ಮಸ್ಕಿ ಕಣದಲ್ಲಿ ವಿಜಯೇಂದ್ರ ಟೀಂ ಪರ್ಯಟನೆ

| ಪ್ರತಿ ಪಂಚಾಯಿತಿಗೆ ಒಂದು ತಂಡ ನಿಯೋಜನೆ | ಪ್ರತ್ಯೇಕವಾಗಿಯೇ ಕಾರ್ಯಪಡೆ ಸಂಚಾರ

Team Udayavani, Apr 5, 2021, 7:37 PM IST

hjgut

ಸಿಂಧನೂರು: ಪ್ರಮುಖ ನಾಯಕರು ಬಿಜೆಪಿ ಪರ ಪ್ರಚಾರ ನಡೆಸಿರುವ ಬೆನ್ನಲ್ಲೇ ಕಳೆದೊಂದು ವಾರದಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಟೀಂ ಪ್ರತ್ಯೇಕವಾಗಿ ಕ್ಷೇತ್ರ ಪರ್ಯಟನೆಗಿಳಿದಿವೆ.

ನಗರದ ವಿನಯ ರೆಸಿಡೆನ್ಸಿ ಹಾಗೂ ಇತರೆ ಕಡೆಗಳಲ್ಲಿ ಬೀಡು ಬಿಟ್ಟಿರುವ ಯುವಕರ ತಂಡ ಬೆಳಗಾಗುತ್ತಲೇ ಕ್ಷೇತ್ರದ ಹಳ್ಳಿಗಳತ್ತ ಪ್ರಯಾಣ ಬೆಳೆಸುತ್ತಿದೆ. ಆರೇಳು ಯುವಕರಿರುವ ಪ್ರತ್ಯೇಕ ಗುಂಪು ಸಭೆ ನಡೆಸಿ, ಬೇಕು-ಬೇಡಗಳನ್ನು ಕೇಳಿ ಪಟ್ಟಿ ಮಾಡಿಕೊಳ್ಳುವ ಕೆಲಸ ನಡೆಸಿದೆ. ಅಲ್ಲಿನ ಸ್ಥಳೀಯ ಮುಖಂಡರು, ಕಾರ್ಯಕರ್ತರನ್ನು ಒಗ್ಗೂಡಿಸಿ ಬಿಜೆಪಿ ಪರ ಪ್ರಚಾರ ಕೆಲಸ ಮಾಡುವಂತೆ ಮನವಿ ಮಾಡುವುದರ ಜತೆಗೆ ಅವರ ಅಸಮಾಧಾನ, ಬೇಡಿಕೆಗಳ ಪಟ್ಟಿ ಮಾಡಿಕೊಂಡು ವಿಜಯೇಂದ್ರ ಅವರಿಗೆ ತಲುಪಿಸಲಾಗುತ್ತಿದೆ.

ಹೇಗಿದೆ ಕಾರ್ಯಾಚರಣೆ?:

ಮಸ್ಕಿ ವಿಧಾನಸಭೆ ಕ್ಷೇತ್ರದ ಪಂಚಾಯಿತಿವಾರು ವಿಜಯೇಂದ್ರ ಅವರ ತಂಡ ನಿಯೋಜಿಸಲಾಗಿದೆ. ಪ್ರತಿನಿತ್ಯ ಹಳ್ಳಿಗಳಲ್ಲಿ ಸಂಚರಿಸುವ ಈ ತಂಡಗಳು ಸಂಜೆಯೊತ್ತಿಗೆ ತಮ್ಮ ವರದಿ ಸಿದ್ಧಪಡಿಸಿ, ನಾಯಕರಿಗೆ ಒಪ್ಪಿಸುವ ಕೆಲಸ ಮಾಡುತ್ತಿವೆ. ತಾಲೂಕಿನ 4ನೇ ಮೈಲ್‌ಕ್ಯಾಂಪ್‌, ವಿರೂಪಾಪುರ, ಏಳುಮೈಲ್‌ ಕ್ಯಾಂಪ್‌ ಸೇರಿದಂತೆ ಇತರೆ ಕಡೆಗಳಲ್ಲಿ ಈ ತಂಡ ಸಭೆ ನಡೆಸಿದೆ. ಹಾಸನ, ಶಿವಮೊಗ್ಗ, ಶಿಕಾರಿಪುರ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಬಂದಿರುವ ಯುವಕರು ಈ ತಂಡದಲ್ಲಿದ್ದಾರೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಬೆಂಬಲಿಗರೇ ಇದರಲ್ಲಿರುವುದು ಗಮನಾರ್ಹ.

ಗೌಪ್ಯ ಕಾರ್ಯತಂತ್ರ:

ಈಗಾಗಲೇ ಎರಡು ಕಡೆಗಳಲ್ಲಿ ಉಪ ಚುನಾವಣೆ ಉಸ್ತುವಾರಿ ನಿರ್ವಹಿಸಿರುವ ವಿಜಯೇಂದ್ರ ಅವರ ರಾಜಕೀಯ ತಂತ್ರದ ಭಾಗವಾಗಿ ಈ ತಂಡಗಳು ಕೆಲಸ ಮಾಡುತ್ತಿವೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಮಾಧ್ಯಮಗಳಿಗೆ ಹಾಗೂ ಸ್ಥಳೀಯ ಮುಖಂಡರೊಂದಿಗೆ ಅಷ್ಟಾಗಿ ಬೆರೆಯದ ಇವರು, ತಾವೇ ನೇರವಾಗಿ ವಾಹನಗಳಲ್ಲಿ ತೆರಳಿ ಮಾತುಕತೆ ನಡೆಸುತ್ತಿರುವುದು ವಿಶೇಷ. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸುವುದರ ಜತೆಗೆ ಅಲ್ಲಿನ ಮುಖಂಡರ ಮೊಬೈಲ್‌ ನಂಬರ್‌ ಪಡೆಯುತ್ತಾರೆ.

ಗ್ರಾಪಂವಾರು ತಮ್ಮದೇ ತಂಡ ಸಂಗ್ರಹಿಸಿದ ವರದಿಯನ್ನು ಆಧರಿಸಿ ನೇರವಾಗಿ ವಿಜಯೇಂದ್ರ ಅವರೇ ಕೆಲವು ಮುಖಂಡರನ್ನು ಸಂಪರ್ಕಿಸುತ್ತಿದ್ದಾರೆ. ಸಣ್ಣಪುಟ್ಟ ಅಸಮಾಧಾನ, ಬೇಡಿಕೆಗಳಿದ್ದರೆ ಅವುಗಳನ್ನು ಈಡೇರಿಸುವುದರ ಜತೆಗೆ ತಾವಿದ್ದಲ್ಲಿಗೆ ಕರೆಯಿಸಿಕೊಂಡು ಅವರ ಮನವೊಲಿಸುವ ಕೆಲಸ ಮಾಡುತ್ತಾರೆಂದು ಅವರ ಆಪ್ತರು ಹೇಳುತ್ತಾರೆ. ಮಾಧ್ಯಮ ಸಂಪರ್ಕದಿಂದ ದೂರವೇ ಉಳಿದಿರುವ ಈ ಟೀಂಗಳು ತಮ್ಮದೇ ರೀತಿಯಲ್ಲಿ ಕಾರ್ಯತಂತ್ರ ಹೆಣೆಯುತ್ತಿವೆ.

ಯಮನಪ್ಪ ಪವಾರ 

ಟಾಪ್ ನ್ಯೂಸ್

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-wewqewq

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.