ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ? ನೋಡುವುದು ಹೇಗೆ..?
Team Udayavani, Apr 2, 2021, 11:43 AM IST
ನವ ದೆಹಲಿ : ಪ್ರತಿ ವರ್ಷ ಮೂರು ಕಂತುಗಳಲ್ಲಿ ದೇಶದ ರೈತರ ಬ್ಯಾಂಕ್ ಖಾತೆಗಳಿಗೆ 6000 ಸಾವಿರವನ್ನು ವರ್ಗಾಯಿಸುವ ಪ್ರಧಾನಿ ನರೇಂದ್ರ ಮೊದಿಯವರ ಜನ ಪರ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 8 ನೇ ಕಂತು ಬಿಡುಗಡೆಯಾಗಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಈ ವರ್ಷದ ಮೊದಲ ಕಂತು ಹಾಗೂ ಯೋಜನೆಯ ಎಂಟನೇ ಕಂತು ಬಿಡುಗಡೆಯಾಗಿದ್ದು, ಯೋಜನೆಯ ಅಡಿಯಲ್ಲಿ 11.66 ಕೋಟಿ ರೂ ನಷ್ಟು ಹಣ ರೈತರ ಖಾತೆಗಳನ್ನು ತುಂಬಲಿದೆ.
ಓದಿ : ತೋತಾಪುರಿಯ ಕಲರ್ಫುಲ್ ಹಾಡು: ಹೆಜ್ಜೆ ಹಾಕಿದ ಜಗ್ಗೇಶ್-ಅದಿತಿ ಪ್ರಭುದೇವ
ಬಿಡುಗಡೆಯಾಗಿದೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ನೇ ಕಂತು :
ಎರಡು ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ ರೈತರ ಖಾತೆಗೆ ಆರು ಸಾವಿರ ರೂಪಾಯಿಗಳನ್ನು ವರ್ಗಾಯಿಸುವ ಯೋಜನೆಯ ಮೊದಲ ಕಂತು ಪ್ರತಿ ವರ್ಷ ಏಪ್ರಿಲ್ 1 ರಿಂದ ಜುಲೈ 31 ರ ತನಕ ನೀಡುತ್ತದೆ. ಎರಡನೇ ಕಂತನ್ನು ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ಮತ್ತು ಮೂರನೇ ಕಂತನ್ನು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ.
ನೀವು ಈ ವರ್ಷದ ಮೊದಲ ಕಂತಿನಲ್ಲಿ 2000 ರೂಪಾಯಿಗಳು ನಿಮ್ಮ ಖಾತೆಯನ್ನು ತಲುಪಿದೆಯೇ ಎಂದು ಪರಿಶೀಲಿಸಬಹುದಾಗಿದೆ. ಸರ್ಕಾರ ಎಲ್ಲಾ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮ್ಮ ಹಣ ಶೀಘ್ರವೇ ನಿಮ್ಮ ಖಾತೆಗೆ ವರ್ಗಾವಣೆಯಾಗುತ್ತದೆ.
ಓದಿ : ಶ್ರೇಯಸ್ ಪ್ರೇಮಪುರಾಣ: ವಿಷ್ಣುಪ್ರಿಯದಲ್ಲಿ 90ರ ಲವ್ ಸ್ಟೋರಿ
ನಿಮ್ಮ ಹೆಸರು ಸರ್ಕಾರ ಬಿಡುಗಡೆಗೊಳಿಸುವ ಪಟ್ಟಿಯಲ್ಲಿದೆಯೇ ಎಂದು ಪರಿಶೀಲಿಸುವುದು ಹೇಗೆ..?
*https://pmkisan.gov.in ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
*ವೆಬ್ ಸೈಟ್ ಫಾರ್ಮರ್ಸ್ ಕಾರ್ನರ್ ಆಯ್ಕೆಯನ್ನು ಕಾಣಿಸುತ್ತದೆ. ಫಾರ್ಮರ್ಸ್ ಕಾರ್ನರ್ ವಿಭಾಗದೊಳಗೆ, ಫಲಾನುಭವಿಗಳ ಪಟ್ಟಿಯ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ನ್ನು ಒತ್ತಿ.
*ಪಟ್ಟಿಯಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ಬ್ಲಾಕ್ ಮತ್ತು ಗ್ರಾಮದ ಮಾಹಿತಿಯನ್ನು ತಿಳಿಸಬೇಕಾಗುತ್ತದೆ.
* ’ಗೆಟ್ ರಿಪೋರ್ಟ್’ ಕ್ಲಿಕ್ ಮಾಡಿದಾಗ, ಫಲಾನುಭವಿಗಳ ಸಂಪೂರ್ಣ ಪಟ್ಟಿ ನಿಮಗೆ ಲಭ್ಯವಾಗುತ್ತದೆ.
ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 81,466 ಕೋವಿಡ್ ಕೇಸ್ ಪತ್ತೆ, 6 ತಿಂಗಳಲ್ಲಿ ಗರಿಷ್ಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ