ಬೇಡ ಜಂಗಮರಿಗೆ ಎಸ್‌ ಸಿ ಪ್ರಮಾಣಪತ್ರ ಕೊಡಿ : ಸಿದ್ಧನಕೊಳ್ಳ ಶ್ರೀ


Team Udayavani, Apr 3, 2021, 7:27 PM IST

jhfjfghjhjh

ಹುನಗುಂದ : ಬೇಡ ಜಂಗಮರಿಗೆ ಎಸ್‌ಸಿ ಮೀಸಲಾತಿ ಕೊಡಬೇಕು ಎಂದು ಸುಪ್ರೀಂಕೋರ್ಟ್‌ ಆದೇಶವಿದ್ದರೂ ಸರ್ಕಾರ ಮಾತ್ರ ಎಸ್‌ ಸಿ ಪ್ರಮಾಣ ಪತ್ರ ಕೊಡಲು ಹಿಂದೇಟು ಹಾಕುತ್ತಿದೆ. ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲಿ ಎನ್ನುವಂತಾಗಿದೆ ಎಂದು ಸಿದ್ಧನಕೊಳ್ಳ ಧರ್ಮಾಧಿಕಾರಿ ಡಾ| ಶಿವಕುಮಾರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಪಟ್ಟಣದ ಗಚ್ಚಿನಮಠದ ಆವರಣದಲ್ಲಿ ಶ್ರೀ ವೀರಮಾಹೇಶ್ವರ (ಜಂಗಮ) ಸಮಾಜ ಮತ್ತು ಗಚ್ಚಿನಮಠದ ಸಕಲ ಸದ್ಭಕ್ತರ ಮಂಡಳಿಯ ಸಹಯೋಗದಲ್ಲಿ ನಡೆದ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತ್ಯುತ್ಸವ ಹಾಗೂ ಅಯ್ನಾಚಾರ ಸಾಮೂಹಿಕ ಲಿಂಗ ದೀಕ್ಷೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಮೀಸಲಾತಿ ಕೊಡುವುದಾದರೇ ಎಲ್ಲ ಧರ್ಮ, ಜಾತಿಗಳಿಗೆ ಮೀಸಲಾತಿ ನೀಡಲಿ. ಇಲ್ಲವೇ ಆರ್ಥಿಕವಾಗಿ ಹಿಂದುಳಿದ ಮೀಸಲಾತಿ ಜಾರಿಗೊಳಿಸಿ. ಎಲ್ಲ ಜಾತಿಗಳಲ್ಲಿ ಬಡವರಿದ್ದಾರೆ ಅವರೆಲ್ಲರಿಗೂ ಮೀಸಲಾತಿ ಕೊಡಿ. ಇಲ್ಲದಿದ್ದರೇ ಮೀಸಲಾತಿಯನ್ನೇ ತೆಗೆದು ಹಾಕಿ. ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಹಾಗೂ ಕುರುಬರ ಎಸ್‌ಟಿ ಮೀಸಲಾತಿಗೆ ನಮ್ಮ ಬೆಂಬಲವಿದೆ ಎಂದರು.

ಕಮತಗಿಯ ಹೊಳೆಹುಚ್ಚೇಶ್ವರ ಸ್ವಾಮೀಜಿ ಮಾತನಾಡಿ, ಜಂಗಮರ ಜೋಳಿಗೆ ಭಿಕ್ಷೆಯ ಸಾಧನವಲ್ಲ. ಅದೊಂದು ಕಾಯಕ ನಿಷ್ಠೆಯ ಪ್ರತೀಕ. ಜಂಗಮ ಸಮಾಜ ಎಲ್ಲ ಧರ್ಮದವರಿಂದ ಗೌರವಕ್ಕೆ ಪಾತ್ರವಾದ ಸಮಾಜ. ನಮ್ಮ ಸಮಾಜದ ಜತೆಗೆ ಇತರೇ ಸಮಾಜವನ್ನು ಗೌರವದಿಂದ ಕಂಡಾಗ ಮಾತ್ರ ನಮ್ಮ ಸಮಾಜ ಗೌರವ ಉತ್ತಂಗಕ್ಕೆ ಏರಲು ಸಾಧ್ಯ ಎಂದರು. ಎಸ್‌ಆರ್‌ಎನ್‌ಇ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ನವಲಿಹಿರೇಮಠ ಮಾತನಾಡಿ, ರೇಣುಕಾಚಾರ್ಯರು ಜಂಗಮ ಸಮುದಾಯಕ್ಕೆ ಮಾತ್ರ ಸೀಮಿತರಲ್ಲ.

ಎಲ್ಲ ಸಮುದಾಯಗಳಿಗೆ ಬೇಕಾಗಿರುವ ಮಹಾನ್‌ ದೇವತಾ ಪುರುಷ. ರಾಜ್ಯದಲ್ಲಿ 3600 ಮಠಗಳಿವೆ. ಶೇ. 90ರಷ್ಟು ಮಠಗಳಲ್ಲಿ ಜಂಗಮ ಸಮುದಾಯದ ಮಠಾ ಧಿಪತಿಗಳಿದ್ದಾರೆ. ರಾಜ್ಯದ 30 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಅತೀ ಹೆಚ್ಚು ಜಂಗಮ ಸಮುದಾಯದ ಜನರಿದ್ದಾರೆ. ರಾಜ್ಯದಲ್ಲಿ 35 ಲಕ್ಷ ಜನ ಜಂಗಮ ಸಮುದಾಯದ ಜನರಿದ್ದಾರೆ.

ಅದರಲ್ಲಿ ಶೇ. 80ರಷ್ಟು ಜನ ಕಡುಬಡವರಿದ್ದಾರೆ. ಜಾತಿ ರಾಜಕೀಯವನ್ನು ಸುತ್ತಿಕೊಂಡು ಸಮಾಜದ ಸ್ವಾಸ್ಥÂ ಹಾಳು ಮಾಡುತ್ತಿವೆ ಎಂದರು. ಗಚ್ಚಿನಮಠದ ಅಮರೇಶ್ವರ ದೇವರು, ಅಧ್ಯಕ್ಷತೆ, ಹಡಗಲಿ ನಿಡಗುಂದಿಯ ರುದ್ರಮುನಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಶಿವಗಂಗಾ ರಂಜಣಗಿ ಉಪನ್ಯಾಸ ನೀಡಿದರು. ಬೆಳಗ್ಗೆ 11ಗಂಟೆಗೆ ಗಚ್ಚಿನಮಠದಿಂದ ಆರಂಭಗೊಂಡ ರೇಣುಕಾಚಾರ್ಯ ಭಾವಚಿತ್ರದ ಮೆರವಣಿಗೆ ಹಾಗೂ ಕುಂಭ ಮೇಳ ಲಿಂಗದಕಟ್ಟಿ, ಶ್ರೀ ಸಂಗಮೇಶ್ವರ ದೇವಸ್ಥಾನದ ಮಾರ್ಗವಾಗಿ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮರಳಿ ಗಚ್ಚಿನಮಠ ತಲುಪಿತು. ಈ ವೇಳೆ 21 ಜನರಿಗೆ ಅಯ್ನಾಚಾರ ಮತ್ತು ಲಿಂಗದೀಕ್ಷೆ ನೀಡಲಾಯಿತು.

ನಂದವಾಡಗಿ ಮಹಾಂತಲಿಂಗ ಶಿವಾಚಾರ್ಯರು, ದಾಸಬಾಳದ ವೀರೇಶ್ವರ ಸ್ವಾಮಿಗಳು, ವೀರಭದ್ರಯ್ಯ ಸರಗಣಾಚಾರಿ, ಪುರಸಭೆ ಸದಸ್ಯೆ ಗಿರಿಜಮ್ಮ ಮಠ, ಮಹಾಂತಯ್ಯ ಗಚ್ಚಿನಮಠ ಇದ್ದರು. ಮಹಾಂತೇಶ ಮಠ ಸ್ವಾಗತಿಸಿ, ನಿರೂಪಿಸಿದರು. ವೀರೇಶ ದಮ್ಮೂರಮಠ ವಂದಿಸಿದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.