115 ಗ್ರಾಪಂಗಳಿಗೆ ತ್ಯಾಜ್ಯ ಘಟಕ


Team Udayavani, Apr 7, 2021, 4:25 PM IST

115 ಗ್ರಾಪಂಗಳಿಗೆ ತ್ಯಾಜ್ಯ ಘಟಕ

ಕೊಪ್ಪಳ: ತ್ಯಾಜ್ಯ ಮುಕ್ತ ಗ್ರಾಮಗಳನ್ನಾಗಿಸಲು ಜಿಲ್ಲಾಡಳಿತವು ಸ್ವಚ್ಛ ಭಾರತ್‌ ಮಿಷನ್‌ನಡಿ 115 ಗ್ರಾಪಂನಲ್ಲಿ ಮೊದಲ ಬಾರಿಗೆ ಘನತ್ಯಾಜ್ಯ ನಿರ್ವಹಣಾ ಘಟಕಗಳ ಆರಂಭಕ್ಕೆಮುಂದಾಗಿದೆ. ಈಗಾಗಲೇ ಹೊಸಳ್ಳಿ ಬಳಿಯ ಬಹುಗ್ರಾಮ ತ್ಯಾಜ್ಯ ವಿಲೇವಾರಿ ಘಟಕದ ಮಾದರಿಯಲ್ಲೇ ಸಣ್ಣ ಪ್ರಮಾಣದಲ್ಲಾದರೂ ಘಟಕ ಆರಂಭಿಸಿ ಮನೆ ಮನೆ ಕಸ ಸಂಗ್ರಹಣೆಗೂ ಯೋಜಿಸಲಾಗಿದೆ.

ಹೌದು.. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಇತ್ತೀಚಿಗೆ ತ್ಯಾಜ್ಯ ಮುಕ್ತ ನಗರಗಳನ್ನಾಗಿಮಾಡಲು ಹಲವು ಯೋಜನೆಗಳನ್ನು ರೂಪಿಸುತ್ತಿದೆ. ನಗರಗಳು ಸ್ವತ್ಛಂದವಾಗಿದ್ದರೆ ನೈರ್ಮಲಿಕರಣ, ಆರೋಗ್ಯ ಪೂರಕ ವಾತಾವರಣ ನಿರ್ಮಾಣವಾಗಲಿದೆ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಜನರಲ್ಲಿಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿನ ನಗರಸಭೆ,ಪುರಸಭೆ, ಪಪಂಗಳ ವ್ಯಾಪ್ತಿಯಲ್ಲಿ ಈಗಾಗಲೇ ಘನತ್ಯಾಜ್ಯ ವಿಲೇವಾರಿ ಘಟಕಗಳುಕಾರ್ಯ ನಿರ್ವಹಿಸುತ್ತಿವೆ. ನಗರದಿಂದ ಉತ್ಪತ್ತಿಯಾಗುವ ಕಸಗಳನ್ನು ಬೇರ್ಪಡಿಸುವ ಕೆಲಸವೂ ನಡೆಯುತ್ತಿದೆ. ಆದರೆ ಗ್ರಾಮೀಣ ಭಾಗದಲ್ಲಿ ಇಂತಹ ವ್ಯವಸ್ಥೆ ಇಲ್ಲ. ತಾಲೂಕಿನ ಹೊಸಳ್ಳಿ ಬಳಿಯ ಬಹುಗ್ರಾಮ ಘನ ತ್ಯಾಜ್ಯವಿಲೇವಾರಿ ಘಟಕ ಹೊರತುಪಡಿಸಿದರೆ ಯಾವುದೇ ಗ್ರಾಪಂನಲ್ಲಿ ಘಟಕ ಇಲ್ಲ.

ಹಾಗಾಗಿ ಗ್ರಾಮೀಣ ಜನತೆ ಎಲ್ಲೆಂದರಲ್ಲಿ ಕಸ ಹಾಕುವುದು, ತ್ಯಾಜ್ಯ ಬಿಸಾಡುವುದು.ಮನೆ ಮುಂದೆ ತಿಪ್ಪೆ ಹಾಕಿಕೊಳ್ಳುತ್ತಾರೆ. ಇದರಿಂದಲೇ ಗ್ರಾಮದ ನೈರ್ಮಲ್ಯ ಹಾಳಾಗಿ ರೋಗ ರುಜಿನಕ್ಕೂ ಕಾರಣವಾಗುತ್ತಿದೆ.ಇದನ್ನು ತಪ್ಪಿಸಲು ಹಾಗೂ ಜನರಲ್ಲಿ ಕಸದಿಂದ ಭವಿಷ್ಯದಲ್ಲಾಗುವ ದುಷ್ಪರಿಣಾಮಗಳಕುರಿತು ಜಾಗೃತಿ ಮೂಡಿಸಲು ಪ್ರತಿಗ್ರಾಮ ಪಂಚಾಯಿತಿಯಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲು ಯೋಜನೆರೂಪಿಸಿದೆ. ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತಿಗಳಿದ್ದು, ಈ ಪೈಕಿ 115 ಗ್ರಾಮಪಂಚಾಯಿತಿಗಳಲ್ಲಿ ಘಟಕ ಆರಂಭಕ್ಕೆ ಜಿಲ್ಲಾಡಳಿತ ಅಸ್ತು ಎಂದಿದೆ.

ಗ್ರಾಪಂ ವ್ಯಾಪ್ತಿಯ ಎರಡ್ಮೂರು ಹಳ್ಳಿಗಳ ಮಧ್ಯೆ ಬರುವ ಸರ್ಕಾರಿ ಜಮೀನು,ಕಂದಾಯ, ಗಾಯರಾಣ, ಗಾವಠಾಣ ಜಾಗದಲ್ಲಿ ಘಟಕ ಆರಂಭಿಸಲು ಮುಂದಾಗಿಈಗಾಗಲೇ ಸ್ಥಳ ಗುರುತು ಮಾಡಿದೆ. ಅಲ್ಲಿ ಸ್ವಚ್ಛ ಭಾರತ ಮಿಷನ್‌ನಡಿ ಗ್ರಾಪಂ ವ್ಯಾಪ್ತಿಯ ಜನಸಂಖ್ಯೆಯ ಆಧಾರದ ಮೇಲೆ ಅನುದಾನ ಬಿಡುಗಡೆ ಮಾಡಿ ಘಟಕಕ್ಕೆ ಬೇಕಾದ ಸೌಲಭ್ಯ ಒದಗಿಸಲು ಜಿಪಂ ಮುಂದಾಗಿದೆ.

ಉಳಿಕೆ ಅನುದಾನವನ್ನು ಉದ್ಯೋಗ ಖಾತ್ರಿಯೋಜನೆಯಡಿ ಕಸ ಬೇರ್ಪಡಿಸುವ ತೊಟ್ಟಿನಿರ್ಮಾಣಕ್ಕೆ, ಶೆಡ್‌ಗಳ ನಿರ್ಮಾಣ ಸೇರಿ ಇತರೆ ಘಟಕಕ್ಕೆ ಬೇಕಾದ ವ್ಯವಸ್ಥೆ ಕೈಗೊಳ್ಳಲೂ 115 ಗ್ರಾಪಂಗಳ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ.

ಟ್ರ್ಯಾಕ್ಟರ್, ಮಿನಿ ಟಿಪ್ಪರ್ ಖರೀದಿ:

ಎಸ್‌ಬಿಎಂನ ಅನುದಾನ ಹಾಗೂ ಗ್ರಾಪಂ ಸ್ಥಳೀಯ ಅನುದಾನದಲ್ಲಿ ಮನೆ ಮನೆಗೆಕಸ ಸಂಗ್ರಹಿಸುವ ವಾಹನ ಖರೀದಿಸಲು ಜಿಪಂ ಯೋಜನೆ ರೂಪಿಸಿದೆ. ಅತಿ ಹೆಚ್ಚು ಜನಸಂಖ್ಯೆ ಇರುವ ಗ್ರಾಪಂನಲ್ಲಿ ಟ್ರ್ಯಾಕ್ಟರ್‌ ಕಡಿಮೆ ಜನಸಂಖ್ಯೆ ಇರುವ ಗ್ರಾಪಂನಲ್ಲಿ ಮಿನಿ ಟಿಪ್ಪರ್‌ ಸೇರಿ ಹೀಗೆ ಅಗತ್ಯಕ್ಕೆ ತಕ್ಕಂತೆ ವಾಹನ ಖರೀದಿಸಿ ಕಸ ಸಂಗ್ರಹಣೆ ಮಾಡಿ ತ್ಯಾಜ್ಯ ಘಟಕದಲ್ಲಿ ಕಸವನ್ನು ಇರಿಸಿಅದನ್ನು ಬೇರ್ಪಡಿಸಿ ಅದರಿಂದ ಬರುವಗೊಬ್ಬರವನ್ನು ಸ್ಥಳೀಯವಾಗಿಯೇ ರೈತರಿಗೆಪೂರೈಕೆ ಮಾಡಿ ಆಯಾ ಗ್ರಾಪಂಗಳೇ ಘಟಕದ ನಿರ್ವಹಣೆಯ ಜವಾಬ್ದಾರಿ ನೋಡಿಕೊಳ್ಳುವ ಹೊಣೆ ನೀಡಲಾಗಿದೆ.

ಈಗಾಗಲೇ ತಾಲೂಕಿನ ಹೊಸಳ್ಳಿ ಬಳಿ ಬಹುಗ್ರಾಮ ಘನತ್ಯಾಜ್ಯ ವಿಲೇವಾರಿಘಟಕವು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು,ಹಲವು ಜಿಲ್ಲೆಗಳ ಜಿಪಂ, ತಾಪಂ ಹಾಗೂಗ್ರಾಪಂ ಸದಸ್ಯರು ಈ ಘಟಕ್ಕೆ ಭೇಟಿ ನೀಡಿಇಲ್ಲಿನ ವ್ಯವಸ್ಥೆ, ನಿರ್ವಹಣೆಯ ವಿಧಾನ ಹಾಗೂ ಕಸ ಬೇರ್ಪಡಿಸುವ ವಿಧಾನವನ್ನು ಅರಿತು ತಮ್ಮ ತಮ್ಮ ಜಿಲ್ಲೆಗಳಲ್ಲಿ ಈ ಮಾದರಿಯನ್ನು ಅನುಕರಣೆ ಮಾಡುತ್ತಿದ್ದು,ಕೊಪ್ಪಳ ಜಿಲ್ಲೆಯೂ ಉಳಿದ ಗ್ರಾಪಂನಲ್ಲಿಇಂತಹ ಘನತ್ಯಾಜ್ಯ ವಿಲೇವಾರಿ ಘಟಕಆರಂಭಕ್ಕೆ ಅಸ್ತು ಎಂದಿರುವುದು ಗಮನಾರ್ಹ ವಿಷಯವಾಗಿದೆ.

ಪ್ರತಿ ಹಳ್ಳಿಗಳು ಸ್ವಚ್ಛವಾಗಿದ್ದರೆ ರೋಗರುಜಿನ ನಿಯಂತ್ರಣಕ್ಕೆ ಬರಲಿವೆ. ಜಿಪಂಅಂದುಕೊಂಡಂತೆ ಗ್ರಾಪಂನ ತ್ಯಾಜ್ಯನಿರ್ವಹಣಾ ಘಟಕದ ಮೇಲೆ ನಿಗಾಇರಿಸಿದರೆ ಮಾತ್ರ ಘಟಕಗಳು ತಲೆ ಎತ್ತಲಿವೆ.ಇಲ್ಲದಿದ್ದರೆ ಹಳ್ಳಿಗಳು ಮತ್ತೆ ಕಸದಿಂದ ಗಬ್ಬೆದ್ದು ನಾರಲಿವೆ.

ಜಿಲ್ಲೆಯ 115 ಗ್ರಾಪಂಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಕ್ಕೆ ಜಿಪಂನಿಂದ ಅನುಮತಿ ನೀಡಲಾಗಿದೆ. ಸರ್ಕಾರಿ ಜಮೀನಿನಲ್ಲಿ ಘಟಕ ಆರಂಭಿಸಲಾಗುವುದು.ಎಸ್‌ಬಿಎಂ ಅನುದಾನದಲ್ಲಿ ಘಟಕಕ್ಕೆ ಬೇಕಾದ ಸೌಲಭ್ಯ ಕಲ್ಪಿಸುವ ವ್ಯವಸ್ಥೆಮಾಡಲಾಗುವುದು. ಕಸ ಸಂಗ್ರಹಣೆಗೆ ಮಿನಿ ವಾಹನಖರೀದಿಸಲು ಸೂಚಿಸಲಾಗಿದೆ.ಉಳಿದ ಗ್ರಾಪಂನಲ್ಲಿ 2-3 ಗ್ರಾಪಂನಲ್ಲಿ ಕ್ಲಸ್ಟರ್‌ ಮಾಡಿ ಜಾಗದ ವ್ಯವಸ್ಥೆ ಮಾಡಿ ಘಟಕ ಆರಂಭಕ್ಕೆ ಒತ್ತು ನೀಡಲಾಗುವುದು.ಟಿ. ಕೃಷ್ಣಮೂರ್ತಿ, ಜಿಪಂ ಯೋಜನಾ ನಿರ್ದೇಶಕರು, ಕೊಪ್ಪಳ

 

ದತ್ತು ಕಮ್ಮಾರ

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.