ಬಿಜೆಪಿ ವಿರುದ್ಧ ನಾವೆಲ್ಲರೂ ಒಂದಾಗೋಣ : ಸೋನಿಯಾ ಮತ್ತು ಇತರ ನಾಯಕರಿಗೆ ಮಮತಾ ಪತ್ರ
Team Udayavani, Mar 31, 2021, 6:25 PM IST
ನವ ದೆಹಲಿ : ಪಶ್ಚಿಮ ಬಂಗಾಳದ ವಿಧಾನ ಸಭಾ ಚುನಾವಣೆಯ ಕಾವು ಏರುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನ ಸೋನಿಯಾ ಗಾಂಧಿಯವರನ್ನು ಒಳಗೊಂಡು ಹತ್ತು ಪ್ರಮುಖ ವಿರೋಧ ಪಕ್ಷಗಳ ಮುಖಂಡರಿಗೆ ‘ನಾವೆಲ್ಲರೂ ಬಿಜೆಪಿ ವಿರುದ್ಧ ಒಂದಾಗಬೇಕು’ ಎಂದು ಪತ್ರ ಬರೆದಿದ್ದಾರೆ ಎಂಬ ವರದಿಯಾಗಿದೆ.
ಬಿಜೆಪಿಯ ನ್ಯೂನ್ಯತೆಗಳನ್ನು ಉಲ್ಲೇಖಿಸಿರುವ ಪತ್ರದಲ್ಲಿ ಮಮತಾ, “ಬಿಜೆಪಿಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿಯ ವಿರುದ್ಧ ಏಕೀಕೃತ ಮತ್ತು ಪರಿಣಾಮಕಾರಿ ಹೋರಾಟ” ಮತ್ತು “ಭಾರತದ ಜನರಿಗೆ ವಿಶ್ವಾಸಾರ್ಹ ಪರ್ಯಾಯವನ್ನು ಪ್ರಸ್ತುತಪಡಿಸುವ” ಸಮಯ ಬಂದಿದೆ ಎಂದು ಬರೆದಿದ್ದಾರೆ.
ಓದಿ : ಬೇಂದ್ರೆಯವರ ಕಾವ್ಯ ಸ್ಪರ್ಶದ ಸೃಜನಾತ್ಮಕ ಪ್ರಿ ವೆಡ್ಡಿಂಗ್ ಶೂಟ್ಸ್ ಸಖತ್ ವೈರಲ್ ..!
“ಬಿಜೆಪಿ ಹೊರತಾಗಿರುವ ಪಕ್ಷಗಳು ತಮ್ಮ ಸಾಂವಿಧಾನಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಚಲಾಯಿಸಲು ಅಸಾಧ್ಯವಾಗಿಸಲು ಬಿಜೆಪಿ ಬಯಸಿದೆ. ಇದು ರಾಜ್ಯ ಸರ್ಕಾರಗಳ ಅಧಿಕಾರವನ್ನು ದುರ್ಬಲಗೊಳಿಸಲು ಮತ್ತು ಅವುಗಳನ್ನು ಕೇವಲ ಪುರಸಭೆಗಳಿಗೆ ಇಳಿಸಲು ಬಯಸಿದೆ. ಸಂಕ್ಷಿಪ್ತವಾಗಿ, ಇದು ಒಂದು ಪಕ್ಷದ ಸರ್ವಾಧಿಕಾರವನ್ನು ಸ್ಥಾಪಿಸುವ ಧೋರಣೆ, “ಎಂದಿದ್ದಾರೆ.
ಇನ್ನು, ಕೇಂದ್ರವು “ಚುನಾಯಿತ ಸರ್ಕಾರಗಳಿಗೆ ಸಮಸ್ಯೆಗಳನ್ನು ಹೇಗೆ ಸೃಷ್ಟಿಸುತ್ತಿದೆ” ದೆಹಲಿಯಲ್ಲಿ ಕೇಂದ್ರ ಸರ್ಕಾರ ಏನು ಮಾಡಿದೆ. ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್ ಗೆ ಹಚ್ಚು ಅಧಿಕಾರವನ್ನು ನೀಡಿದೆ ಎಂದು ಪತ್ರದ ಮೂಲಕ ಅಭಿಪ್ರಾಯ ಪಟ್ಟಿದ್ದಾರೆ.
ರಾಜ್ಯಪಾಲರ ಕಚೇರಿಯ “ದುರುಪಯೋಗ”, ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ಕೇಂದ್ರ ಸಂಸ್ಥೆಗಳು, ರಾಜ್ಯಗಳ ಹಣವನ್ನು “ತಡೆಹಿಡಿಯುವುದು”, ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಮತ್ತು ಯೋಜನಾ ಆಯೋಗದಂತಹ ಸಂಸ್ಥೆಗಳನ್ನು ವಿಸರ್ಜಿಸುವುದು, ಬಿಜೆಪಿಯೇತರರನ್ನು ಕೆಳಗಿಳಿಸಲು ಹಣದ ಶಕ್ತಿಯನ್ನು ಬಳಸುವುದು, ಖಾಸಗೀಕರಣ ಇವೇ ಹೆಚ್ಚಾಗಿವೆ ಎಂದು ಅವರು ಪತ್ರದಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಓದಿ : ಡಿ.ಕೆ. ಶಿವಕುಮಾರ್ ವಿರುದ್ಧ ನಾಯಕ ಸಮಿತಿ ಪ್ರತಿಭಟನೆ
ನಾವೆಲ್ಲರೂ ಒಂದಾಗಿ ಬಿಜೆಪಿ ವಿರುದ್ಧ ನಿಲ್ಲುವ ಸರಿಯಾದ ಸಮಯ ಬಂದಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲೆ ಆಕ್ರಮಣಶೀಲ ಧೋರಣೆಯನ್ನು ಮೆರೆಯುತ್ತಿರುವ ಬಿಜೆಪಿಯ ವಿರುದ್ಧ ನಾವೆಲ್ಲರೂ ಒಂದಾಗಬೇಕಾಗಿದೆ. ನಾನು ನಿಮ್ಮೊಂದಿಗೆ ಇದಕ್ಕಾಗಿ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡಲು ಸಿದ್ಧಳಿದ್ದೇನೆ. ಬಿಜೆಪಿ ವಿರುದ್ಧ ನಾವೆಲ್ಲರೂ ಸಮಾನ ಮನಸ್ಥಿತಿಯಿಂದ ಹೋರಾಟ ಮಾಡಲೇಬೇಕು ಎಂದು ಪತ್ರದಲ್ಲಿ ಮಮತಾ ಬರೆದಿದ್ದಾರೆ.
ಸೋನಿಯಾ ಗಾಂಧಿಯವರಲ್ಲದೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಡಿಎಂಕೆ ಮುಖ್ಯಸ್ಥ ಸ್ಟಾಲಿನ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ವೈ ಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ, ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್, ತೆಲಂಗಾಣ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್, ಸಮಾಜವಾದಿ ಪಕ್ಷ ರಾಷ್ಟ್ರೀಯ ಜನ ದಳದ ತೇಜಸ್ವಿ ಯಾದವ್, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಸಿಪಿಐಎಂಎಲ್ ನ ದೀಪಂಕರ್ ಭಟ್ಟಾಚಾರ್ಯ ಅವರಿಗೆ ತಮ್ಮ ಪತ್ರವನ್ನು ಮಮತಾ ಕಳುಹಿಸಿದ್ದಾರೆ.
Mamata Banerjee writes to leaders incl Sonia Gandhi, Sharad Pawar, MK Stalin, Tejashwi Yadav, Uddhav Thackeray, Arvind Kejriwal, Naveen Patnaik stating, “I strongly believe that the time has come for a united & effective struggle against BJP’s attacks on democracy & Constitution” pic.twitter.com/OLp7tDm9pU
— ANI (@ANI) March 31, 2021
ಓದಿ : FIR ಎಲ್ಲಿದೆ..? ನೀವು ಕಾನೂನಿಗಿಂತ ಮೇಲಿದ್ದೀರಾ..? : ಪರಮ್ ಗೆ ಬಾಂಬೆ ಹೈ ಕೋರ್ಟ್ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್ ಆಕ್ರೋಶ: ಹಲವೆಡೆ ಪ್ರತಿಭಟನೆ
ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ
BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್.ಡಿ. ಕುಮಾರಸ್ವಾಮಿ
Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್. ಅಶೋಕ್
Prajwal ಪತ್ತೆಗೆ ಎಸ್ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ