ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ
Team Udayavani, Apr 2, 2021, 1:19 PM IST
ಮಂಡ್ಯ: ತಾಲೂಕಿನ ಕುದರಗುಂಡಿ ಗ್ರಾಮದ ಸರ್ವೆ ನಂ.245ರ 109 ಎಕರೆ ಭೂಮಿ ಸ್ವಾಧೀನದ ಕೆಐಎಡಿಬಿಪ್ರಯತ್ನವನ್ನು ಜಿಲ್ಲಾಧಿಕಾರಿ ಕರೆದಿದ್ದ ಸಭೆಯಲ್ಲಿ ಕುದರಗುಂಡಿ ಗ್ರಾಮದ ಭೂ ಮಾಲೀಕರು ಪ್ರಬಲವಾಗಿ ವಿರೋಧಿಸಿದ್ದರಿಂದ ಜಿಲ್ಲಾ ಧಿಕಾರಿ ಸಭೆ ಬರ್ಖಾಸ್ತುಗೊಳಿಸಿದರು.
ಸಭೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಟಿ.ಯಶವಂತ ಮಾತನಾಡಿ, ಕೆಐಎಡಿಬಿಯ ಭೂಸ್ವಾಧೀನ ಕಾನೂನು ಬಾಹಿರ. ಪ್ರಾಥಮಿಕ ಅಧಿಸೂಚನೆ ಹೊರಡಿಸಿದ 20 ವರ್ಷಗಳ ನಂತರ ಅಂತಿಮ ಅಧಿ ಸೂಚನೆ ಹೊರಡಿಸಿರುವುದು ಭೂಸ್ವಾಧೀನ ಕಾಯ್ದೆ 2013ರ ಸ್ಪಷ್ಟ ಉಲ್ಲಂಘನೆ ಯಾಗಿದೆ. ಈ ಸಂಬಂಧಿಸಿ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ತೀರ್ಪುಗಳು ಕೂಡ ಇಂಥ ಅಕ್ರಮ ಭೂಸ್ವಾಧೀನವನ್ನು ನಿರ್ಬಂದಿಸಿವೆ. ಕೂಡಲೇ ಕೆಐಎಡಿಬಿ ಅಕ್ರಮ ಭೂಸ್ವಾಧೀನವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿ ಸಮುದಾಯದ ಕುಟಂಬಗಳೇ ಹೆಚ್ಚು ಇರುವ ರೈತರಹಿತರಕ್ಷಣೆಗೆ ಮಾರಕವಾಗಿರುವ ಹಾಗೂ ದಲಿತರ ಕಲ್ಯಾಣದ ಘನ ಉದ್ದೇಶಕ್ಕೆ ವಿರುದ್ಧವಾಗಿರುವ ಕೆಐಎಡಿಬಿ ಭೂಸ್ವಾಧೀನದ ವಿರುದ್ಧ ಜಿಲ್ಲಾ ಧಿಕಾರಿ ರೈತರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಕುದರಗುಂಡಿಗ್ರಾಮದ ರೈತರಾದ ಸಿದ್ದಯ್ಯ, ಶಿವಣ್ಣ,ಶಿವಲಿಂಗಯ್ಯ, ಶ್ರೀನಿವಾಸ್, ಪುಟ್ಟಸ್ವಾಮಿಗೌಡ, ಮಾದಪ್ಪ, ಸ್ವಾಮಿ, ಸಿದ್ದರಾಮು,ಮಹದೇವಯ್ಯ, ಪ್ರಕಾಶ್, ಬಿ.ಸಿದ್ದಯ್ಯ, ಸಂಜೀವಮ್ಮ, ಸಣ್ಣತಾಯಮ್ಮ,ಸಿ.ಬೆಟ್ಟಯ್ಯ, ಶ್ರೀನಿವಾಸ, ರಾಮ ಲಿಂಗಯ್ಯ, ಸುದರ್ಶನ್ ಮುಂತಾದವರು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರೈತರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಎಸ್.ಅಶ್ವಥಿ ಭೂಸ್ವಾಧೀನಕ್ಕೆ ವಿರೋಧ ಬಂದ ಹಿನ್ನೆಲೆಯಲ್ಲಿ ಸಭೆ ಬರ್ಖಾಸ್ತುಗೊಳಿಸಿದರು. ಸಭೆಯಲ್ಲಿ ಕೆಐಎಡಿಬಿ ಅಧಿಕಾರಿ ಸುರೇಶ್ ಕುಮಾರ್ ಸೇರಿದಂತೆ ಮತ್ತಿತರರಿದ್ದರು. ನಂತರಸಭೆ ನಡೆಸಿದ ರೈತರು ಕೆಐಎಡಿಬಿ ಭೂಸ್ವಾ ಧೀನದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ