ಜನರ ದಾರಿ ತಪ್ಪಿಸುವ ಕೆಲಸ ಮಾಡಬೇಡಿ: ಬದ್ನೂರ

ವೈದ್ಯಕೀಯ ಕಾಲೇಜಿಗೆ ಶಾಸಕರು ಬರೆದ ಪತ್ರಗಳೆಷ್ಟು ?

Team Udayavani, Apr 4, 2021, 7:12 PM IST

fhghew

ಬಾಗಲಕೋಟೆ: ನಗರಕ್ಕೆ ಘೋಷಣೆ ಯಾಗಿರುವ ಸರಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಅನುದಾನಕ್ಕೆ ನಮ್ಮದೇನು ತಕರಾರು ಇಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ ನೀಡಿದ ಹೇಳಿಕೆ ಬಾಲಿಶತನದಿಂದ ಕೂಡಿದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ರಮೇಶ ಬದ್ನೂರ ಆರೋಪಿಸಿದ್ದಾರೆ.

ನವನಗರದ ಕಸಾಪ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಏ. 6ರಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್‌ ಜನಾಂದೋಲನ ಹೋರಾಟದ ಕುರಿತ ಜಿಲ್ಲೆಯ ವಿವಿಧ ಪಕ್ಷದ ಹಾಗೂ ಸಂಘಟನೆಯ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕ ವೀರಣ್ಣ ಚರಂತಿಮಠ 2018ರಿಂದ ಇಲ್ಲಿಯವರೆಗೆ ಕಾಲೇಜು ಅನುದಾನಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಎಷ್ಟು ಬಾರಿ ಪತ್ರ ಬರೆದಿದ್ದಾರೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕು. ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಸಂಸದರು ಎಷ್ಟು ಬಾರಿ ಮುಖ್ಯಮಂತ್ರಿಗಳ ಬಳಿ ನಿಯೋಗ ತೆಗೆದುಕೊಂಡು ಹೋಗಿದ್ದೇವೆ ಎಂದು ಸ್ಪಷ್ಟನೆ ನೀಡಬೇಕು.

ಬಜೆಟ್‌ ಅಧಿವೇಶನದಲ್ಲಿ ಕಾಲೇಜು ಆರಂಭಕ್ಕೆ ಮಾತನಾಡಿದ್ದೀರಿ ಎಂಬುದನ್ನು ವಿಡಿಯೋ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ತಾವು ಬಸವೇಶ್ವರ ಸಂಘವನ್ನು ಎಷ್ಟು ಪ್ರೀತಿಯಿಂದ ಬೆಳೆಸುತ್ತಿದ್ದೀರಿ, ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಮಂಜೂರಾಗಿರುವ ಸರಕಾರಿ ವೈದ್ಯಕೀಯ ಕಾಲೇಜನ್ನು ಜಿಲ್ಲೆಗೆ ತಂದು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕು. ಜಿಲ್ಲೆಯ ಶ್ರಮಿಕರ ಹಾಗೂ ಬಡವರ, ದೀನ ದಲಿತರ, ಪರವಾಗಿ ಧ್ವನಿ ಎತ್ತಿ ಕಾಲೇಜನ್ನು ಆರಂಭಕ್ಕೆ ಮುಂದಾಗಬೇಕು ಎಂದು ವಿನಂತಿಸಿದ್ದೇವೆ ವಿನಃ ನಿಮ್ಮನ್ನು ತೇಜೋವಧೆ ಮಾಡುವ ಉದ್ದೇಶ ನಮ್ಮದಲ್ಲ ಎಂದು ಹೇಳಿದರು.

ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ಜಿಲ್ಲೆಗೆ ಮಂಜೂರಾದ ಸರಕಾರಿ ವೈದ್ಯಕೀಯ ಕಾಲೇಜನ್ನು ಮಂಜೂರಿ ಮಾಡಿಸಲು ಪûಾತೀತ ಹೋರಾಟ ಅಗತ್ಯ. ಅದಕ್ಕೆ ನಮ್ಮ ಬೆಂಬಲವಿದೆ. ಕಾರಣ ಜಿಲ್ಲೆಯ ಪ್ರಗತಿಪರ ಚಿಂತಕರು, ಬುದ್ದಿ ಜೀವಿಗಳು, ವಿವಿಧ ಸಂಘಟನೆಯ ಮುಖಂಡರು ಬೃಹತ್‌ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಗೆ ಮಂಜೂರಾದ ಸರಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಸಹಕರಿಸಬೇಕು ಎಂದರು.

ಶಿವರಾಮೇಗೌಡ ಬಣದ ಕರವೇ ಜಿಲ್ಲಾಧ್ಯಕ್ಷ ಬಸನಗೌಡ ಪಾಟೀಲ, ಜಯ ಕರ್ನಾಟಕ ಸಂಘದ ಜಿಲ್ಲಾಧ್ಯಕ್ಷ ಆರ್‌.ಡಿ.ಬಾಬು ಮಾತನಾಡಿದರು. ಪೂರ್ವಭಾವಿ ಸಭೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಅಶೋಕ ಮುತ್ತಿನಮಠ, ನಗರಸಭಾ ಸದಸ್ಯರಾದ ಚೆನ್ನವೀರ ಅಂಗಡಿ, ಲಕ್ಷ್ಮೀ ಚವ್ಹಾಣ, ಕಾಂಗ್ರೆಸ್‌ ಮುಖಂಡರಾದ ಹಣಮಂತ ರಾಕುಂಪಿ, ಗೋವಿಂದ ಬಳ್ಳಾರಿ, ಎಸ್‌.ಎನ್‌. ರಾಂಪುರ, ನಿಂಗಪ್ಪ ಕೋಟಿ, ಮಹೇಶ ಜಾಲವಾದಿ, ಮಂಜುನಾಥ ಮುಚಖಂಡಿ, ಮಂಜುನಾಥ ಪುರತಗೇರಿ, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಅಮರೇಶ ಕೊಳ್ಳಿ, ಮಹಿಳಾ ಮುಖಂಡರಾದ ಭಾಗ್ಯಶ್ರೀ ಬೆಟಗೇರಿ, ಕರವೇ ಪದಾಧಿಕಾರಿಗಳಾದ ಬಸವರಾಜ ಧರ್ಮಟ್ಟಿ, ಬಸವರಾಜ ಅಂಬಿಗೇರ, ವಿನೂತ ಮೇಲಿನಮನಿ, ಮಲ್ಲು ಕಟ್ಟಿಮನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.