ಬಡವರಿಗೆ ಸ್ವಂತ ಸೂರು ಕಲ್ಪಿಸಲು ಬದ್ಧ: ಈಶ್ವರಪ್ಪ

­ಕೇಂದ್ರ- ರಾಜ್ಯ ಸರ್ಕಾರ- ಬ್ಯಾಂಕ್‌ಗಳ ಸಹಕಾರದೊಂದಿಗೆ ಮನೆಗಳ ನಿರ್ಮಾಣ

Team Udayavani, Apr 6, 2021, 8:14 PM IST

fndeter

ಶಿವಮೊಗ್ಗ: ನಗರದಲ್ಲಿ ಬಡವರಿಗೆ ಒಂದು ಸ್ವಂತ ಸೂರು ಕಲ್ಪಿಸುವುದು ನನ್ನ ಕನಸಾಗಿತ್ತು. ಅದರಂತೆ ಬೊಮ್ಮನಕಟ್ಟೆ, ವಿರುಪಿನಕೊಪ್ಪ, ಗೋವಿಂದಪುರ, ಗೋಪಿಶೆಟ್ಟಿ ಕೊಪ್ಪ ಸೇರಿದಂತೆ ಅನೇಕ ಕಡೆ ಆಶ್ರಯ ಮನೆಗಳನ್ನು ನಿರ್ಮಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಸೋಮವಾರ ಗೋವಿಂದಪುರದಲ್ಲಿ ಮಹಾನಗರ ಪಾಲಿಕೆ ಮತ್ತು ಆಶ್ರಯ ಸಮಿತಿಯ ಆಶ್ರಯ ದಲ್ಲಿ ಜಿ+2 ಫ್ಲಾಟ್‌ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಕಡುಬಡತನದಲ್ಲಿರುವ ವೇಳೆ ನಮ್ಮ ತಾಯಿ ಒಂದು ಸ್ವಂತ ಮನೆ ಮಾಡಬೇಕೆಂದು ತಂದೆಯವರನ್ನು ಒತ್ತಾಯಿಸುತ್ತಿದ್ದರು. ಕೊನೆಗೆ ನಮ್ಮ ತಂದೆ ಸಾಲ ಮಾಡಿ ಮನೆ ಕಟ್ಟಿದರು. ಶಾಸಕನಾದ ಕೂಡಲೆ ಹೇಗಾದರೂ ಮಾಡಿ ಬಡವರಿಗೆ ಸರ್ಕಾರದಿಂದ ಸ್ವಂತ ಸೂರು ಕೊಡಿಸುವಂತಹ ಈ ಪ್ರಯತ್ನದ ಹಿಂದೆ ನನ್ನ ತಾಯಿಯವರ ಆಶಯ ಅಡಗಿದೆ. ಅದರಂತೆ ಶಿವಮೊಗ್ಗ ನಗರದ ಎಲ್ಲಾ ಬಡವರಿಗೂ ಸ್ವಂತ ಸೂರು ಒದಗಿಸಲು ಪ್ರಯತ್ನಿಸುತ್ತಿದ್ದೇನೆ. ಈಗಾಗಲೇ ಸಾವಿರಾರು ಮನೆಗಳನ್ನು ಬಡವರಿಗಾಗಿ ಕೊಡಿಸಿದ್ದೇನೆ ಎಂದರು.

ಈಗಾಗಲೇ ಗೋವಿಂದಪುರದಲ್ಲಿ ಸುಮಾರು 3 ಸಾವಿರ ಮನೆಗಳ ಸಮುಚ್ಚಯ ನಿರ್ಮಾಣವಾಗುತ್ತಿದ್ದು, ಅದರ ಫಲಾನುಭವಿಗಳಿಗೆ ಇಂದು ಮಾಡೆಲ್‌ ಹೌಸ್‌ಗಳನ್ನು ತೋರಿಸಲಾಗುತ್ತಿದ್ದು, ಕೇಂದ್ರ ರಾಜ್ಯ ಸರ್ಕಾರ ಮತ್ತು ಬ್ಯಾಂಕ್‌ಗಳ ಸಹಕಾರ ದೊಂದಿಗೆ ಮನೆಗಳ ನಿರ್ಮಾಣವಾಗುತ್ತಿದ್ದು, 3 ವರ್ಷಗಳಲ್ಲಿ ಮನೆ ಸಿಗಲಿದೆ ಎಂದರು.

ಇನ್ನು ಕೆಲವೇ ದಿನಗಳಲ್ಲಿ 1836 ಕ್ಕೂ ಹೆಚ್ಚು ಮನೆಗಳನ್ನು ನೀಡಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗುವುದು. ಶಿವಮೊಗ್ಗ ನಗರದಲ್ಲಿ ಈಗಾಗಲೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಅರ್ಜಿ ಸಲ್ಲಿಸುವಂತಿಲ್ಲ. ಯಾರು ಮನೆ, ನಿವೇಶನ ಹೊಂದಿಲ್ಲವೋ ಅವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಪ್ರಸ್ತುತ ನಿರ್ಮಾಣವಾಗುತ್ತಿರುವ ಅಪಾರ್ಟ್ಮೆಂಟ್‌ಗಳಲ್ಲಿ 2 ಬೆಡ್‌ ರೂಂ ಜೊತೆಗೆ ದೇವರ ಕೋಣೆ, ಅಡುಗೆ ಮನೆ ಸೇರಿದಂತೆ ಪಾರ್ಕ್‌, ಕುಡಿಯುವ ನೀರು, ಯುಜಿಡಿ ವ್ಯವಸ್ಥೆಯೂ ಇರಲಿದೆ. ಅಂಗವಿಕಲರಿಗೆ, ವಯಸ್ಸಾದವರಿಗೆ ಕೆಳ ಅಂತಸ್ತಿನಲ್ಲಿರುವ ಮನೆಗಳನ್ನು ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಮೇಯರ್‌ ಸುನಿತಾ ಅಣ್ಣಪ್ಪ, ಆಯುಕ್ತ ಚಿದಾನಂದ ವಠಾರೆ, ಉಪ ಮೇಯರ್‌ ಶಂಕರ್‌ ಗನ್ನಿ, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್‌, ಆಶ್ರಯ ಸಮಿತಿ ಅಧ್ಯಕ್ಷ ಎಚ್‌.ಶಶಿಧರ್‌ ಸೇರಿದಂತೆ ಹಲವರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.