ಮಕ್ಕಳಿಗೆ ಕೊರೊನಾ-ಆತಂಕ
Team Udayavani, Mar 31, 2021, 8:43 PM IST
ವೇಗವಾಗಿ ಹರಡುತ್ತಿದೆ ಕೋವಿಡ್-19 ಎರಡನೇ ಅಲೆ ಸೋಂಕು
ಅಂಕೋಲಾ: ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ತೀವ್ರ ಸ್ವರೂಪಲ್ಲಿ ಹರಡುತ್ತಿರುವ ಸಂದರ್ಭದಲ್ಲಿಯೇ ತಾಲೂಕಿನ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಪಾಲಕರಲ್ಲಿ ಆತಂಕ ಮನೆಮಾಡಿದೆ.
ಮಂಗಳವಾರ ತಾಲೂಕಿನ ಅಗಸೂರು (ಕೆಪಿಎಸ್) ಕರ್ನಾಟಕ ಪಬ್ಲಿಕ್ ಸ್ಕೂಲ್ನ 7 ವಿದ್ಯಾರ್ಥಿಗಳು, 3 ಶಿಕ್ಷಕರು ಬಾವಿಕೇರಿ 1, ಕೃಷ್ಣಾಪುರ -1 ಶಾಲೆ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಅಗಸೂರಿನ ಶಿಕ್ಷಕಿ ಮೂಲಕ 7 ವಿದ್ಯಾರ್ಥಿಗಳಿಗೆ ಹಾಗೂ ಒಟ್ಟು 5 ಶಿಕ್ಷಕರಿಗೆ ಕೊರೊನಾ ಸೋಂಕು ತಗಲಿದೆ. ಈ ಹಿನ್ನೆಲೆಯಲ್ಲಿ ಏ.1 ರ ವರೆಗೆ ಅಗಸೂರು ಪ್ರೌಢಶಾಲೆ ಬಂದ್ ಮಾಡಲು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಮಾಡಿದ್ದಾರೆ.
247 ವಿದ್ಯಾರ್ಥಿಗಳು, 16 ಶಿಕ್ಷಕರ ಗಂಟಲು ದ್ರವ ಪರೀಕ್ಷೆಗೆ ರವಾನೆ ಮಾಡಲಾಗಿದ್ದು ಫಲಿತಾಂಶ ಬರಬೇಕಿದೆ. ಶಿರೂರಿನ ಒಬ್ಬ ವಿದ್ಯಾರ್ಥಿಗೆ ಪಾಸಿಟಿವ್ ಸೋಂಕು ಪತ್ತೆಯಾಗಿದ್ದು ಸೋಂಕಿನ ಮೂಲ ಪತ್ತೆಯಾಗಬೇಕಿದೆ. ತಾಲೂಕಿನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಬಿಇಒ ಶ್ಯಾಮಲಾ ನಾಯಕ ಮಾಹಿತಿ ನೀಡಿದರು.
ಸೋಂಕು ಪತ್ತೆಯಾದ ಶಾಲೆಗಳಿಗೆ ಶಿಕ್ಷಣ ಇಲಾಖೆ ಸ್ಯಾನಿಟೈಜ್ ವ್ಯವಸ್ಥೆ ಮಾಡಿದೆ. ಇದರ ಜೊತೆಗೆ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಶಿಕ್ಷಣಾಧಿಕಾರಿ ಹರೀಶ್ ಗಾಂವ್ಕರ್ ಸೂಚಿಸಿದ್ದಾರೆ.
ಮಾಸ್ಕ್ ಇಲ್ಲದೆ ಬಿಂದಾಸ್ ಒಡಾಟ
ಅಂಕೋಲಾ ತಾಲೂಕಿನಲ್ಲಿ ವೇಗವಾಗಿ ಕೊರೊನಾ ಪ್ರಕರಣ ಏರುತ್ತಿದ್ದರು ಪಟ್ಟಣದಲ್ಲಿ ಪ್ರತಿನಿತ್ಯ ಸಾರ್ವಜನಿಕರು ಮಾತ್ರ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವಿಲ್ಲದೆ ಬಿಂದಾಸ್ ಆಗಿರುವುದು ಕಂಡು ಬಂದಿದೆ. ಕೊರೊನಾ ಪಾಸಿಟಿವ್ ಪ್ರಕರಣ ಏರುತ್ತಿದ್ದರು ಯಾವುದಕ್ಕೂ ಲೆಕ್ಕಿಸದೆ ಸರಕಾರದ ಆದೇಶಕ್ಕು ಕಿವಿಗೊಡದೆ ತಮ್ಮ ಆರೋಗ್ಯದ ಹಿತದೃಷ್ಠಿಯಿಂದಲು ಉಳಿಯದೆ ಇರುವುದು ಕಂಡು ಬಂದಿದೆ. ಕೊರೊನಾ ಪ್ರಕರಣ ದಿನೇದಿನೇ ಹೆಚ್ಚಾಗುತ್ತಿದ್ದರು ತಾಲೂಕಾಡಳಿತ ಯಾವುದೇ ಕಠಿಣ ನಿರ್ದಾರ ಕೈಗೊಳ್ಳುತ್ತಿಲ್ಲ ಎನ್ನುವುದು ಪ್ರಜ್ಞಾವಂತ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ಜಿಲ್ಲಾಡಳಿತ ಮುಂದೆ ಬಂದು ಅಂಕೋಲಾ ತಾಲೂಕಿನಲ್ಲಿ ಕೊರೊನಾ ತಡೆಗೆ ಕ್ರಮ ವಹಿಸಬೇಕಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಕೋವಿಡ್ ಕಂಡು ಬಂದ ಶಾಲೆಗೆ ರಜೆ
ಕಾರವಾರ: ಅಂಕೋಲಾ ತಾಲೂಕಿನ ಅಗಸೂರ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಮಾ.28 ರಂದು 5 ಜನರಿಗೆ ಕೋವಿಡ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್ ಮಾ.30 ರಿಂದ ಏ.1 ರವರೆಗ ಶಾಲೆಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಾಲಾ ಮಕ್ಕಳ ಹಿತದೃಷ್ಟಿಯಿಂದ ಹಾಗೂ ಕೋವಿಡ್-19 ಸೋಂಕಿನ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಈ ಶಾಲೆಗೆ ಮಾತ್ರ ರಜೆ ಘೋಷಿಸಿ, ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ. ಕೋವಿಡ್-19 ಸೋಂಕಿನ ಹರಡುವಿಕೆ ತಡೆಗಟ್ಟುಲು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿಎಚ್ಒಗೂ ಸೂಚಿಸಿದ್ದಾರೆ.
ಐವರಿಗೆ ಕೊರೊನಾ ದೃಢ
ದಾಂಡೇಲಿ: ನಗರದಲ್ಲಿ ಮಂಗಳವಾರ ಐವರಿಗೆ ಕೊರೊನಾ ಸೋಂಕು ದೃಢವಾಗಿವೆ. ಟೌನ್ಶಿಪ್ನಲ್ಲಿ 10 ವರ್ಷದ ಬಾಲಕನಲ್ಲಿ ಮತ್ತು 74 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಂಬೇವಾಡಿಯಲ್ಲಿ 37 ವರ್ಷದ ಪುರುಷನಲ್ಲಿ ಮತ್ತು ಹಳಿಯಾಳ ರಸ್ತೆಯ 45 ವರ್ಷದ ಪುರುಷನಲ್ಲಿ ಸೋಂಕು ಕಾಣಿಸಿಕೊಂಡಿದೆ.
ನಗರದ ಇನ್ನೋರ್ವ 45 ವರ್ಷದ ಪುರುಷನಲ್ಲಿಯೂ ಸೋಂಕು ದೃಢಪಟ್ಟಿದೆ. ನಗರದಲ್ಲಿ ಈವರೆಗೆ ಒಟ್ಟು 1189 ಸೋಂಕಿತ ಪ್ರಕರಣಗಳು ದಾಖಲಾಗಿದೆ ಎಂದು ತಹಶೀಲ್ದಾರ್ ಕಚೇರಿ ಅಧಿ ಕಾರಿಗಳು ತಿಳಿಸಿದ್ದಾರೆ. ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಆರೋಗ್ಯ ನಿಯಾಮವಳಿ ಪಾಲಿಸುವುದನ್ನು ಕಡ್ಡಾಯಗೊಳಿಸಿದಾಗ ಸೋಂಕಿನಿಂದ ದೂರವಿರಲು ಸಾಧ್ಯವಾಗಲಿದ್ದು, ಈ ನಿಟ್ಟಿನಲ್ಲಿ ನಗರದ ಜನತೆ ಜಾಗೃತರಾಗಬೇಕಾಗಿದೆ
ಮತ್ತೆ ನಾಲ್ವರಿಗೆ ಪಾಸಿಟಿವ್
ಯಲ್ಲಾಪುರ: ತಾಲೂಕಿನಲ್ಲಿ ಮಂಗಳವಾರ ಒಟ್ಟು ನಾಲ್ಕು ಕೋವಿಡ್ ಪಾಸಿಟಿವ್ ವರದಿಯಾಗಿದೆ. ಪಟ್ಟಣದ ನೂತನನಗರ ಒಂದು, ಕಾಳಮ್ಮನಗರ ಪ್ರೌಢಶಾಲೆಯಲ್ಲಿ ಮೂರು ಪಾಸಿಟಿವ್ ಕಾಣಿಸಿಕೊಂಡಿದೆ. ಸೋಮವಾರ ಅತಿಯಾಗಿ ಕಾಣಿಸಿಕೊಂಡ ವೈಟಿಎಸ್ಸೆಸ್ ಪ್ರೌಢಶಾಲೆ ಕನ್ನಡ ಮಾಧ್ಯಮದ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್