10 ತಿಂಗಳಲ್ಲಿ 30 ಕೋಟಿ ಆದಾಯ ಸಂಗ್ರಹ


Team Udayavani, Apr 5, 2021, 8:11 PM IST

fdgfdgfdgf

ಬಳ್ಳಾರಿ: ಇಲ್ಲಿನ ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷನಾಗಿ ಕಳೆದ 10 ತಿಂಗಳಲ್ಲಿ ಬಿಡಿ ನಿವೇಶನಗಳ ಮಾರಾಟ, ಖಾಸಗಿ ವಿನ್ಯಾಸಗಳಿಗೆ ಅನುಮೋದನೆ, ಸಿಎ ಸೈಟ್‌ಗಳ ಮಂಜೂರಿನಿಂದ 30 ಕೋಟಿ ರೂ ಆದಾಯ ಪಡೆಯಲಾಗಿದೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್‌ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿ ಕಾರ ಅಸ್ಥಿತ್ವಕ್ಕೆ ಬಂದ 1988ರಿಂದ ಈವರೆಗೆ ಬುಡಾ ಅಧ್ಯಕ್ಷರಾದ ಯಾರಿಂದಲೂ 10 ತಿಂಗಳಲ್ಲಿ ಇಷ್ಟೊಂದು ಮೊತ್ತದ ಆದಾಯ ಬಂದಿರಲಿಲ್ಲ ಎಂದವರು ಸ್ಪಷ್ಟಪಡಿಸಿದರು. ಮಹಾ ಯೋಜನೆ 2021ಕ್ಕೆ ಮುಕ್ತಾಯವಾಗಿದ್ದು ಹೊಸ ಯೋಜನೆಯಲ್ಲಿ ಬಳ್ಳಾರಿ ತಾಲೂಕಿನ ಇನ್ನು 12 ಹಳ್ಳಿಗಳನ್ನು ಸೇರಿಸಲಾಗುವುದು.

ನಗರದ 7 ಕಡೆ ಬಸ್‌ ಸೆಲ್ಟರ್‌ಗಳನ್ನು ನಿರ್ಮಿಸಲಾಗಿದೆ. ಒಟ್ಟಾರೆ 32 ಕಡೆ ಇಂಥ ಬಸ್‌ ಸೆಲ್ಟರ್‌ ಖಾಸಗಿ ಕಂಪನಿಗಳ ಸಿಎನ್‌ ಆರ್‌ ಫಂಡ್‌ ನಿಂದ ನಿರ್ಮಿಸಲಾಗಿದೆ ಎಂದರು. ನಗರದ ಜೋಳದರಾಶಿ ರಂಗಮಂದಿರದಲ್ಲಿ ದೊಡ್ಡನಗೌಡರ, ಮುನಿಸಿಪಲ್‌ ಮೈದಾನದಲ್ಲಿ ಬಹದ್ದೂರು ಶೇಷಗಿರಿರಾವ್‌, ಕನ್ನಡ ಭವನದಲ್ಲಿ ಫೆ„ಲ್ವಾನ್‌ ರಂಜಾನ್‌ ಸಾಬ್‌, ಉದ್ಯಾನವನದಲ್ಲಿ ಹರಗಿನಡೋಣಿ ಸಣ್ಣ ಬಸನಗೌಡ, ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಸಾವಿತ್ರಿ ಬಾಯಿಪುಲೆ, ವಿವೇಕಾನಂದ ಪುತ್ಥಳಿಗಳನ್ನು ಪ್ರತಿಷ್ಠಾಪಿಸಲಾಗುವುದು.

ಐತಿಹಾಸಿಕ ಬಳ್ಳಾರಿ ಬೆಟ್ಟಕ್ಕೆ ಕೋಬಿಲ್‌ ಕಾರ್‌ (ರೋಪಿವೇ)- ಸಂಗನಕಲ್ಲು ಬೆಟ್ಟದ, ಮಿಂಚೇರಿ ಬೆಟ್ಟದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲಾಗಿದೆ. ನಗರದ 21 ಪಾರ್ಕ್‌ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮತ್ತು ಅವುಗಳಿಗೆ ಮಹನೀಯರ ಹೆಸರಿಡಲು ನಗರ ಪಾಲಿಕೆಗೆ ಶಿಫಾರಸ್ಸು ಮಾಡಲಾಗಿದೆ. ಬುಡಾ ಆವರಣದಲ್ಲಿನ ಇಂದಿರಾ ಕ್ಯಾಂಟೀನ್‌ ಸ್ಥಳಾಂತರ ಮಾಡಿ ಅಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು ಎಂದರು.

ನಗರದಲ್ಲಿ ಜನರಿಗೆ ಕಡಿಮೆ ದರದಲ್ಲಿ ನಿವೇಶನಗಳು ಲಭ್ಯವಾಗುವಂತೆ ಮಾಡಲು ಬಿ. ಗೋನಾಳು ಬೈಪಾಸ್‌ ರಸ್ತೆ ಬಳಿ 102 ಎಕರೆ ಪ್ರದೇಶದಲ್ಲಿ ಲೇಔಟ್‌ ಅಭಿವೃದ್ಧಿಪಡಿಸಲಾಗುತ್ತಿದೆ. ಸದ್ಯದಲ್ಲೇ ನಿವೇಶನಗಳ ರಚನೆಗೆ ಟೆಂಡರ್‌ ಕರೆಯಲಾಗುವುದು ಎಂದು ತಿಳಿಸಿದರು. ಟಿಬಿ ಸ್ಯಾನಿಟೋರಿಯಂನಿಂದ ಹೊಸಪೇಟೆ ರಸ್ತೆಯವರೆಗೆ ರಸ್ತೆ ಅಭಿವೃದ್ಧಿ, ರಾಜ್‌ಕುಮಾರ್‌ ಉದ್ಯಾನವನ್ನು 4 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ, ಡಿಎಂಎಫ್‌ ಅನುದಾನದಲ್ಲಿ 4.58 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕೈಗೊಳ್ಳಲಾಗಿದೆ. ನಗರದ ಮೋತಿ ಟಾಕೀಸ್‌ ಬಳಿಯ ರೈಲ್ವೇ ಬ್ರಿಡ್ಜ್ ಅಗಲೀಕರಣ ಹೀಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆಲ್ಲ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌, ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ, ಸಂಸದ ವೆ. ದೇವೇಂದ್ರಪ್ಪ, ನಗರಾಭಿವೃದ್ಧಿ ಸಚಿವ ಬೆ„ರತಿ ಬಸವರಾಜ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಹಕಾರವೇ ಕಾರಣ ಎಂದರು.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

ಎಸಿ ಗ್ಯಾಸ್‌ ಸ್ಫೋಟ; ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.