ನಡೆಸಿ, ರೈತರಿಂದ ಮಾಹಿತಿ ಪಡೆದುಕೊಳ್ಳಿ. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸುವುದಾಗಿ ಸಚಿವರು ಹೇಳಿದರು.

ಇನ್ನೂ 21 ಕೋಟಿ ರೂ ಅನುದಾನ ಪಿಡಿ ಖಾತೆಯಲ್ಲೇ ಇದೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ  ಜಿಲ್ಲೆಯಲ್ಲಿ 21 ಕೋಟಿ ರೂ. ಹಣ ಇನ್ನೂ ಪಿಡಿ ಖಾತೆಯಲ್ಲೆ ಉಳಿದಿದೆ. ಶೇ. 26 ರಷ್ಟು ಮಾತ್ರ ಕೆಲಸ ಆಗಿದೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಹಣ ಬಳಕೆ ಮಾಡದೆ ಬಿಟ್ಟರೆ  ಆ ಹಣವನ್ನು ಹಣ ವಾಪಸ್ ಪಡೆಯುತ್ತೇವೆ. ಶಾಸಕರು ಕ್ರೀಯಾಯೋಜನೆ ನೀಡಿ ಅನುದಾನವನ್ನು ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು ಎಂದು ಹೇಳಿದರು.

ಎಇಇ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕುವಾರು ಪರಿಶೀಲನೆಗೆ ಹೋಗಿ ಸ್ಥಳ ಪರಿಶೀಲನೆ ನಡೆಸಬೇಕು. ಇಲ್ಲದಿದ್ದಲ್ಲಿ ಗುಣಮಟ್ಟದ ಕಾಮಗಾರಿ ಆಗೋದಿಲ್ಲ. ಕಚೇರಿಯಲ್ಲಿ ಕುಳಿತು ಕೆಲಸ ಮಾಡೋದಲ್ಲ. ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಗೆ ಹೈಟೆಕ್ ಕ್ರೀಡಾ ಹಾಸ್ಟೆಲ್ :   ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕ್ರೀಡಾ ಹಾಸ್ಟೆಲ್ ಸದ್ಯ ತಾತ್ಕಾಲಿಕ ಕಟ್ಟಡದಲ್ಲಿ ಇದೆ. ಜಿಲ್ಲಾ ಕ್ರೀಡಾಂಗಣದ ಆವರಣದಲ್ಲೇ 2.5 ಕೋಟಿ ವೆಚ್ಚದಲ್ಲಿ ಹೈಟೆಕ್ ಕ್ರೀಡಾ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು. ಸಿಂತೆಟಿಕ್ ಟ್ರಾಕ್ ನಿರ್ಮಾಣಕ್ಕೆ ಖೇಲೊ ಇಂಡಿಯಾದಡಿ ಮಂಜೂರಾತಿ ಕೋರಿ 9 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ಹೇಳಿದರು.

ಶಾಸಕ ಸುಬ್ಬಾರೆಡ್ಡಿ, ಜಿ.ಪಂ ಅಧ್ಯಕ್ಷ ಚಿಕ್ನರಸಿಂಹಯ್ಯ, ಜಿಲ್ಲಾಧಿಕಾರಿ ಲತಾ, ಅಪರ ಜಿಲ್ಲಾಧಿಕಾರಿ ಅಮರೇಶ್ ಮತ್ತಿತರರು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.