ಗೋಮಾಳದಲ್ಲಿ ಕ್ರಿಕೆಟ್‌ ಮೈದಾನಕ್ಕೆ ವಿರೋಧ

ಶ್ರೀಮಂತರ ಕ್ರೀಡೆಗೆ ಪ್ರಕೃತಿ ನಡುವಿನ ನೈಸರ್ಗಿಕ ಸಾವರ ಪೈ ಗುಡ್ಡದ ನಿರ್ನಾಮ ಬೇಡ: ಲಿಂಗರಾಜು

Team Udayavani, Apr 4, 2021, 8:09 PM IST

ghfr

ಕಾರವಾರ: ಸಾವರ ಪೈ ಗೋಮಾಳದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ಸ್ಥಾಪನೆಯನ್ನು ಕಾರವಾರ ತಾಲೂಕಿನ ಚಿತ್ತಾಕುಲಾ ಗ್ರಾಮದ ಸಾಮಾಜಿಕ ಕಾರ್ಯಕರ್ತ ಲಿಂಗರಾಜು ತೀವ್ರವಾಗಿ ವಿರೋಧಿಸಿದರು.

ಇಲ್ಲಿನ ಪತ್ರಿಕಾಭನದಲ್ಲಿ ಸಾವರ ಪೈ ನಿವಾಸಿಗಳ ಜೊತೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕ್ರಿಕೆಟ್‌ ಸ್ಟೇಡಿಯಂ ಚಿತ್ತಾಕುಲಾ ಗ್ರಾಮದ ಸಾವರ ಪೈ ಗೋಮಾಳ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಬೇಡ ಎಂದರು.

ಗುಡ್ಡ ಕಡಿದು, ಸಮತಟ್ಟು ಮಾಡಿ, ಕ್ರೀಡಾಂಗಣ ಮಾಡಲು ಹೋದರೆ ಭೂ ಕುಸಿತದ ಭೀತಿ ಸಹ ಇದೆ. ಈಗಾಗಲೇ ಹೆದ್ದಾರಿ ಸೇತುವೆ ಸಂಬಂಧ ಸದಾಶಿವಗಡದ ಒಂದು ಬದಿ ಗುಡ್ಡ ತೆಗೆಯಲಾಗಿದೆ. ಮತ್ತೆ ಗುಡ್ಡ ಸ್ಫೋಟಿಸಿ, ಅದರ ಸುತ್ತಲಿನ ಭೂಮಿ ಸಡಿಲ ಮಾಡುವುದು ಬೇಡ. ಪಕ್ಕದಲ್ಲಿ ನದಿ ಇದೆ. ನದಿ ದಿಕ್ಕು ಸಹ ಬದಲಾಗಬಹುದು. ಸದಾಶಿವಗಡ ಅಪಾರ್ಟಮೆಂಟ್‌ ಗಳಿಗೆ ಧಕ್ಕೆ ಆಗಬಹುದು. ಗೋಮಾಳ ಜಾಗ, ದನಗಳಿಗೆ ಮೀಸಲಿರಲಿ ಎಂದರು.

ಕಾರವಾರ ತಾಲೂಕಿನ ಬೇರೆ ಎಲ್ಲಾದರೂ ಕ್ರೀಡಾಂಗಣ ನಿರ್ಮಿಸಲಿ, ಬೇಕಾದರೆ ಕಾಳಿ ನದಿ ದಡದಲ್ಲಿ, ಖಾಸಗಿ ಜಾಗದಲ್ಲಿ ಭೂಮಿ ಖರೀದಿಸಿ ಸರ್ಕಾರ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲಿ ಎಂದು ಲಿಂಗರಾಜು ಪ್ರತಿಪಾದಿಸಿದರು. ಅದಕ್ಕೆ ಸಹಕಾರ ನೀಡುತ್ತೇವೆ. ಆದರೆ ಜನವಸತಿ ಸುತ್ತಮುತ್ತ ಇರುವ ಗೋಮಾಳವನ್ನು ಬಳಸಬಾರದು ಎಂದರು.

ಚಿತ್ತಾಕುಲಾ ಸಾವರಪೊಯಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಮಾಡುವ ಜಾಗ ಗೋಮಾಳ ಜಾಗವಾಗಿದ್ದು, ಅಲ್ಲಿ ನಮ್ಮ ದನಕರುಗಳನ್ನು ಹುಲ್ಲು ಮೇಯಿಸುವ ಸಲುವಾಗಿ ಇಟ್ಟ ಜಾಗವಾಗಿರುತ್ತದೆ. ಇಲ್ಲಿ ನಮಗೆ ಅಂತಾರಾಷ್ಟಿÅàಯ ಕ್ರಿಕೆಟ್‌ ಸ್ಟೇಡಿಯಂ ಬದಲಾಗಿ, ಒಂದು ಗೋ ಶಾಲೆ ನಿರ್ಮಿಸಿ ಕೊಡಬೇಕೆಂದು ಸರ್ಕಾರವನ್ನು ವಿನಂತಿಸಿದರು.

ಸದಾಶಿವಗಡ ಕೋಟೆ ಐತಿಹಾಸಿಕವಾಗಿ ಪ್ರಸಿದ್ಧ ವಾಗಿದೆ. ಇಲ್ಲಿ ನೈಸರ್ಗಿಕ ಸೌಂದರ್ಯ ಕೂಡಾ ಇದ್ದು, ಇಲ್ಲಿ ಗುಡ್ಡ ಅಗೆದು, ಸ್ಟೇಡಿಯಂ ನಿರ್ಮಿಸಿದರೆ ಪ್ರಕೃತಿ ಸೌಂದರ್ಯ ಹಾಳಾಗುತ್ತದೆ. ಶ್ರೀಮಂತರ ಒಡ್ಡೋಲಗ ಮಾಡಲು ಇಲ್ಲಿ ಅವಕಾಶವಿಲ್ಲ. ಬಂಡವಾಳ ಶಾಹಿಗಳ ಕಣ್ಣು ಸಾವರ ಪೈ ಜಾಗದ ಮೇಲೆ ಬಿದ್ದಿದ್ದು, ಇದಕ್ಕೆ ಗ್ರಾಮದ ಜನರು ಅವಸಕಾಶ ನೀಡುವುದಿಲ್ಲ ಎಂದರು.

ಸಾವರ ಪೈ ಜಾಗದ ಸುತ್ತಲೂ ಸುಮಾರು 300 ಮನೆಗಳಿದ್ದು, ಕ್ರಿಕೆಟ್‌ ಸ್ಟೇಡಿಯಂನಿಂದ ಅಲ್ಲಿ ವಾಸಿಸುವ ಕುಟುಂಬದವರು ನಿರಾಶ್ರಿತರಾಗುತ್ತಾರೆ ಎಂದು ಲಿಂಗರಾಜು ಪ್ರತಿಪಾದಿಸಿದರು. ಚಿತ್ತಾಕುಲಾ ಗ್ರಾಮದ ಸಾವರ ಪೈಯಲ್ಲಿ ಅಂತಾರಾಷ್ಟಿÅàಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಕೈಬಿಡಬೇಕೆಂದು, ಹಾಲಿ ಸರ್ಕಾರವನ್ನು ಹಾಗೂ ಹಾಲಿ ಶಾಸಕರನ್ನು ವಿನಂತಿಸಿಕೊಂಡರು. ಪತ್ರಿಕಾಗೋಷ್ಠಿಯಲ್ಲಿ ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದ ಸುಮಾರು 30 ಜನರು ಹಾಜರಿದ್ದರು.

ಟಾಪ್ ನ್ಯೂಸ್

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1-wwwewqwq

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.