ಬಿಜೆಪಿ ಸೇರಲು ಸಜ್ಜಾದ ಲಖನ್‌


Team Udayavani, Apr 6, 2021, 4:52 PM IST

ಬಿಜೆಪಿ ಸೇರಲು ಸಜ್ಜಾದ ಲಖನ್‌

ಗೋಕಾಕ: ಬೆಳಗಾವಿ ಲೋಕಸಭೆ ಉಪಚುನಾವಣೆ ಸಮಯದಲ್ಲೇಪ್ರಮುಖ ರಾಜಕೀಯ ಬೆಳವಣಿಗೆನಡೆದಿದ್ದು ಕಾಂಗ್ರೆಸ್‌ ಮುಖಂಡ ಲಖನ್‌ ಜಾರಕಿಹೊಳಿ ಬಿಜೆಪಿ ಸೇರಲು ಸಜ್ಜಾಗಿದ್ದಾರೆ.

ಚುನಾವಣೆ ಉಸ್ತುವಾರಿವಹಿಸಿಕೊಂಡಿರುವ ಕೈಗಾರಿಕಾ ಸಚಿವಜಗದೀಶ ಶೆಟ್ಟರ, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಸ್ವತಃಗೋಕಾಕದಲ್ಲಿ ಲಖನ್‌ ಜಾರಕಿಹೊಳಿಮನೆಗೆ ಭೇಟಿ ನೀಡಿ ಮಾತುಕತೆನಡೆಸಿದ ಬೆನ್ನಲ್ಲೇ ಈ ಮಹತ್ವದಬೆಳವಣಿಗೆ ನಡೆದಿದ್ದು, ಲಖನ್‌ಕಾಂಗ್ರೆಸ್‌ ಪಕ್ಷಕ್ಕೆ ಆಘಾತ ನೀಡಿದ್ದಾರೆ.

ಬಿಜೆಪಿ ನಾಯಕರ ಜತೆ ಚರ್ಚೆನಡೆಸಿದ ನಂತರ ಮಾತನಾಡಿದ ಲಖನ್‌,ಕಾಂಗ್ರೆಸ್‌ ಪಕ್ಷದಲ್ಲಿ ಗುಂಪುಗಾರಿಕೆ ನಡೆಯುತ್ತಿದ್ದು, ಪಕ್ಷ ಇಂದು ಒಬ್ಬವ್ಯಕ್ತಿಯ ಕೈಗೊಂಬೆಯಾಗಿ ವರ್ತಿಸುತ್ತಿದೆ. ಮೇಲಾಗಿ ಇತ್ತಿಚಿನ ಬೆಳವಣಿಗೆಯಿಂದ ಮನಸ್ಸಿಗೆ ಘಾಸಿಯಾಗಿದ್ದು ಈ ಎಲ್ಲಕಾರಣಗಳಿಂದ ನಾನು ಈ ಬಾರಿ ಬಿಜೆಪಿಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದ್ದೇನೆ ಎಂದರು.

ಕಳೆದ ವಿಧಾನಸಭೆ ಉಪಚುನಾವಣೆಯಲ್ಲಿ ಜಾರಕಿಹೊಳಿಕುಟುಂಬವೆಲ್ಲ ಒಂದೇ ಎಂದುಹೇಳಿದ ಮಹಾನುಭಾವನ ಮಾತುಕೇಳಿ ನನಗೆ ಕೊನೆ ಕ್ಷಣದಲ್ಲಿ ಟಿಕೆಟ್‌ನೀಡಿ ಗೊಂದಲ ನಿರ್ಮಿಸಿದರು. ಈಗ ಕೂಡಾ ಸತೀಶ ಜಾರಕಿಹೊಳಿ ಅವರಿಗೆಯಾವ ಆಧಾರದ ಮೇಲೆ ಟಿಕೆಟ್‌ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಇದನ್ನೆಲ್ಲ ನೋಡಿದರೆ ಕಾಂಗ್ರೆಸ್‌ನಿಂದಯಾವುದೇ ಉಪಯೋಗವಿಲ್ಲ.ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ನಾಲ್ಕುಹೈಕಮಾಂಡ್‌ ನಿರ್ಮಾಣವಾಗಿವೆ.ಯಾರಲ್ಲೂ ಒಮ್ಮತವಿಲ್ಲ. ಹೀಗಾಗಿಕಾಂಗ್ರೆಸ್‌ ಪರವಾಗಿ ಪ್ರಚಾರಕ್ಕೆಹೋಗಲು ಮುಜುಗರವಾಗುತ್ತಿದೆ ಎಂದರು.

ಬಿಜೆಪಿಗೆ ಸೇರುವಂತೆ ಹಿರಿಯರು, ಪ್ರಮುಖ ನಾಯಕರು ಕೇಳಿಕೊಂಡಿದ್ದಾರೆ. ಈ ಸಂಬಂಧಸಹೋದರರಾದ ರಮೇಶ ಹಾಗೂಬಾಲಚಂದ್ರ ಜತೆ ಚರ್ಚಿಸಿ ತೀರ್ಮಾನಕೈಗೊಳ್ಳುತ್ತೇನೆ. ನಮ್ಮ ಕಾರ್ಯಕರ್ತರ ಅಭಿಪ್ರಾಯ ಕೂಡಾ ಇದೇ ಆಗಿದೆ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರು ಹಾಗೂ ಮುಖಂಡರ ರೊಂದಿಗೆ ಚರ್ಚಿಸಿ ನಮ್ಮ ಮುಂದಿನ ನಡೆಯನ್ನು ತಿಳಿಸಲಾಗುವುದು. ಲೋಕಸಭಾ ಉಪಚುನಾವಣೆ ಯಲ್ಲಿ ಪ್ರಚಾರದಲ್ಲಿರುವ ಬಿಜೆಪಿ ಮುಖಂಡರು ತಮ್ಮ ಜತೆ ಮಾತುಕತೆ ನಡೆಸಿದ್ದುಅವರ ಮನವಿ ಮೇರೆಗೆ ಸಹೋದರಿ ಮಂಗಲಾ ಅಂಗಡಿಯವರಿಗೆ ಬೆಂಬಲ ನೀಡುತ್ತಿದ್ದೇವೆ ಎಂದರು.

ಇದಕ್ಕೂ ಮುನ್ನ ಲಖನ್‌ ಜಾರಕಿಹೊಳಿ ಅವರ ನಿವಾಸಕ್ಕೆ ಕೈಗಾರಿಕೆಸಚಿವ ಜಗದೀಶ ಶೆಟ್ಟರ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ,ಆಹಾರ ಮತ್ತು ನಾಗರಿಕ ಪೂರೈಕೆಸಚಿವ ಉಮೇಶ ಕತ್ತಿ, ರಾಜ್ಯಸಭಾಸದಸ್ಯ ಈರಣ್ಣಾ ಕಡಾಡಿ, ಸಂಸದಅಣ್ಣಾಸಾಹೇಬ ಜೊಲ್ಲೆ, ಸಂಜಯಪಾಟೀಲ ಭೇಟಿ ನೀಡಿ ಮಾತುಕತೆನಡೆಸಿ ಪಕ್ಷಕ್ಕೆ ಬರುವಂತೆ ಆಹ್ವಾನನೀಡಿದರು. ಬಳಿಕ ಬಿಜೆಪಿ ಅಭ್ಯರ್ಥಿಮಂಗಲಾ ಅಂಗಡಿ, ಮಗಳು ಶೃದ್ಧಾಹಾಗೂ ಈರಣ್ಣ ಕಡಾಡಿ ಮತ್ತೂಂದುಸುತ್ತಿನ ಮಾತುಕತೆ ನಡೆಸಿ ಪಕ್ಷದ ಪ್ರಚಾರದ ಕುರಿತು ಚರ್ಚಿಸಿದರು.

ಬಿಜೆಪಿ ಬೆಂಬಲ ಲಖನ್‌ ವೈಯಕ್ತಿಕ ನಿಲುವು: ಸತೀಶ :

ಬೆಳಗಾವಿ: ಲಖನ್‌ ಜಾರಕಿಹೊಳಿ ಬಿಜೆಪಿಗೆ ಬೆಂಬಲ ನೀಡಿದರೆ ಅದು ಅವರ ವೈಯಕ್ತಿಕ ವಿಚಾರ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗೂ ಬಿಜೆಪಿ ನಾಯಕರು ಭೇಟಿ ಆಗುತ್ತಾರೆ. ಅದರಲ್ಲೇನು ವಿಶೇಷ. ಬೆಂಬಲ ನೀಡುವುದು ಬೇರೆ, ಭೇಟಿಯಾಗೋದು ಬೇರೆ. ರಾಜಕೀಯದಲ್ಲಿ ಒಬ್ಬರು ಹೋಗುತ್ತಾರೆ, ಇನ್ನೊಬ್ಬರು ಬರುತ್ತಾರೆ. ಇದೆಲ್ಲ ಸಹಜ. ಹೋದವರ ಜತೆಗೆಕೆಲವು ಮತ ಹೋಗುತ್ತವೆ. ಬಂದವರ ಜತೆಗೆ ಕೆಲವು ಮತಗಳು ಬರುತ್ತವೆ.ಪಕ್ಷದ ಮತಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ವಿಧಾನಸಭೆಚುನಾವಣೆಯಲ್ಲಿ ಕಾಂಗ್ರೆಸ್‌ ಮತ ಎಷ್ಟು ಅಂತ ತೋರಿಸಿದ್ದೇವೆ. ಮತಗಳ ಸಂಖ್ಯೆಯಲ್ಲಿ ಕಡಿಮೆ ಆಗಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.