ಬಿಬಿಎಂಪಿ ನೌಕರ ಆತ್ಮಹತ್ಯೆಗೆ ಶರಣು
Team Udayavani, Apr 1, 2021, 2:25 PM IST
ಬೆಂಗಳೂರು: ಬಿಬಿಎಂಪಿ ನೌಕರನೋರ್ವ ಆತ್ಮಹತ್ಯೆಗೆಶರಣಾಗಿರುವ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯನಗರ ನಿವಾಸಿ ರಾಕೇಶ್ನೇಣಿಗೆ ಶರಣಾದ ಬಿಬಿಎಂಪಿ ನೌಕರ. ಮೃತರಾಕೇಶ್, ಬಿಬಿಎಂಪಿ ಪೂರ್ವ ವಲಯದ ಜಂಟಿಆಯುಕ್ತೆ ಪಲ್ಲವಿ ಕಚೇರಿಯಲ್ಲಿ ಸಹಾ ಯಕನಾಗಿದ್ದಎನ್ನಲಾಗಿದೆ.
ವೈಯಕ್ತಿಕ ಕಾರಣಗಳಿಂದ ಮನೆಯಲ್ಲಿನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ರಾಕೇಶ್ಗೆ ಕರ್ತವ್ಯದ ಸ್ಥಳದಲ್ಲಿ ಏನಾದರು ಕಿರುಕುಳಉಂಟಾಗಿತ್ತಾ? ಎನ್ನುವುದರ ಬಗ್ಗೆಯೂ ಪೊಲೀಸರುಪರಿಶೀಲನೆ ಕೈಗೊಂಡಿದ್ದಾರೆ.
ಕಚೇರಿಯಲ್ಲಿ ಸಾಕಷ್ಟುಒತ್ತಡದಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ಸಹದ್ಯೋಗಿಗಳಬಳಿ ಹೇಳಿಕೊಂಡಿದ್ದ ಎಂದು ತಿಳಿದು ಬಂದಿದೆ.ರಾಕೇಶ್ ಆತ್ಮಹತ್ಯೆ ಬಗ್ಗೆ ಸಾಕಷ್ಟು ಅನುಮಾನವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ವಿಜಯನಗರ ಠಾಣೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ