ಪ್ರತಿ ಬುಧವಾರ ಇನ್‌ಸ್ಪೆಕ್ಷನ್‌ ಡೇ: ಎ. 7ರಿಂದಲೇ ಜಾರಿ


Team Udayavani, Apr 2, 2021, 3:20 AM IST

ಪ್ರತಿ ಬುಧವಾರ ಇನ್‌ಸ್ಪೆಕ್ಷನ್‌ ಡೇ: ಎ. 7ರಿಂದಲೇ ಜಾರಿ

ಸಾಂದರ್ಭಿಕ ಚಿತ್ರ

ಉಡುಪಿ:  ರಾಜ್ಯ ಆರೋಗ್ಯ ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲವರ್ಧಿಸುವ ಉದ್ದೇಶದಿಂದ ಇಲಾಖೆಯ ಅಧಿಕಾರಿಗಳಿಗೆ ಪ್ರತೀ ಬುಧವಾರ ಆರೋಗ್ಯ ಕೇಂದ್ರಗಳ ಇನ್‌ಸ್ಪೆಕ್ಷನ್‌(ಪರಿಶೀಲನೆ)ಗೆ ರಾಜ್ಯ ಸರಕಾರ ಆದೇಶಿಸಿದೆ. ಎ. 7 ರಿಂದಲೇ ಇದು ರಾಜ್ಯಾದ್ಯಂತ ಜಾರಿಗೆ ಬರಲಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರ ಸಹಿತ ವೈದ್ಯರ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ಈ ಪರಿಶೀಲನೆ ನಡೆಯಲಿದ್ದು ಎಲ್ಲ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಆಯಾ ತಾಲೂಕು ಆರೋಗ್ಯಾಧಿಕಾರಿಗಳು ಭೇಟಿ ನೀಡಲಿದ್ದಾರೆ.

ಕಾರ್ಯಕ್ಷಮತೆಯಿಂದ ಪದೋನ್ನತಿ :

ಪ್ರತಿದಿನ ಡೈರಿ ಮೂಲಕ ಆ ದಿನ ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಉಲ್ಲೇಖೀಸುವುದನ್ನು ಕಡ್ಡಾಯ ಗೊಳಿಸಲಾಗಿದೆ. ಪದೋನ್ನತಿ ಸಂದರ್ಭ ಇದನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಟಿಎ, ಡಿಎ ಸಹಿತ ಆ ದಿನದ ಎಲ್ಲ ವಿವರಗಳನ್ನು ಆ ಡೈರಿಯಲ್ಲಿ ನಮೂದಿಸುವಂತೆ ಸೂಚಿಸಲಾಗಿದೆ. ಈ ಮೂಲಕ ಎಲ್ಲ ಅಧಿಕಾರ ವೃಂದದವರು ಸದಾಕಾಲ ಕಾರ್ಯ ಪ್ರವೃತ್ತ ರಾಗುವಂತೆ ಮಾಡುವ ಉದ್ದೇಶ ಸರಕಾರದ್ದು.

ಯಾವುದೇ ಸಂದರ್ಭದಲ್ಲಿ  ಡೈರಿ ಪರಿಶೀಲನೆ :

ಪ್ರಗತಿ ಪರಿಶೀಲನೆ ಸಭೆ ಸಹಿತ ಸಚಿವರು ಭೇಟಿ ನೀಡುವ ಸಂದರ್ಭ ಆರೋಗ್ಯ ಇಲಾಖೆ ಅಧಿಕಾರಿಗಳ ಉತ್ತರಗಳು ಸಮರ್ಪಕವಾಗಿಲ್ಲದಿದ್ದರೆ ತಮ್ಮ ಡೈರಿಯನ್ನು ಅವರು ಪರಿಶೀಲಿಸಬಹುದಾಗಿದೆ.

ಭೇಟಿ ಸಂದರ್ಭ ಕಟ್ಟಡಗಳ ನ್ಯೂನತೆ, ಕಾಂಪೌಂಡ್‌ ವಾಲ್‌, ಅಲ್ಲಿನ ಸಿಬಂದಿಯ ಅಗತ್ಯತೆ, ಒಪಿಡಿ ಸರಿಯಾಗಿ ಕಾರ್ಯ ನಿರ್ವಹಿಸು ತ್ತಿದೆಯೇ, ಸಿಬಂದಿಯ ಹಾಜರಾತಿ ಪರಿಶೀಲನೆ, ಆಡಳಿತಾತ್ಮಕ ವಾಗಿರುವ ವೈಫ‌ಲ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಅಗತ್ಯ ಇರುವ ಸೌಲಭ್ಯಗಳನ್ನು ಒದಗಿಸಲು ಮುಂದಿನ ಕ್ರಮ ತೆಗೆದುಕೊಳ್ಳಲು ಆದ್ಯತೆ ನೀಡಬೇಕು.

ಕಾರ್ಯಕ್ರಮಗಳ ಅನುಷ್ಠಾನ :

ಆರೋಗ್ಯ ಇಲಾಖೆ ಸಂದರ್ಭಕ್ಕನುಸಾರ ಜಾರಿಗೆ ತರುವ ನಿಯಮಾವಳಿಗಳು ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನ ವಾಗುತ್ತಿರುವ ಬಗ್ಗೆಯೂ ಮಾಹಿತಿ ಪಡೆದು ಕೊಳ್ಳಬೇಕು. ರೋಗ-ರುಜಿನಗಳು ಅಧಿಕವಾಗಿರುವ ಬಗ್ಗೆಯೂ ಸೂಕ್ತ ಮಾಹಿತಿ ಪಡೆದುಕೊಂಡು ಅದರ ನಿವಾರಣೆಗೆ ಕ್ರಮ ತೆಗೆದುಕೊಳ್ಳಬೇಕು. ಆರೋಗ್ಯ ಪರಿಕರಗಳು ಸಮರ್ಪಕವಾಗಿ ತಲುಪಿರುವ ಬಗ್ಗೆ ಮಾಹಿತಿ ತೆಗೆದುಕೊಳ್ಳಬೇಕು.

ಪರಿಶೀಲನೆ : 

ಪ್ರತೀ ದಿನ ಅಧಿಕಾರಿಗಳು ಆಯಾ ಆರೋಗ್ಯ ಕೇಂದ್ರಗಳಿಗೆ ಹೋಗಿ ಪರಿಶೀಲನೆ ನಡೆಸ ಬಹುದು. ಆದರೆ ಕೆಲವು ಮಂದಿ ಈ ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ. ಈ ಕಾರಣಕ್ಕಾಗಿ ವಾರದಲ್ಲಿ ಒಂದು ದಿನವಾದರೂ ಕಡ್ಡಾಯವಾಗಿ ತೆರಳುವಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಆರೋಗ್ಯ ಕೇಂದ್ರಗಳ ಪ್ರಗತಿ, ರೋಗಿಗಳ ಬಗ್ಗೆ ಕಾಳಜಿ ಜತೆಗೆ ಅಧಿಕಾರಿ ಗಳ ಪದೋನ್ನತಿಗೂ ಸಹಕಾರ ಸಿಗಲಿದೆ.

06 : ಸಮುದಾಯ ಆರೋಗ್ಯ ಕೇಂದ್ರ

02 : ಸಮುದಾಯ ಆರೋಗ್ಯ ಕೇಂದ್ರ

01 : ಜಿಲ್ಲಾಸ್ಪತ್ರೆ

01 : ತಾಯಿ ಮತ್ತು ಮಕ್ಕಳ ಆಸ್ಪತ್ರೆ

61 : ಪ್ರಾಥಮಿಕ ಆರೋಗ್ಯ ಕೇಂದ್ರ

02 : ಅರ್ಬನ್‌ ಪ್ರೈಮರಿ ಸೆಂಟರ್‌

01 : ಎಫ್ಪಿಎಐ ಸಂಸ್ಥೆ

74 : ಒಟ್ಟು ಆರೋಗ್ಯ ಕೇಂದ್ರ

ರಾಜ್ಯದಲ್ಲಿ ಆರೋಗ್ಯ ಇಲಾಖೆಯ ಬಲವರ್ಧನೆಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸುಮಾರು 2 ಸಾವಿರ ವೈದ್ಯರ ನೇರ ನೇಮಕಾತಿ ಮಾಡಿದ್ದು, ಮುಂದಿನ 45 ದಿನಗಳೊಳಗೆ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಿತ ಸರಕಾರಿ ಆಸ್ಪತ್ರೆಗಳ ವೈದ್ಯರ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಪ್ರತೀ ಬುಧವಾರ ಕಡ್ಡಾಯವಾಗಿ ಆರೋಗ್ಯಾಧಿಕಾರಿಗಳು ಇನ್‌ಸ್ಪೆಕ್ಷನ್‌ಗೆ ತೆರಳುವಂತೆ ಸೂಚಿಸಲಾಗಿದೆ. ಪ್ರಾಥಮಿಕ, ದ್ವಿತೀಯ, ತೃತೀಯ ಹಂತದ ಚಿಕಿತ್ಸೆಯನ್ನು ಉತ್ತಮಗೊಳಿಸುವುದು ಇದರ ಉದ್ದೇಶವಾಗಿದೆ. -ಡಾ| ಕೆ. ಸುಧಾಕರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ  

ಟಾಪ್ ನ್ಯೂಸ್

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.