ಕಾಂಗ್ರೆಸ್ ಚಿಲ್ಲರೆ ರಾಜಕಾರಣದ ಬಗ್ಗೆ ಬಿಜೆಪಿ ಬಳಿ ಸಾಕ್ಷಿ ಇದೆಯಾ : ಸಿದ್ದರಾಮಯ್ಯ
Team Udayavani, Apr 5, 2021, 2:04 PM IST
ಕೊಪ್ಪಳ : ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ಕೊಪ್ಪಳ ಜಿಲ್ಲೆ ತಾವರಗೇರಾ ಪಟ್ಟಣದಲ್ಲಿ ಮಾತನಾಡಿ, ಮಸ್ಕಿ ಉಪಚುನಾವಣೆ ಪ್ರಚಾರಕ್ಕಾಗಿ ಹೋಗುತ್ತಿದ್ದೇನೆ. ಇಂದು 10- 15 ಕಡೆ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದೇನೆ. ಬೆಳಗಾವಿ ಲೋಕಸಭೆ ಮತ್ತು 2 ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು.
ಕಾಂಗ್ರೆಸ್ ಚಿಲ್ಲರೇ ರಾಜಕಾರಣ ಮಾಡುತ್ತಿದೆ ಎಂಬ ಸಚಿವ ಜಗದ್ದೀಶ ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯಿಸಿ, ಚಿಲ್ಲರೇ ರಾಜಕಾರಣ ಯಾರು ಮಾಡ್ತಾ ಇದ್ದಾರೆ. ಬಿಜೆಪಿಯವರ ಬಳಿ ಈ ಬಗ್ಗೆ ಸಾಕ್ಷಿ ಇದೆಯಾ ? ಕಾಂಗ್ರೆಸ್ ಷಡ್ಯಂತ್ರ ಮಾಡಿದೆ ಎಂಬುದಕ್ಕೆ ಈ ಬಗ್ಗೆ ಅವರ ಬಳಿ ಸಾಕ್ಷಿ ಇದೆಯಂತಾ ? ಬಿಜೆಪಿಯವರು ತಮ್ಮ ಮೈ ಮೇಲೆ ಬಂದಾಗ ಸುಳ್ಳು ಹೇಳುತ್ತಾರೆ ಎಂದರು.
ಶಾಸಕ ರಮೇಶ ಜಾರಕಿಹೊಳಿ ಕೋವಿಡ್ ನೆಪದಿಂದ ತನಿಖೆಗೆ ಗೈರು ವಿಚಾರ, ಈ ಬಗ್ಗೆ ನಾನು ಏನೂ ಮಾತನಾಡೊಲ್ಲ ಎಂದ ಅವರು, ಸಿಡಿ ಲೇಡಿ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಸುಧಾಕರ ಹೆಸರು ಕೇಳಿ ಬಂದಿದೆ. ನನಗೆ ಸಂಬಂಧ ಇಲ್ಲ ಅಂತಾ ಹೇಳಿದ್ದಾರೆ. ಸಿಡಿ ಪ್ರಕರಣದಲ್ಲಿ ಯಾರೇ ಇದ್ದರೂ ಸಮಗ್ರ ತನಿಖೆಯಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ