50% ಆದೇಶಕ್ಕೆ ಕನ್ನಡ ಚಿತ್ರರಂಗಕ್ಕೆ ಆಘಾತ : ಸರ್ಕಾರಕ್ಕೆ ತಾರೆಯರ ಒಕ್ಕೊರಲಿನ ಮನವಿ  


Team Udayavani, Apr 3, 2021, 3:40 PM IST

Untitled-1

 

 

ಸರ್ಕಾರದ 50% ಅದೇಶಕ್ಕೆ ಸಿಡಿದ ಕನ್ನಡ ಚಿತ್ರರಂಗ : ಸರ್ಕಾರಕ್ಕೆ ತಾರೆಯರ ಒಕ್ಕೂರಲಿನ ಮನವಿ  

ಬೆಂಗಳೂರು : ಚಿತ್ರಮಂದಿರಗಳಲ್ಲಿ 50% ಆಸನ ಭರ್ತಿಗೆ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಕನ್ನಡ ಚಿತ್ರರಂಗದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಗುತ್ತಿದೆ. ಚಂದನವನದ ನಟರು ಹಾಗೂ ನಿರ್ದೇಶಕರು ಸರ್ಕಾರದ ನೂತನ ಸುತ್ತೋಲೆ ವಿರುದ್ಧ ಒಕ್ಕೊರಲಿನಿಂದ ಪ್ರತಿಭಟಿಸುತ್ತಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಶುಕ್ರವಾರ ರಾಜ್ಯ ಸರ್ಕಾರ ನೂತನ ಸುತ್ತೋಲೆ ಹೊರಡಿಸಿ, ಥಿಯೇಟರ್ ಗಳಲ್ಲಿ ಕೇವಲ 50% ಮಾತ್ರ ಆಸನ ವ್ಯವಸ್ಥೆ ಕಲ್ಪಿಸುವಂತೆ ಆದೇಶಿಸಿದೆ. ಇದು ಕಳೆದೆರಡು ದಿನಗಳ ಹಿಂದೆ ತೆರೆ ಕಂಡಿರುವ ಪುನೀತ್ ರಾಜಕುಮಾರ್ ಅವರ ‘ಯುವರತ್ನ’ ಸೇರಿದಂತೆ ಬಿಡುಗಡೆಗೆ ಸಿದ್ಧವಾಗಿರುವ ಕನ್ನಡದ ಸಿನಿಮಾಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಹಿನ್ನೆಲೆ ಸರ್ಕಾರ ಈ ಕೂಡಲೇ ತಮ್ಮ ಆದೇಶ ಹಿಂಪಡೆಯುವಂತೆ ನಟ ಪುನೀತ್ ರಾಜಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರು ನಿನ್ನೆಯಷ್ಟೆ ( ಶುಕ್ರವಾರ) ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಇಂದು ಯುವರತ್ನ ಚಿತ್ರತಂಡದ ಬೆನ್ನಿಗೆ ನಿಂತಿರುವ ಕನ್ನಡ ಚಿತ್ರರಂಗದ ತಾರೆಯರು ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದಾರೆ. ನಟ ಸುದೀಪ್, ಸತೀಶ್ ನೀನಾಸಂ, ನಿರ್ದೇಶಕ ದಿನಕರ್ ತೂಗುದೀಪ, ಜೋಗಿ ಖ್ಯಾತಿಯ ಪ್ರೇಮ್, ನಟ, ನಟ ನಿರ್ದೇಶಕ ರಿಷಭ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿಯಾ ಖ್ಯಾತಿಯ ಪೃತ್ವಿ ಅಂಬರ್, ಡಾಲಿ ಧನಂಜಯ್  ಹಾಗೂ ರವಿಶಂಕರ್ ಗೌಡ ಸೇರಿದಂತೆ ಅನೇಕರು ಈ ಆದೇಶ ಹಿಂಪಡೆದು, 100 % ಆಸನ ವ್ಯವಸ್ಥೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಕೇಳಿಕೊಂಡಿದ್ದಾರೆ.

ಸಿನಿಮಾ ಮನರಂಜನೆಗಾಗಿರಬಹುದು. ಅದರ ಜೊತೆಜೊತೆಗೆ ನೀವು ಊಹಿಸಲು ಸಾಧ್ಯವಿಲ್ಲದಷ್ಟು ಕುಟುಂಬಗಳಿಗೆ ಅದುವೆ ಹೊಟ್ಟೆ-ಬಟ್ಟೆ ನೀಡುತ್ತದೆ. ದಯವಿಟ್ಟು ಚಿತ್ರಮಂದಿರಗಳಲ್ಲಿ ಶೇಕಡ 50ರಷ್ಟು ಅನುಮತಿಯ ನಿಯಮವನ್ನು ಹಿಂಪಡೆಯಿರಿ ಎಂದು ನಟ ಸತೀಶ್ ನೀನಾಸಂ ಒತ್ತಾಯಿಸಿದ್ದಾರೆ.

ಚೇತರಿಕೆಯ ಹಾದಿಯಲ್ಲಿರುವ ಕನ್ನಡ ಚಿತ್ರರಂಗಕ್ಕೆ ಸರ್ಕಾರದ ಶೇ.50ರ ನಿರ್ಧಾರದಿಂದ ತೊಂದರೆ ಉಂಟಾಗಲಿದ್ದು, ಸಂಪೂರ್ಣ ಸುರಕ್ಷತಾ ಕ್ರಮಗಳೊಂದಿಗೆ ಚಿತ್ರ ಪ್ರದರ್ಶಿಸಲು ಬದ್ಧರಾಗಿದ್ದೇವೆ. ಸರ್ಕಾರ ದಯವಿಟ್ಟು ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಬೇಕಾಗಿ ಮನವಿ ನಟರು ಮನವಿ ಮಾಡಿದ್ದಾರೆ.

ಯಾವುದೇ ಮುನ್ಸೂಚನೆ ನೀಡದೆ ಸರ್ಕಾರದ ಈ ಆದೇಶ ನೀಡಿ ಒಂದು ಒಳ್ಳೆಯ ಕನ್ನಡ ಸಿನಿಮಾಕ್ಕೆ ಅನ್ಯಾಯ ಮಾಡುವುದು ಸರಿಯಲ್ಲ. ಒಬ್ಬ ಜವಾಬ್ದಾರಿಯುತ್ತ ನಾಗರಿಕನಾಗಿ ಸರ್ಕಾರದ ಆದೇಶವನ್ನು ಗೌರವಿಸುವುದು ಹಾಗೂ ಜನರ ಆರೋಗ್ಯದ ಬಗ್ಗೆ ಕಾಳಜಿವಯಿಸುವುದು ನಮ್ಮ ಕರ್ತವ್ಯ. ಒಂದು ವರ್ಷದ ನಂತರ ಚೇತರಿಸಿಕೊಳ್ಳುತ್ತಿದ್ದ ಚಿತ್ರರಂಗಕ್ಕೆ ಶೇ.50 ರಷ್ಟು ಕಡಿತ ಮಾರಕವಾಗುತ್ತದೆ. ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಸಂಪೂರ್ಣ ಸಾಮರ್ಥ್ಯದಲ್ಲಿ ಚಿತ್ರಮಂದಿರಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕಾಗಿ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.