ಉತ್ತರಾಖಂಡ : ಅರಣ್ಯ ಸಚಿವರ “ಕಾಡ್ಗಿಚ್ಚು ನಂದಿಸುವ’ ವಿಡಿಯೋ ವೈರಲ್!
Team Udayavani, Apr 6, 2021, 11:35 PM IST
ಡೆಹ್ರಾಡೂನ್: ಉತ್ತರಾಖಂಡದ ಹಲವು ಅರಣ್ಯಗಳಲ್ಲಿ ಕಾಡ್ಗಿಚ್ಚು ತೀವ್ರಗೊಂಡಿರುವ ನಡುವೆಯೇ ಇಲ್ಲಿನ ಅರಣ್ಯ ಸಚಿವ ಹರಾಕ್ ಸಿಂಗ್ ಅವರು ಬೆಂಕಿ ನಂದಿಸಲು ನಡೆಸಿದ “ಯತ್ನ’ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಪೌರಿ ಜಿಲ್ಲೆಯಲ್ಲಿ ಕಾಡು ಹೊತ್ತಿ ಉರಿಯುತ್ತಿರುವಾಗ, ಗಿಡವೊಂದನ್ನು ಹಿಡಿದು ಅದರ ಮೂಲಕ ಸಚಿವ ಸಿಂಗ್ ಅವರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. 30 ಸೆಕೆಂಡುಗಳ ಈ ವಿಡಿಯೋ ವೈರಲ್ ಆಗಿದ್ದು, ಹಲವರು ಸಚಿವರ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಇನ್ನೊಂದೆಡೆ, ರಾಜ್ಯದ ಹಲವೆಡೆ ಕಾಡ್ಗಿಚ್ಚು ಮಿತಿ ಮೀರುತ್ತಿದ್ದು, ಬೆಂಕಿ ನಂದಿಸಲು ಭಾರತೀಯ ವಾಯುಪಡೆ ಅವಿರತವಾಗಿ ಶ್ರಮಿಸುತ್ತಿದೆ. ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ ಒಂದು ಸಾವಿರದಷ್ಟು ಕಾಡ್ಗಿಚ್ಚು ಪ್ರಕರಣ ವರದಿಯಾಗಿದೆ. ಈ ಪೈಕಿ ಭಾನುವಾರ 45 ಕಡೆ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
— Lalmani Verma (@LalmaniVerma838) April 6, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!