ಬಿ.ಸಿ.ರೋಡ್‌ನ‌ಲ್ಲಿ ಹೆದ್ದಾರಿಯೇ ಬಸ್‌ ನಿಲ್ದಾಣ! ‌

 ರಸ್ತೆ ಬದಿ ಸಾಲುಗಟ್ಟಿ ನಿಲ್ಲುವ ಬಸ್‌ಗಳು  ನಿತ್ಯವೂ ಟ್ರಾಫಿಕ್‌ ಜಾಮ್

Team Udayavani, Apr 2, 2021, 3:00 AM IST

ಬಿ.ಸಿ.ರೋಡ್‌ನ‌ಲ್ಲಿ ಹೆದ್ದಾರಿಯೇ ಬಸ್‌ ನಿಲ್ದಾಣ!  ‌

ಬಂಟ್ವಾಳ: ಸದಾ ವಾಹನಗಳಿಂದ ತುಂಬಿ ರುವ ಪೇಟೆ ಬಿ.ಸಿ.ರೋಡ್‌ ಸಮಸ್ಯೆಗಳಿಂದಲೂ ಮುಕ್ತವಾಗಿಲ್ಲ. ಹಲವು ವರ್ಷಗಳಿಂದ ಹೆದ್ದಾರಿಯೇ ಇಲ್ಲಿನ ಬಸ್‌ ನಿಲ್ದಾಣವಾಗಿದ್ದು, ಸಾಲು ಗಟ್ಟಿ ಬಸ್‌ಗಳು ನಿಂತರೆ ಹೆದ್ದಾರಿಯೇ ಬಂದ್‌ ಆಗುವ ಸ್ಥಿತಿ. ನಿತ್ಯವೂ ಇದೇ ರೀತಿ ಬಸ್‌ಗಳ ನಿಲುಗಡೆಯಿಂದ ಟ್ರಾಫಿಕ್‌ ಜಾಮ್‌ನ ತೊಂದರೆ ತಪ್ಪುವುದಿಲ್ಲ.

ಮಂಗಳೂರು ಭಾಗದಿಂದ ಪುತ್ತೂರು,  ಧರ್ಮಸ್ಥಳ, ವಿಟ್ಲ ಮೊದಲಾದ ಭಾಗಗಳಿಗೆ ತೆರಳುವ ಬಸ್‌ಗಳ ಜತೆಗೆ ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ದಾವಣಗೆರೆ ಮೊದಲಾದ ಪ್ರದೇಶಗಳಿಗೆ ತೆರಳುವ ಬಸ್‌ಗಳು ಕೂಡ ಇಲ್ಲೇ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು ಮತ್ತು ಇಳಿಸುವುದು. ಬಳಿಕ ಇತರ ಬಸ್‌ಗಳ ಜತೆಗೆ ಸ್ಪರ್ಧೆಗಾಗಿ ಕೊಂಚ ಹೊತ್ತು ಹೆದ್ದಾರಿಯಲ್ಲೇ ಬಸ್‌ ನಿಲ್ಲಿಸಿ ಪ್ರಯಾಣಿಕರಿಗಾಗಿ ಕಾಯುತ್ತಾರೆ. ಹೀಗೆ ಒಂದರ ಹಿಂದೆ ಒಂದರಂತೆ ಐದಾರು ಬಸ್‌ಗಳು  ನಿಂತರೆ ಸಾಕು ಇಡೀ ಹೆದ್ದಾರಿಯೇ ಬಂದ್‌ ಆಗುತ್ತದೆ. ಕೆಲವೊಂದು ಸಂದರ್ಭದಲ್ಲಿ ಸುಮಾರು 10 ಬಸ್‌ಗಳು ಕೂಡ ನಿಲ್ಲುತ್ತವೆ.

ಅಲ್ಲೇ ಪಕ್ಕದಲ್ಲಿ ರಿಕ್ಷಾ ನಿಲ್ದಾಣವಿದ್ದು, ಅವುಗಳು ಕೂಡ ನಿಲ್ದಾಣದಿಂದ ಹೊರ ಬರಬೇಕಾದರೆ ಬಸ್‌ ಹೋಗುವವರೆಗೆ ಕಾಯಬೇಕಾದ ಸ್ಥಿತಿ ಇದೆ. ಈ ನಿಲ್ದಾಣಕ್ಕೆ ಕೆಎಸ್‌ಆರ್‌ಟಿಸಿ ಹಾಗೂ ಕಾಂಟ್ರಾಕ್ಟ್ ಕ್ಯಾರೇಜ್‌ ಖಾಸಗಿ ಬಸ್‌ಗಳು ಆಗಮಿಸುತ್ತಿದ್ದು, ಕೆಎಸ್‌ಆರ್‌ಟಿಸಿಗಿಂತಲೂ ಕೊಂಚ ಹೆಚ್ಚು ಹೊತ್ತು ಖಾಸಗಿ ಬಸ್‌ಗಳನ್ನು ನಿಲ್ಲಿಸಲಾಗುತ್ತದೆ.

ಸಂಜೆ ಹೆಚ್ಚಿನ ತೊಂದರೆ :

ಸಂಜೆ ಹೊತ್ತಿನಲ್ಲಿ ಮಂಗಳೂರು ಭಾಗದಿಂದ ಹೆಚ್ಚಿನ ವಾಹನಗಳು ಬಿ.ಸಿ.ರೋಡ್‌ನ‌ತ್ತ ಆಗಮಿ ಸುವುದರಿಂದ ಹೆಚ್ಚಿನ ಸಂಚಾರದೊತ್ತಡ ಇರುತ್ತದೆ. ಇದೇ ವೇಳೆ ಈ ರೀತಿ ಬಸ್‌ಗಳು ಸಾಲುಗಟ್ಟಿ ನಿಂತಿದ್ದರೆ, ಟ್ರಾಫಿಕ್‌ ಜಾಮ್‌ ಕೂಡ ಉಂಟಾಗುತ್ತದೆ. ಜತೆಗೆ ಸಂಜೆಯ ಹೊತ್ತು ಪ್ರಯಾಣಿಕರ ಒತ್ತಡವೂ ಹೆಚ್ಚಿರುವುದರಿಂದ ಬಸ್‌ಗಳು ಕೊಂಚ ಹೆಚ್ಚು ಹೊತ್ತೇ ನಿಲ್ಲುತ್ತವೆ. ಬಸ್‌ಗಳು ಮಂಗಳೂರು ಭಾಗದಿಂದ ಬಂದ ಪ್ರಯಾಣಿಕರನ್ನು ಇಳಿಸಿ, ತಮ್ಮ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋದರೆ ಹೆಚ್ಚಿನ ಸಮಸ್ಯೆಯಿಲ್ಲ. ಆದರೆ ಪ್ರಯಾಣಿಕರಿಗಾಗಿ ಬಸ್‌ಗಳು ನಿಂತು ಕಾಯುವುದರಿಂದ ಹೆಚ್ಚಿನ ತೊಂದರೆ ಎದುರಾಗುತ್ತಿದೆ. ಒಮ್ಮೆ ನಿಲ್ಲುವಾಗ ಒಂದೇ ಭಾಗಕ್ಕೆ ತೆರಳುವ 2-3 ಬಸ್‌ಗಳು ಇರುವುದರಿಂದ ಸಾಲುಗಟ್ಟಿ ಹೋದರೆ ಪ್ರಯಾಣಿಕರು ಸಿಗುವುದಿಲ್ಲ ಎಂದು ಪ್ರತಿ ಬಸ್‌ನವರು ಬಿ.ಸಿ.ರೋಡ್‌ನ‌ಲ್ಲಿ ಕೊಂಚ ಹೊತ್ತು ನಿಂತೇ ಹೋಗುತ್ತಾರೆ.

ಯಾರ ತಪ್ಪೆಂದು ಹೇಳುವಂತಿಲ್ಲ! :

ಬಸ್‌ಗಳು ಹೆದ್ದಾರಿಯಲ್ಲಿ ನಿಲ್ಲುವುದ್ದನ್ನು ಬಸ್ಸಿನವರದ್ದೇ ತಪ್ಪು ಎಂದು ಹೇಳುವಂತಿಲ್ಲ. ಅವರಿಗೆ ಸಮರ್ಪಕ ನಿಲುಗಡೆ ಇಲ್ಲದ ಕಾರಣ ಈ ರೀತಿಯ ತೊಂದರೆ ಇದೆ. ನಿಲ್ದಾಣ ಇದ್ದರೂ ಅಲ್ಲಿಗೆ ಹೋಗುವಂತಿಲ್ಲ. ಹೀಗಾಗಿ ಬಸ್ಸಿನವರ ಮೇಲೆ ಆರೋಪ ಹೊರಿಸುವುದು ಸರಿಯಲ್ಲ. ಬಸ್ಸಿನ ವರು ಕೂಡ ತಮ್ಮಿಂದಾಗಿ ಇತರ ವಾಹನಗಳಿಗೆ ತೊಂದರೆ ಯಾಗಬಾರದು ಎಂದು ಪ್ರಯಾಣಿಕರು ಬಸ್ಸನ್ನೇರಿದ ತತ್‌ಕ್ಷಣ ಹೊರಟರೆ ಸಮಸ್ಯೆ ಪರಿಹಾರವಾಗುತ್ತದೆ.

ಇನ್ನೊಂದು ಬದಿ ಸರ್ವೀಸ್‌ ರಸ್ತೆ ನಿಲ್ದಾಣ :

ಪುತ್ತೂರು, ಧರ್ಮಸ್ಥಳ ಮೊದಲಾದ ಭಾಗಗಳಿಂದ ಆಗಮಿಸುವ ಬಸ್‌ಗಳು ಮಂಗಳೂರಿಗೆ ತೆರಳುವ ವೇಳೆ ಸರ್ವೀಸ್‌ ರಸ್ತೆಯಲ್ಲೇ  ನಿಲ್ಲಿಸಬೇಕಾದ ಸ್ಥಿತಿ ಇದೆ. ಆದರೆ ಇಲ್ಲಿ ಹೆದ್ದಾರಿಯಲ್ಲಿ ಬರುವ ವಾಹನಗಳು ಫ್ಲೈಓವರ್‌ ಮೂಲಕ ಸಾಗುವುದರಿಂದ ಹೆಚ್ಚಿನ ತೊಂದರೆ ಉಂಟಾಗಿಲ್ಲ.

ಬಸ್‌ಗಳಿಗೆ ಸೂಕ್ತ ನಿಲ್ದಾಣಗಳು ಇಲ್ಲದ ಕಾರಣ ಈ ರೀತಿಯ ತೊಂದರೆ ಎದುರಾಗುತ್ತದೆ. ಹೀಗಾಗಿ ನಾವು ಸಿಬಂದಿ ಮೂಲಕ ಬಸ್‌ಗಳು ಹೆಚ್ಚು ಹೊತ್ತು ನಿಲ್ಲದಂತೆ ಸೂಚನೆ ನೀಡುತ್ತೇವೆ. ಹೆಚ್ಚಿನ ಬಸ್‌ಗಳು ಬರುವುದರಿಂದ ಸಮಸ್ಯೆಯಾಗುತ್ತದೆ. ಬಿ.ಸಿ.ರೋಡ್‌ನ‌ಲ್ಲಿ ಸಾಕಷ್ಟು ಕಡೆ ಪಾರ್ಕಿಂಗ್‌ ಸಮಸ್ಯೆ ಕೂಡ ಇದೆ. -ರಾಜೇಶ್‌ ಕೆ.ವಿ., ಪಿಎಸ್‌ಐ, ಸಂಚಾರಿ ಪೊಲೀಸ್‌ ಠಾಣೆ ಬಂಟ್ವಾಳ

 

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.