ಸವಾಲಾಗಿದೆ ವಿದ್ಯಾರ್ಥಿಗಳ ಮೌಲ್ಯಮಾಪನ
Team Udayavani, Apr 1, 2021, 6:00 AM IST
ಬೆಂಗಳೂರು: ರಾಜ್ಯದ ಖಾಸಗಿ ಹಾಗೂ ಬಹುತೇಕ ಅನುದಾನಿತ ಶಾಲೆಯ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕವೇ ಪರೀಕ್ಷೆ ಅಥವಾ ಮೌಲ್ಯಮಾಪನಕ್ಕೆ ಸಿದ್ಧತೆ ನಡೆದಿದೆ. ಆದರೆ, ಸರಕಾರಿ ಶಾಲೆಯ ಮಕ್ಕಳ ಮೌಲ್ಯಮಾಪನ ನಡೆಸುವುದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೊಡ್ಡ ಸವಾಲಾಗಿದೆ.
1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಅಥವಾ ಪರೀಕ್ಷೆ ನಡೆಸಿಯೇ ತೇರ್ಗಡೆ ಮಾಡಲಾಗುವುದು ಎಂದು ಸರಕಾರ ಈಗಾಗಲೇ ಸ್ಪಷ್ಪಪಡಿಸಿದೆ. 6ರಿಂದ ಮೇಲ್ಪಟ್ಟ ತರಗತಿಗಳ ವಿದ್ಯಾರ್ಥಿಗಳಿಗೆ ನಿತ್ಯವೂ ಶಾಲೆಯಲ್ಲೇ ತರಗತಿ ನಡೆಯುತ್ತಿರುವುದರಿಂದ ಪರ್ಯಾಯ ಕಲಿಕಾ ವಿಧಾನದ ಆಧಾರದಲ್ಲಿ ಮೌಲ್ಯಮಾಪನ ಹಾಗೂ ತರಗತಿ ಪರೀಕ್ಷೆಗಳು ನಡೆಸಲಾಗುತ್ತದೆ. ಆದರೆ, 1ರಿಂದ 5ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಮಾಪನ ಹೇಗೆ ಎಂಬ ಬಗ್ಗೆ ಅಧಿಕಾರಿಗಳು ಒಂದು ಸುತ್ತಿನ ಚರ್ಚೆಯನ್ನು ನಡೆಸಿದ್ದಾರೆ. ಆದರೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂಬ ಮಾಹಿತಿ “ಉದಯವಾಣಿ’ಗೆ ಲಭ್ಯವಾಗಿದೆ.
ಆನ್ಲೈನ್ ತರಗತಿ ಆಧಾರಿತ ಮೌಲ್ಯಮಾಪನ :
ಖಾಸಗಿ ಹಾಗೂ ಬಹುತೇಕ ಅನುದಾನಿತ ಶಾಲೆಗಳು 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಆನ್ಲೈನ್ ಹಾಗೂ ಪೂರ್ವ ಮುದ್ರಿತ ವೀಡಿಯೋ ತರಗತಿಗಳನ್ನು ನಡೆಸುತ್ತಿದ್ದು, ಆನ್ಲೈನ್ ಮೂಲಕವೇ ಪರೀಕ್ಷೆ ನಡೆಸಲಿವೆ ಎಂದು ಖಾಸಗಿ ಶಾಲಾಡಳಿತ ಮಂಡಳಿಯ ಒಕ್ಕೂಟದ ಮೂಲಗಳು ತಿಳಿಸಿವೆ.
ಭೌತಿಕ ತರಗತಿಯೇ ನಡೆದಿಲ್ಲ :
ಸರಕಾರಿ ಶಾಲೆಯಲ್ಲಿ 1ರಿಂದ 5ನೇ ತರಗತಿಗೆ ಆನ್ಲೈನ್ ತರಗತಿ ಅಥವಾ ಪೂರ್ವ ಮುದ್ರಿತ ವೀಡಿಯೋ ತರಗತಿ ನಡೆದಿಲ್ಲ. ಕೆಲವು ಶಾಲೆಗಳಲ್ಲಿ ಶಿಕ್ಷಕರು ವಿಶೇಷ ಆಸಕ್ತಿ ವಹಿಸಿ ಪಾಲಕ, ಪೋಷಕರ ವಾಟ್ಸ್ಆ್ಯಪ್ ಗ್ರೂಪ್ಗ್ಳನ್ನು ರಚಿಸಿಕೊಂಡು, ವಾರಕ್ಕೆ ಒಂದು ಅಥವಾ ಎರಡು ಪಠ್ಯಾಧಾರಿತ ಮಾಹಿತಿಗಳನ್ನು ಅಪ್ಲೋಡ್ ಮಾಡುತ್ತಿದ್ದರು. ರೇಡಿಯೋ ಪಾಠ ಪ್ರಸಾರವಾಗುತ್ತಿದೆ. ಆದರೆ, ಅದರ ಆಧಾರದಲ್ಲಿ ಮೌಲ್ಯಮಾಪನ ಸಾಧ್ಯವಿಲ್ಲ. ಹೀಗಾಗಿ ತೇರ್ಗಡೆ ಮಾಡುವುದು ಹೇಗೆ ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ನಡೆಯುತ್ತಿರುವುದರಿಂದ ಮೌಲ್ಯಮಾಪನ ಮಾಡುವುದು ಸುಲಭ. ಆದರೆ, 1ರಿಂದ 5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ನಡೆಯದೆ ಇರುವುದರಿಂದ ಮೌಲ್ಯಮಾಪನ ಸವಾಲಾಗಿದೆ. ಈ ಬಗ್ಗೆ ಚರ್ಚೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. –ವಿ.ಅನ್ಬುಕುಮಾರ್, ಆಯುಕ್ತ, ಸಾರ್ವಜನಿಕ ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು