ರಾಜಕೀಯ ಸ್ವಾರ್ಥಕ್ಕಾಗಿ ಮೂಕ ಪ್ರಾಣಿಗೆ ಶಿಕ್ಷೆ

ಎರಡು ದಿನದಿಂದ ಕುಣಿಗಲ್‌ ಪೊಲೀಸ್‌ ಠಾಣೆ ಗೋಡೆ ಪಕ್ಕದಲ್ಲಿ ಬಂಧಿಯಾದ ಬಸವಣ್ಣ

Team Udayavani, Apr 5, 2021, 4:17 PM IST

ರಾಜಕೀಯ ಸ್ವಾರ್ಥಕ್ಕಾಗಿ ಮೂಕ ಪ್ರಾಣಿಗೆ ಶಿಕ್ಷೆ

ಕುಣಿಗಲ್‌: ರಾಜಕೀಯ ಸ್ವಾರ್ಥಕ್ಕಾಗಿ ಮೂಕ ಪ್ರಾಣಿಯಾದ ಎತ್ತಿಗೆ ತಿನ್ನಲು ಆಹಾರ, ಕುಡಿಯಲು ನೀರಿಲ್ಲದೆ ಉರಿ ಬಿಸಿಲಿನಲ್ಲಿ ಉಪವಾಸದ ಶಿಕ್ಷೆ ಅನುಭವಿಸಿದ ಅಮಾನವೀಯ ಘಟನೆ ಪಟ್ಟಣದಲ್ಲಿ ನಡೆದಿದೆ.

ಯಾವ ತಪ್ಪೂ ಮಾಡದ ಮೂಕ ಪ್ರಾಣಿ ಎತ್ತಿಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ಮುಖಂಡರು ರಾಜಕೀಯ ಲಾಭಕ್ಕಾಗಿ ಪೊಲೀಸ್‌ ಠಾಣಾ ಮೆಟ್ಟಿಲು ಏರಿ ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಇತಿಹಾಸ ಪ್ರಸಿದ್ಧ ಬೆಟ್ಟದರಂಗನಾಥ ಸ್ವಾಮಿ ದೇವಾಲಯಕ್ಕೆ ಸೇರಿದ ಬಸವಣ್ಣ ಕಳೆದೆರಡು ದಿನಗಳಿಂದ ಕುಣಿಗಲ್‌ ಪಟ್ಟಣದ ಪೊಲೀಸ್‌ ಠಾಣೆಯ ಗೋಡೆ ಪಕ್ಕದಲ್ಲಿ ಬಂಧಿಯಾಗಿದ್ದನ್ನುಪೊಲೀಸರು ಭಾನುವಾರ ಮಧ್ಯಾಹ್ನ ತಾಲೂಕಿನ ಬಿದನಗೆರೆ ಬಸವೇಶ್ವರ ಮಠಕ್ಕೆ ಬಿಟ್ಟಿದ್ದಾರೆ.

ಮಡಿಕೆಹಳ್ಳಿ ತಾಪಂ ಸದಸ್ಯ ಗಂಗರಂಗಯ್ಯ ಅಲಿಯಾಸ್‌ ರಾಜು ಹಾಗೂ ಕುಮಾರ, ಲೋಕೇಶ್‌,ರೂಪೇಶ್‌, ಬೋರಯ್ಯ ಎಂಬುವರು ಬಸವಣ್ಣನನ್ನು ಮಡಿಕೆಹಳ್ಳಿ ಗ್ರಾಮದ ರೀಯಾಜ್‌ ಎಂಬ ವ್ಯಕ್ತಿಗೆ ಕದ್ದು ಮಾರಾಟ ಮಾಡಿ, ಹತ್ಯೆಗೆ ಯತ್ನಿಸಿದರು. ಇದನ್ನು ಪ್ರಶ್ನೆ ಮಾಡಿದಕ್ಕೆ ಆರೋಪಿಗಳು ಹಾಗೂ ಕುಮಾರನ ಪತ್ನಿಸುಶೀಲಮ್ಮ, ಲೋಕೇಶ್‌ ಪತ್ನಿ ಗಂಗಮ್ಮ, ಅಕ್ರಮ ಕೂಟಕಟ್ಟಿಕೊಂಡು ನನ್ನನು ಹಾಗೂ ನನ್ನ ಹೆಂಡತಿ, ಮಗಳನ್ನು ನಿಂದಿಸಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದುಕೊತ್ತಗೆರೆ ಹೋಬಳಿ ತಿರುಮಲಯ್ಯನಪಾಳ್ಯ ಗ್ರಾಮದ ಹುಚ್ಚೀರಯ್ಯ ಅಲಿಯಾಸ್‌ ರಾಜಣ್ಣ ಕುಣಿಗಲ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಪ್ರತಿ ದೂರು: ಪೊಲೀಸ್‌ ಠಾಣೆಗೆ ಪ್ರತಿ ದೂರುನೀಡಿರುವ ಗಂಗಮ್ಮ ಹಾಗೂ ಲೋಕೇಶ್‌ ಬಸವಣ್ಣನನ್ನು ಕದ್ದು ಮಾರಾಟ ಮಾಡಿಲ್ಲ. ಬಸವ ಗ್ರಾಮದಲ್ಲಿನಹಸುಗಳಿಗೆ ಬಹಳ ದಿನಗಳಿಂದ ತೊಂದರೆ ನೀಡುತ್ತಿತ್ತು.ಹಾಗಾಗಿ ಅದನ್ನು ಕುಣಿಗಲ್‌ನ ಸಂತೇ ಮೈದಾನದಲ್ಲಿಬಿಡಲಾಗಿತ್ತು. ವಿನಃ ಮಾರಾಟ ಮಾಡಿಲ್ಲಹಾಗೂ ಹುಚ್ಚವೀರಯ್ಯ ಹಾಗೂ ಇತರರು ನನ್ನಮಾನಭಂಗಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ ಎಂದು ಪ್ರತಿ ದೂರಿನಲ್ಲಿ ತಿಳಿಸಿದ್ದಾರೆ.

ತಾಲೂಕಿನ ಮೆಣಸೀನಹಳ್ಳಿ ಸೇರಿದಂತೆ ವಿವಿಧ ಗ್ರಾಮಸ್ಥರು ಬೆಟ್ಟದರಂಗನಾಥಸ್ವಾಮಿ ದೇವಾಲಯಕ್ಕೆಸೇರಿದ ಬಸವಣ್ಣನನ್ನು ಪೂಜಿಸುತ್ತಿದ್ದರು.ಆದರೆ, ಕೆಲ ವ್ಯಕ್ತಿಗಳು ಬಸವಣ್ಣನನ್ನು ಕದ್ದುಮಾರಾಟ ಮಾಡಿ ಹತ್ಯಗೆ ಯತ್ನಿಸಿದ್ದಾರೆ ಎಂದು ದೂರು ಕೇಳಿ ಬಂದಿದೆ. ಹಾಗಾಗಿ ಆವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಆರೋಪಿಯಾರೇ ಆಗಿರಲಿ ಅಂಥವರ ವಿರುದ್ಧ ಕಠಿಣ ಕ್ರಮ ಪೊಲೀಸರು ಕೈಗೊಳ್ಳಬೇಕು. ●ದಿಲೀಪ್‌ಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ

ಹಿಂದುಗಳ ಆರಾಧ್ಯ ದೈವ ಬಸವಣ್ಣನನ್ನು ಕದ್ದು ಮಾರಾಟ ಮಾಡುವ ದುರ್ಗತಿ ನನ್ನಗೆ ಬಂದಿಲ್ಲ. ನನ್ನ ರಾಜಕೀಯ ಅಭಿವೃದ್ಧಿಯನ್ನು ಸಹಿಸಲಾರದ ಬಿಜೆಪಿಯ ಕೆಲ ವ್ಯಕ್ತಿಗಳು ರಾಜಕೀಯದುರುದ್ದೇಶದಿಂದ ನನ್ನ ವಿರುದ್ಧ ಠಾಣೆಗೆ ದೂರು ಕೊಡಿಸಿ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿದ್ದಾರೆ. ಕುಣಿಗಲ್‌ನಲ್ಲಿ ಬಿಡಲಾಗಿದ್ದ ಬಸವಣ್ಣನನ್ನು ನಮ್ಮವರು ಪೊಲೀಸರ ವಶಕ್ಕೆ ನೀಡಿದ್ದಾರೆ.  ●ಗಂಗರಂಗಯ್ಯ, ತಾಪಂ ಸದಸ್ಯ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.