PFI ಮತ್ತು SDPI ಚಟುವಟಿಕೆ ಬಗ್ಗೆ LDFನ ಮೃದು ಧೋರಣೆ ಸಲ್ಲದು : ಯೋಗಿ ಗುಡುಗು
Team Udayavani, Apr 1, 2021, 3:58 PM IST
ತಿರುವನಂತಪುರಮ್ : ಯುಡಿಎಫ್ ಹಾಗೂ ಎಲ್ ಡಿ ಎಫ್ ಮೈತ್ರಿ ಸರ್ಕಾರ ಕೇರಳದ ಜನರಿಗೆ ದ್ರೋಹ ಬಗೆದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.
ವಿಧಾನ ಸಭಾ ಚುನಾವಣೆಯನ್ನು ಎದುರಿಸುತ್ತಿರುವ ಕೇರಳದಲ್ಲಿ ಎರಡು ದಿನಗಳ ಪ್ರವಾಸದಲ್ಲಿರುವ ಯೋಗಿ, ಪಥನಮತ್ತಟ್ಟದಲ್ಲಿ ಚುನಾವಣಾ ಪ್ರಚಾರವನ್ನುದ್ದೇಶಿ, ‘ಕೇರಳದ ಜನರು ಯುಡಿಎಫ್ ಹಾಗೂ ಎಲ್ ಡಿ ಎಫ್ ಮೈತ್ರಿಯನ್ನು ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಅದಕ್ಕೆ ಪ್ರತಿಯಾಗಿ ಮೈತ್ರಿ ಪಕ್ಷ ಕೇರಳದ ಜನರಿಗೆ ದ್ರೋಹ ಬಗೆದಿದೆ. ಈಗ ಸೇಡು ತೀರಿಸಿಕೊಳ್ಳುವುದಕ್ಕೆ ಸರಿಯಾದ ಸಮಯ ಬಂದಿದೆ. ಚುನಾವಣೆಯ ಮೂಲಕ ಬಿಜೆಪಿಯನ್ನು ಆರಿಸುವುದರ ಮೂಲಕ ದ್ರೋಹಕ್ಕೆ ತಕ್ಕ ಪಾಠ ಕಲಿಸಬಹುದಾಗಿದೆ’ ಎಂದು ಕೇರಳದ ಜನತೆಗೆ ಹೇಳಿದ್ದಾರೆ.
ಓದಿ : ಗಡಿ ಭದ್ರತಾ ಪಡೆಯಲ್ಲಿ ಅವಕಾಶ ಪಡೆದ ಬೈಂದೂರಿನ ಯುವತಿ
ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ಎಲ್ ಡಿ ಎಫ್ ನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗದುಕೊಂಡ ಯೋಗಿ, ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತಿವೆ. ಅಂತಹ ಅಂಶಗಳಿಗೆ ಎಲ್ ಡಿ ಎಫ್ ನ ಮೃದು ಧೋರಣೆ ಸಲ್ಲದು ಎಂದು ಗುಡುಗಿದ್ದಾರೆ.
ಮುಸ್ಲಿಂ ಲೀಗ್-ಕಾಂಗ್ರೆಸ್ ಮೈತ್ರಿ ಕೇರಳದ ಸುರಕ್ಷತೆಗೆ ದ್ರೋಹವನ್ನುಂಟು ಮಾಡುತ್ತಿವೆ. ಪಿ ಎಫ್ ಐ, ಎಸ್ ಡಿ ಪಿ ಐ ಜೊತೆಗೆ ಎಲ್ ಡಿ ಎಫ್ ಕೇರಳಕ್ಕೆ ಮೋಸ ಮಾಡಿವೆ. ಕೇರಳದಲ್ಲಿ ಯಾವ ರೀತಿಯ ಅಪಾಯಕಾರಿ ಚಟುವಟಿಕೆಗಳು ನಡೆಯುತ್ತಿವೆ ನಮಗೆ ಗೊತ್ತಿದೆ. ಅಂತಹ ದೇಶದ್ರೋಹ ಚಟುವಟಿಕೆಗಳ ನಿರ್ಮೂಲನೆಗೆ ನಾವು ಬದ್ದರಾಗಿದ್ದೇವೆ ಎಂದಿದ್ದಾರೆ.
ಓದಿ : ಭಾವುಕ ವಿದಾಯ: 132 ವರ್ಷಗಳ ಕಾಲ ಸುದೀರ್ಘ ಸೇವೆ ನೀಡಿ ಇತಿಹಾಸದ ಪುಟ ಸೇರಿದ ಮಿಲಿಟರಿ ಡೈರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ