ಮಸ್ಕಿ ಅಖಾಡ: ಪ್ರತಿಷ್ಠೆ ಕಣಕ್ಕಿಟ್ಟ ನಾಯಕರು

ಚಾಣಕ್ಯ' ಸ್ಥಾನ ಗಟ್ಟಿಸಿಕೊಳ್ಳಬೇಕಿರುವ ವಿಜಯೇಂದ್ರ ಹೀಗೆ ಎಲ್ಲರಿಗೂ ಒಂದೊಂದು ಧ್ಯೇಯೋದ್ದೇಶ ಕಂಡು ಬರುತ್ತಿದೆ.

Team Udayavani, Apr 7, 2021, 6:50 PM IST

BJP-Congress

ರಾಯಚೂರು: ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಕಾಂಗ್ರೆಸ್‌  ಬಿಜೆಪಿಯ ಕೆಲ ಘಟಾನುಘಟಿ ನಾಯಕರ ಪ್ರತಿಷ್ಠೆಗೆ
ಕಾರಣವಾಗಿದ್ದು, ಪ್ರಚಾರದ ಅಬ್ಬರ ಜೋರಾಗಿದೆ. ಗೆದ್ದು ಅಸ್ತಿತ್ವ ಸಾಬೀತು ಮಾಡುವ ನಿಟ್ಟಿನಲ್ಲಿ ಉಭಯ ಪಕ್ಷಗಳ ನಾಯಕರು ಪೈಪೋಟಿಯಲ್ಲಿ ಪ್ರಚಾರ
ನಡೆಸುತ್ತಿದ್ದಾರೆ.

ಈ ಚುನಾವಣೆಯಲ್ಲಿ ಉಭಯ ಪಕ್ಷಗಳಿಗೆ ಸೋಲು, ಗೆಲುವಿನಿಂದ ಹೆಚ್ಚೇನು ನಷ್ಟವಾಗಲಿಕ್ಕಿಲ್ಲ. ಬಿಜೆಪಿ ಪೂರ್ಣ ಸಂಖ್ಯಾಬಲದೊಂದಿಗೆ ಸರ್ಕಾರ ನಡೆಸುತ್ತಿದ್ದರೆ,
ವಿಪಕ್ಷದಲ್ಲಿರುವ ಕಾಂಗ್ರೆಸ್‌ಗೆ ಗೆದ್ದರೂ ಸೋತರೂ ವಿಪಕ್ಷ ಸ್ಥಾನವೇ ಗಟ್ಟಿ. ಆದರೆ, ಚುನಾವಣೆ ಉಸ್ತುವಾರಿ ಹೊತ್ತಿರುವ ಮುಖಂಡರು ಮಾತ್ರ ತಮ್ಮ ಛಾಪು
ಮೂಡಿಸಿ ಪ್ರಾಬಲ್ಯ ಪ್ರದರ್ಶಿಸಲು ಅಸ್ತ್ರವಾದಂತಿದೆ. ಈಗಾಗಲೇ ಬಿಜೆಪಿಗೆ ನೆಲೆ ಇಲ್ಲದ ಕೆ.ಆರ್‌.ಪೇಟೆಯಲ್ಲೂ ಕಮಲ ಅರಳಿಸುವ ಮೂಲಕ ಗಮನ ಸೆಳೆದ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಕ್ಷೇತ್ರದಲ್ಲೇ ಬಿಡಾರ ಹೂಡಿದ್ದಾರೆ.

ಮಸ್ಕಿಯಲ್ಲೂ ಪಕ್ಷದ ಬಾವುಟ ಹಾರಿಸುವ ಓಡಾಟ ನಡೆಸಿದ್ದಾರೆ. ಎಸ್‌ಟಿ ಮತ ಸೆಳೆಯುವ ಜತೆಗೆ ಈ ಭಾಗದಲ್ಲಿ ತಮ್ಮ ಅಸ್ತಿತ್ವ ತೋರಲು ಶ್ರೀರಾಮುಲು ಕೂಡಾ ‌ಹೆಣಗಾಡುತ್ತಿದ್ದಾರೆ. ಅತ್ತ ಕಾಂಗ್ರೆಸ್‌ನಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಕೂಡ ಭರ್ಜರಿ ಪ್ರಚಾರ ನಡೆಸಿದ್ದು, ಶತಾಯ ಗತಾಯ ಗೆಲುವಿನ ದಡ ಸೇರುವ ತವಕದಲ್ಲಿದ್ದಾರೆ.

ರಾಜಕೀಯ ಅಸ್ತಿತ್ವ ಪ್ರಶ್ನೆ: ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಿಗೆ ಮಾತ್ರ ಅವರ ಬೆನ್ನಿಗೆ ನಿಂತಿರುವ ನಾಯಕರಿಗೂ ರಾಜಕೀಯ ಅಸ್ತಿತ್ವದ ಪ್ರಶ್ನೆಯಾಗಿದೆ. ಪ್ರಚಾರ ನಡೆಸಿ ಪಕ್ಷ ಗೆಲ್ಲಿಸುವ ಮೂಲಕ ತಮ್ಮ ವೈಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳುವಲ್ಲಿಯೂ ನಾಯಕರ ನಡೆ ಕಂಡು ಬರುತ್ತಿದೆ. ಮತ್ತೂಮ್ಮೆ ಸಿಎಂ ಕನಸು ಕಾಣುತ್ತಿರುವ ಸಿದ್ದರಾಮಯ್ಯ, ಮುಂದಿನ ಸಿಎಂ ಎಂದು  ಬಿಂಬಿಸಿಕೊಳ್ಳುತ್ತಿರುವ ಡಿ.ಕೆ. ಶಿವಕುಮಾರ, ಡಿಸಿಎಂ ಹುದ್ದೆ ತಪ್ಪಿಸಿಕೊಂಡ ಶ್ರೀರಾಮುಲು, “ಚುನಾವಣೆ
ಚಾಣಕ್ಯ’ ಸ್ಥಾನ ಗಟ್ಟಿಸಿಕೊಳ್ಳಬೇಕಿರುವ ವಿಜಯೇಂದ್ರ ಹೀಗೆ ಎಲ್ಲರಿಗೂ ಒಂದೊಂದು ಧ್ಯೇಯೋದ್ದೇಶ ಕಂಡು ಬರುತ್ತಿದೆ.

ಹೈಕಮಾಂಡ್‌ಗೆ ಸಂದೇಶ: ಮಸ್ಕಿ ಉಪ ಚುನಾವಣೆ ಫಲಿತಾಂಶ ಮೇಲೆ ಹೈಕಮಾಂಡ್‌ ಚಿತ್ತವೂ ಇದೇ ಎನ್ನುತ್ತವೆ ಪಕ್ಷದ ಮೂಲಗಳು. ಆಪರೇಶನ್‌ ಕಮಲದ
ಮೊದಲ ವಿಕೆಟ್‌ ಪ್ರತಾಪಗೌಡ ಪಾಟೀಲರ ಸೋಲು ಕಾಂಗ್ರೆಸ್‌ಗೆ ದೊಡ್ಡ ಪ್ರತೀಕಾರವಾದರೆ, ಸರ್ಕಾರ ಆಡಳಿತಕ್ಕೆ ಬರಲು ನೆರವಾದ ಅವರ ಗೆಲುವು ಬಿಜೆಪಿಗೂ
ಅಷ್ಟೇ ಪ್ರಾಮುಖ್ಯತೆ ಪಡೆದಿದೆ. ಹೈಕಮಾಂಡ್‌ ಗಮನ ಸೆಳೆದ ಪ್ರತಾಪಗೌಡರು ಈಗ ಸೋತರೂ ಗೆದ್ದರೂ ಮತ್ತೂಮ್ಮೆ ಹೈಕಮಾಂಡ್‌ ಗಮನ ಸೆಳೆಯಬಹುದು
ಎಂದು ವಿಶ್ಲೇಷಿಸಲಾಗುತ್ತದೆ.

*ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.