ಪುನೀತ್‌ ರಾಜಕುಮಾರ್‌ ರ ‘ಯುವರತ್ನ’ ಇಂದು ತೆರೆಗೆ


Team Udayavani, Apr 1, 2021, 8:04 AM IST

ಪುನೀತ್‌ ರಾಜಕುಮಾರ್‌ ರ ‘ಯುವರತ್ನ’ ಇಂದು ತೆರೆಗೆ

ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ “ಯುವರತ್ನ’ ಚಿತ್ರ ಇಂದು (ಏ. 1) ಅದ್ಧೂರಿಯಾಗಿ ತೆರೆಗೆ ಬರುತ್ತಿದೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ತೆರೆಕಾಣುತ್ತಿದ್ದು, ಎರಡೂ ಭಾಷೆಗಳಲ್ಲೂ ಚಿತ್ರದ ಬಿಡುಗಡೆಗೆ ಭರ್ಜರಿ ತಯಾರಿ ನಡೆದಿದೆ. ಇಂದು ಮುಂಜಾನೆಯಿಂದಲೇ “ಯುವರತ್ನ’ ಚಿತ್ರದ ಪ್ರದರ್ಶನ ಆರಂಭವಾಗಲಿದ್ದು, ತಮ್ಮ ನೆಚ್ಚಿನ ನಟ ಚಿತ್ರವನ್ನು ಮೊದಲ ದಿನವೇ ಕಣ್ತುಂಬಿಕೊಳ್ಳಲು ಪವರ್‌ಸ್ಟಾರ್‌ ಫ್ಯಾನ್ಸ್‌ ಕೂಡ ಕಾತುರರಾಗಿದ್ದಾರೆ.

ಇನ್ನು “ಯುವರತ್ನ’ ಚಿತ್ರದಲ್ಲಿ ಪುನೀತ್‌ ರಾಜಕುಮಾರ್‌ಗೆ ಸಯೇಶಾ ಸೈಗಲ್‌ ಮೊದಲ ಬಾರಿಗೆ ನಾಯಕಿಯಾಗಿ ಜೋಡಿಯಾಗುತ್ತಿದ್ದಾರೆ. ಉಳಿದಂತೆ ಪ್ರಕಾಶ್‌ ರೈ, ಸಾಯಿಕುಮಾರ್‌, ಧನಂಜಯ್‌, ದಿಗಂತ್‌, ಸೋನು ಗೌಡ, ವಿಶಾಲ್‌ ಹೆಗ್ಡೆ, ಸಾಧುಕೋಕಿಲ, ರಂಗಾಯಣ ರಘು, ಅಚ್ಯುತ ಕುಮಾರ್‌, ಅವಿನಾಶ್‌, ಸುಧಾರಾಣಿ, ಪ್ರಕಾಶ್‌ ಬೆಳವಾಡಿ, ತಾರಕ್‌ ಪೊನ್ನಪ್ಪ, ರಾಜೇಶ್‌ ನಟರಂಗ, ಗುರುದತ್‌, ಕುರಿ ಪ್ರತಾಪ್‌, ಹನುಮಂತೇ ಗೌಡ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಹೊಂಬಾಳೆ ಫಿಲಂಸ್‌’ ಬ್ಯಾನರ್‌ನಲ್ಲಿ ವಿಜಯ್‌ ಕಿರಗಂದೂರು “ಯುವರತ್ನ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. “ಯುವರತ್ನ’ ಚಿತ್ರಕ್ಕೆ ಸಂತೋಷ್‌ ಆನಂದರಾಮ್‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಎಸ್‌. ತಮನ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ವೆಂಕಟೇಶ್‌ ಅಂಗುರಾಜ್‌ ಛಾಯಾಗ್ರಹಣ, ಜ್ಞಾನೇಶ್‌ ಬಿ. ಮಠದ್‌ ಸಂಕಲನವಿದೆ. ಶಿವಕುಮಾರ್‌ ಕಲಾ ನಿರ್ದೇಶನ, ಚಿನ್ನಿಪ್ರಕಾಶ್‌, ಜಾನಿ, ಸಿರೀಶ್‌, ಮೋಹನ್‌ ನೃತ್ಯ ನಿರ್ದೇಶನವಿದೆ. ಚಿತ್ರದ ಸಾಹಸ ದೃಶ್ಯಗಳಿಗೆ ರಾಮ್‌ ಲಕ್ಷ್ಮಣ್‌, ಅಂಬು ಅರಿವು, ವಿಜಯ…, ದಿಲೀಪ್‌ ಸುಬ್ರಹ್ಮಣ್ಯಂ ಸಾಹಸ ಸಂಯೋಜಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಹಾಡುಗಳು ಮತ್ತು ಟ್ರೇಲರ್‌ಗಳ ಮೂಲಕ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ “ಯುವರತ್ನ’ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಇನ್ನು ಚಿತ್ರತಂಡ ಕೂಡ ಭರ್ಜರಿಯಾಗಿ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದ್ದು, ರಾಜ್ಯದ ಉದ್ದಗಲ ಸಂಚಾರ ಮಾಡಿ ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಕೆಲಸವನ್ನು ಮಾಡಿದೆ. ಒಟ್ಟಾರೆ ರಿಲೀಸ್‌ಗೂ ಮೊದಲೇ ಸೌಂಡ್‌ ಮಾಡುತ್ತಿರುವ ಪುನೀತ್‌ ಅವರ ಪವರ್‌ ಪ್ಯಾಕ್‌ ಸಿನಿಮಾ “ಯುವರತ್ನ’ ಥಿಯೇಟರ್‌ನಲ್ಲಿ ಪ್ರೇಕ್ಷಕ ಪ್ರಭು ಗಳಿಗೆ ಹೇಗೆಲ್ಲಾ ಇಷ್ಟವಾಗುತ್ತದೆ ಅನ್ನೋ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.