ಯಾದಗಿರಿಯಲ್ಲಿ ಗುಡುಗು ಸಹಿತ ಭಾರೀ ಮಳೆ
Team Udayavani, Apr 5, 2021, 5:42 PM IST
ಯಾದಗಿರಿ : ಜಿಲ್ಲೆಯಲ್ಲಿ ಏಕಾಏಕಿ (ಸಂಜೆ 4:15ರ ಸುಮಾರಿಗೆ) ಮೋಡ ಕವಿದ ವಾತಾವರಣ ನಿರ್ಮಾಣಗೊಂಡು ಸುಮಾರು ಅರ್ಧಗಂಟೆ ಕಾಲ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ.
ಜಿಲ್ಲಾ ಕೇಂದ್ರದ ಸುತ್ತಮುತ್ತ ಸುರಿದಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗಾಳಿ ಮಳೆಯ ರಭಸಕ್ಕೆ ನಗರಸಭೆಯ ಸಭಾಂಗಣದ ಪತ್ರಾಸ್ ಗಳ ಮೇಲ್ಚಾಚಣೆಯೇ ಹಾರಿಹೋಗಿದ್ದು ಸಭಾಂಗಣದಲ್ಲಿದ್ದ ದಾಖಲೆಗಳು ನೀರಿನಲ್ಲಿ ನೆನೆದು ಹೋಗಿವೆ. ಅಲ್ಲದೆ ಕುರ್ಚಿ ಟೇಬಲ್ ಗಳಿಗೆ ಹಾನಿಯಾಗಿದೆ.
ಚಿತ್ತಾಪುರ ರಸ್ತೆಯ ಯೂನಿಯನ್ ಬ್ಯಾಂಕ್ ಹತ್ತಿರ ಬೃಹತ್ ಗಾತ್ರದ ನಾಮಫಲಕ ಹಾರಿ ದ್ವಿಚಕ್ರ ವಾಹನಗಳ ಮೇಲೆ ಬಿದ್ದಿರುವುದರಿಂದ ಕೆಲ ವಾಹನಗಳು ಜಖಂಗೊಂಡಿವೆ.
ಜಿಲ್ಲಾ ಕೇಂದ್ರದ ಸುತ್ತಮುತ್ತ ಸುರಿದಿರುವ ಮಳೆಯಿಂದ ಸಣ್ಣ ಪುಟ್ಟ ಹಾನಿಯಾಗಿದ್ದು, ಶಹಾಪುರದಲ್ಲಿ ಅಲ್ಪ ಮಳೆ ಸುರಿದಿದ್ದು, ಖಾನಾಪುರದಿಂದ ಯಾದಗಿರಿ ಮಾರ್ಗದ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಯಲ್ಲಿ ಮುರಿದು ಬಿದ್ದಿದ್ದು ಸಂಚಾರಕ್ಕೆ ಅಡೆತಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ