ಸಹೋದರಿಯೊಂದಿಗೆ ಮಾತನಾಡಲು ಬಿಡಿ: ಸಿ.ಡಿ ಯುವತಿಯ ತಮ್ಮನ ಅಳಲು
Team Udayavani, Apr 1, 2021, 4:00 PM IST
ವಿಜಯಪುರ: ನಮ್ಮ ಸಹೋದರಿಯನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಕೂಡಲೇ ನಮ್ಮ ಸಹೋದರಿಯನ್ನು ನಮ್ಮೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡಿ ಎಂದು ಸಿ.ಡಿ ಪ್ರಕರಣದ ಯುವತಿಯ ಸಹೋದರರು ಆಗ್ರಹಿಸಿದ್ದಾರೆ.
ಗುರುವಾರ ಬೆಳಗಾವಿ ನಗರದಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಜ್ಜಿಯ ಮನೆಗೆ ಸ್ಥಳಾಂತರಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಡಿ ಲೇಡಿ ಸಹೋದರರು ಹಾಗೂ ಆಕೆಯ ತಂದೆ, ನಮ್ಮ ಮಗಳೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುವಂತೆ ಎಸ್ ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಅವಕಾಶ ನೀಡಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಸಿಡಿಲೇಡಿ ಕುಟುಂಬ ವಿಜಯಪುರ ಜಿಲ್ಲೆಗೆ ಸ್ಥಳಾಂತರ
ಸದ್ಯ ಯಾರಿಂದಲೂ ನಮಗೆ ಭಯವಿಲ್ಲ, ಸೂಕ್ತ ಪೊಲೀಸ್ ಭದ್ರತೆ ಸಿಕ್ಕಿದೆ. ಪೊಲೀಸ್ ಭದ್ರತೆಯಲ್ಲೇ ಬೆಳಗಾವಿಯಿಂದ ಇಲ್ಲಿಗೆ ಬಂದಿದ್ದೇವೆ ಎಂದಿದ್ದಾರೆ.
ತಮ್ಮ ರಾಜಕೀಯ ಲಾಭಕ್ಕಾಗಿ ಡಿ.ಕೆ.ಶಿವಕುಮಾರ್ ನಮ್ಮ ಸಹೋದರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಬಳಿ ಅಗತ್ಯ ದಾಖಲೆಗಳಿವೆ. ಕೆಲವನ್ನು ಎಸ್ ಐಟಿ ತನಿಖಾ ತಂಡಕ್ಕೆ ನೀಡಿದ್ದೇವೆ. ನಮ್ಮಲ್ಲಿ ಇನ್ನೂ ಕೆಲ ದಾಖಲೆಗಳಿದ್ದು, ಸಮಯ ಬಂದಾಗ ಎಸ್ ಐಟಿ ತಂಡಕ್ಕೆ ನೀಡುತ್ತೇವೆ ಎಂದಿದ್ಧಾರೆ.
ನಮ್ಮ ಮಗಳನ್ನು ಮೊಬೈಲ್ ಮೂಲಕ ಸಂಪರ್ಕಿಸಲೂ ಆಕೆಯ ಈಗಿನ ನಂಬರ್ ನಮ್ಮ ಬಳಿ ಇಲ್ಲವಾಗಿದೆ. ಡಿ.ಕೆ.ಶಿವಕುಮಾರ್ ರಾಜಕೀಯ ಷಡ್ಯಂತ್ರದ ಪ್ರಭಾವಿತಳಾಗಿ ಒತ್ತಡದಲ್ಲಿ ಇರುವ ಆಕೆಗೆ ನಮ್ಮ ಸಾಂತ್ವನದ ಅಗತ್ಯವಿದೆ. ಹೀಗಾಗಿ ಮಗಳೊಂದಿಗೆ ಮಾತನಾಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ